AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್

ಅಪರಾಧ ಪ್ರಕರಣವೊಂದರಲ್ಲಿ ಜಾಮೀನು ಕೋರಿದ್ದ ಅಪರಾಧಿಯ ಕುರಿತು ಅಭಿಪ್ರಾಯ ಕೇಳಲು ಹೈಕೋರ್ಟ್​ ನ್ಯಾಯಾಧೀಶರು ಚಾಟ್​ಜಿಪಿಟಿ ಬಳಸಿದ್ದಾರೆ. ಭಾರತದಲ್ಲಿ ಕ್ರಿಮಿನಲ್ ಪ್ರಕರಣವೊಂದರಲ್ಲಿ ಚಾಟ್​​ಜಿಪಿಟಿ ಬಳಸಿರುವುದು ಇದೇ ಮೊದಲು.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್
ಚಾಟ್​ಜಿಪಿಟಿ
Follow us
ಕಿರಣ್​ ಐಜಿ
|

Updated on:Mar 29, 2023 | 1:01 PM

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅಪರಾಧಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭ ನ್ಯಾಯಾಧೀಶ ಅನೂಪ್ ಚಿತ್ಕಾರ ಅವರು ನೇತೃತ್ವ ವಹಿಸಿದ್ದ ಪೀಠ, ಅಪರಾಧಿಯ ಕೋರಿಕೆ ಕುರಿತು ಚಾಟ್​ಜಿಪಿಟಿ(ChatGPT) ಅಭಿಪ್ರಾಯ ಕೇಳಿದ್ದಾರೆ.

2020ರ ಜೂನ್​ನಲ್ಲಿ ನಡೆದಿದ್ದ ದಂಗೆ, ಕೊಲೆ, ಗಲಭೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅಪರಾಧಿಯ ಅರ್ಜಿ ಕುರಿತು ವಿಚಾರಣೆ ನಡೆಸುವಾಗ, ಚಾಟ್​​ಜಿಪಿಟಿ ಬಳಸಲಾಗಿದೆ. ಅಪರಾಧಿಯ ಕೃತ್ಯ, ವಿಧಿಸಲಾದ ಶಿಕ್ಷೆಯ ಪ್ರಮಾಣವನ್ನು ನಮೂದಿಸಿ, ಜಾಮೀನು ಅರ್ಜಿ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ಕೇಳಲಾಗಿದೆ. ನ್ಯಾಯಾಲಯದ ಮಿತಿಯಲ್ಲಿ ಮತ್ತು ಶಿಕ್ಷೆಯ ಪ್ರಮಾಣದ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ನೀಡಿದೆ.

ಕೊಲೆ, ಹಿಂಸೆ, ಗಲಭೆಯಂತಹ ಕೃತ್ಯದಲ್ಲಿ ಪಾಲ್ಗೊಂಡಿರುವುದರಿಂದ ನ್ಯಾಯಾಲಯ, ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು ಮತ್ತು ನ್ಯಾಯಾಧೀಶರು ಕ್ರಮ ಕೈಗೊಳ್ಳಬೇಕು ಎಂದು ಚಾಟ್​ಜಿಪಿಟಿ ಹೇಳಿದೆ.

ಅಭಿಪ್ರಾಯ ಕೇಳಲು ಮಾತ್ರ ಚಾಟ್ ಜಿಪಿಟಿ ಬಳಸಲಾಗಿದೆ. ಉಳಿದಂತೆ ನ್ಯಾಯಾಲಯವು, ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತದೆ ಎಂದು ಪೀಠ ಹೇಳಿದೆ. ಬಳಿಕ, ಈ ಪ್ರಕರಣದಲ್ಲಿ ಅಪರಾಧಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Wed, 29 March 23

ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್