AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

ಕೇಂದ್ರ ಗೃಹ ಸಚಿವಾಲಯವು 'ಡಿಜಿಟಲ್ ಅರೆಸ್ಟ್' ವಂಚನೆ ನಿಯಂತ್ರಿಸಲು ವಾಟ್ಸಾಪ್‌ಗೆ ಮಹತ್ವದ ನಿರ್ದೇಶನ ನೀಡಿದೆ. ವಂಚಕರ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು, ಅಕೌಂಟ್‌ಗಳನ್ನು ಸಿಮ್‌ಗೆ ಲಿಂಕ್ ಮಾಡುವುದು, ಮತ್ತು ಫೇಕ್ ಪ್ರೊಫೈಲ್‌ಗಳನ್ನು ಪತ್ತೆಹಚ್ಚಲು ಎಐ ಬಳಸುವಂತೆ ಸೂಚಿಸಿದೆ. 2024ರಲ್ಲಿ 1.23 ಲಕ್ಷ ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ₹1935 ಕೋಟಿ ನಷ್ಟವಾಗಿದೆ. ವಂಚನೆ ತಡೆಗಟ್ಟಲು ಈ ಕ್ರಮಗಳು ಅತಿ ಮುಖ್ಯವಾಗಿವೆ.

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 21, 2026 | 1:07 PM

Share

ದೆಹಲಿ, ಮಾ.21: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಲಾಗಿದೆ. ವಂಚನೆ ಎಸಗುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣ, ಅವರು ಬಳಸುವ ಮೊಬೈಲ್‌ನ ಡಿವೈಸ್ ಐಡಿಯನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಮತ್ತೊಂದು ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ.

ಐಟಿ ನಿಯಮಗಳ ಪ್ರಕಾರ, ಡಿಲೀಟ್ ಆದ ಅಕೌಂಟ್‌ಗಳ ಮಾಹಿತಿಯನ್ನು ಕನಿಷ್ಠ 180 ದಿನಗಳ ಕಾಲ ಉಳಿಸಿಕೊಳ್ಳಬೇಕು. ಇದು ತನಿಖಾ ಸಂಸ್ಥೆಗಳಿಗೆ ಪುರಾವೆ ಸಂಗ್ರಹಿಸಲು ನೆರವಾಗಲಿದೆ.ವಾಟ್ಸಾಪ್ ಅಕೌಂಟ್‌ಗಳನ್ನು ಸಕ್ರಿಯ ಮೊಬೈಲ್ ಸಿಮ್‌ಗೆ ಕಡ್ಡಾಯವಾಗಿ ಲಿಂಕ್ ಮಾಡಬೇಕು. ಅನಾಮಧೇಯವಾಗಿ ವಾಟ್ಸಾಪ್ ಬಳಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದ್ದು, 4 ರಿಂದ 6 ತಿಂಗಳಲ್ಲಿ ಇದು ಜಾರಿಯಾಗಲಿದೆ.

ಪೊಲೀಸ್ ಅಥವಾ ಸಿಬಿಐ ಲೋಗೋಗಳನ್ನು ಪ್ರೊಫೈಲ್ ಪಿಕ್ಚರ್ ಆಗಿ ಬಳಸಿ ಜನರನ್ನು ಹೆದರಿಸುವ ವಂಚಕರನ್ನು ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಬಳಸಲಾಗುವುದು. ಅಂತಹ ಫೇಕ್ ಪ್ರೊಫೈಲ್‌ಗಳನ್ನು ತಕ್ಷಣವೇ ಡಿಲೀಟ್ ಮಾಡಲು ವಾಟ್ಸಾಪ್ ಒಪ್ಪಿಕೊಂಡಿದೆ. ಮ್ಯಾಲಿಶಿಯಸ್ ಎಪಿಕೆ (APK) ಫೈಲ್‌ಗಳ ವರ್ಗಾವಣೆಯನ್ನು ಪತ್ತೆಹಚ್ಚಿ ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಬಲಪಡಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ

2024ರಲ್ಲಿ ಭಾರತದಲ್ಲಿ ಸುಮಾರು 1.23 ಲಕ್ಷ ಡಿಜಿಟಲ್ ಅರೆಸ್ಟ್ ಪ್ರಕರಣಗಳು ವರದಿಯಾಗಿದ್ದು, ಜನರಿಂದ ಸುಮಾರು 1,935 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಒಟ್ಟಾರೆ ಡಿಜಿಟಲ್ ವಂಚನೆಗಳಿಂದ ದೇಶಕ್ಕೆ ಸುಮಾರು 3,000 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು