AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್

ಅಪರಾಧ ಪ್ರಕರಣವೊಂದರಲ್ಲಿ ಜಾಮೀನು ಕೋರಿದ್ದ ಅಪರಾಧಿಯ ಕುರಿತು ಅಭಿಪ್ರಾಯ ಕೇಳಲು ಹೈಕೋರ್ಟ್​ ನ್ಯಾಯಾಧೀಶರು ಚಾಟ್​ಜಿಪಿಟಿ ಬಳಸಿದ್ದಾರೆ. ಭಾರತದಲ್ಲಿ ಕ್ರಿಮಿನಲ್ ಪ್ರಕರಣವೊಂದರಲ್ಲಿ ಚಾಟ್​​ಜಿಪಿಟಿ ಬಳಸಿರುವುದು ಇದೇ ಮೊದಲು.

ChatGPT: ಅಪರಾಧ ಪ್ರಕರಣದಲ್ಲಿ ಅಭಿಪ್ರಾಯ ಕೇಳಲು ಚಾಟ್​ಜಿಪಿಟಿ ಬಳಸಿದ ಹೈಕೋರ್ಟ್
ಚಾಟ್​ಜಿಪಿಟಿ
ಕಿರಣ್​ ಐಜಿ
|

Updated on:Mar 29, 2023 | 1:01 PM

Share

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅಪರಾಧಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭ ನ್ಯಾಯಾಧೀಶ ಅನೂಪ್ ಚಿತ್ಕಾರ ಅವರು ನೇತೃತ್ವ ವಹಿಸಿದ್ದ ಪೀಠ, ಅಪರಾಧಿಯ ಕೋರಿಕೆ ಕುರಿತು ಚಾಟ್​ಜಿಪಿಟಿ(ChatGPT) ಅಭಿಪ್ರಾಯ ಕೇಳಿದ್ದಾರೆ.

2020ರ ಜೂನ್​ನಲ್ಲಿ ನಡೆದಿದ್ದ ದಂಗೆ, ಕೊಲೆ, ಗಲಭೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅಪರಾಧಿಯ ಅರ್ಜಿ ಕುರಿತು ವಿಚಾರಣೆ ನಡೆಸುವಾಗ, ಚಾಟ್​​ಜಿಪಿಟಿ ಬಳಸಲಾಗಿದೆ. ಅಪರಾಧಿಯ ಕೃತ್ಯ, ವಿಧಿಸಲಾದ ಶಿಕ್ಷೆಯ ಪ್ರಮಾಣವನ್ನು ನಮೂದಿಸಿ, ಜಾಮೀನು ಅರ್ಜಿ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ಕೇಳಲಾಗಿದೆ. ನ್ಯಾಯಾಲಯದ ಮಿತಿಯಲ್ಲಿ ಮತ್ತು ಶಿಕ್ಷೆಯ ಪ್ರಮಾಣದ ಕುರಿತು ಚಾಟ್​ಜಿಪಿಟಿ ಅಭಿಪ್ರಾಯ ನೀಡಿದೆ.

ಕೊಲೆ, ಹಿಂಸೆ, ಗಲಭೆಯಂತಹ ಕೃತ್ಯದಲ್ಲಿ ಪಾಲ್ಗೊಂಡಿರುವುದರಿಂದ ನ್ಯಾಯಾಲಯ, ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು ಮತ್ತು ನ್ಯಾಯಾಧೀಶರು ಕ್ರಮ ಕೈಗೊಳ್ಳಬೇಕು ಎಂದು ಚಾಟ್​ಜಿಪಿಟಿ ಹೇಳಿದೆ.

ಅಭಿಪ್ರಾಯ ಕೇಳಲು ಮಾತ್ರ ಚಾಟ್ ಜಿಪಿಟಿ ಬಳಸಲಾಗಿದೆ. ಉಳಿದಂತೆ ನ್ಯಾಯಾಲಯವು, ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತದೆ ಎಂದು ಪೀಠ ಹೇಳಿದೆ. ಬಳಿಕ, ಈ ಪ್ರಕರಣದಲ್ಲಿ ಅಪರಾಧಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Wed, 29 March 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್