ಏರ್ಟೆಲ್ –ಜಿಯೋಗೆ ಶುರುವಾಗಿದೆ ನಡುಕ: ಬೆಜೋಸ್, ಎಲಾನ್ ಮಸ್ಕ್​ರಿಂದ ಭಾರತದಲ್ಲಿ ಸ್ಯಾಟ್ ಲೈಟ್ ಇಂಟರ್ನೆಟ್ ಸಂಪರ್ಕ

ಈಗಾಗಲೇ ಆಸ್ಟ್ರೇಲಿಯಾ, ಕೆನಡಾ, ಚಿಲಿ, ಇಂಗ್ಲೆಂಡ್ ಮತ್ತು ಅಮೆರಿಕ ಸಹಿತ 14 ವಿವಿಧ ರಾಷ್ಟ್ರಗಳಲ್ಲಿ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆ ಒದಗಿಸುತ್ತಿದೆ.

ಏರ್ಟೆಲ್ –ಜಿಯೋಗೆ ಶುರುವಾಗಿದೆ ನಡುಕ: ಬೆಜೋಸ್, ಎಲಾನ್ ಮಸ್ಕ್​ರಿಂದ ಭಾರತದಲ್ಲಿ ಸ್ಯಾಟ್ ಲೈಟ್ ಇಂಟರ್ನೆಟ್ ಸಂಪರ್ಕ
Musk, Bezos
Follow us
| Updated By: Vinay Bhat

Updated on: Oct 01, 2021 | 10:28 AM

ಭಾರತದ ಪ್ರಸಿದ್ಧ ಟೆಲಿಕಾಂ ಸಂಸ್ಥೆಗಳಾದ ಸುನಿಲ್ ಮಿಥಲ್ ಅವರ ಏರ್ಟೆಲ್ (Airtel) ಹಾಗೂ ಮುಖೇಶ್ ಅಂಬಾನಿ ಅವರ ಜಿಯೋಗೆ (Jio) ನಡುಕ ಶುರುವಾಗಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಾದ ಜೆಫ್ ಬೆಜೋಸ್ (Jeff Bezos) ಹಾಗೂ ಎಲಾನ್ ಮಸ್ಕ್ ಸ್ಯಾಟ್ (Elon Musk) ಲೈಟ್ ಆಧಾರಿತ ಇಂಟರ್ನೆಟ್ ಸಂಪರ್ಕವನ್ನು ಭಾರತದಲ್ಲಿ ನೀಡಲು ಮುಂದಾಗಿದೆ. ಈ ಬಗ್ಗೆ ಭಾರತದ ಸರ್ಕಾರಕ್ಕೆ ಪ್ರಸ್ತಾಪ‌ ಸಲ್ಲಿಸಿದ್ದಾರೆ. ತಂತ್ರಜ್ಞಾನ ಉದ್ಯಮಿ, ಟೆಸ್ಲಾ (Tesla) ಮತ್ತು ಸ್ಪೇಸ್‌ ಎಕ್ಸ್ ಕಂಪೆನಿಗಳ ಮಾಲಿಕ ಎಲಾನ್ ಮಸ್ಕ್ ಒಡೆತನನದ, ಉಪಗ್ರಹಗಳ ಗುಚ್ಚದ ಮೂಲಕ ಕುಗ್ರಾಮ ಅಥವಾ ಕಾಡಿನಂತಹ ಪ್ರದೇಶದಲ್ಲೂ ಅತಿವೇಗದ ಇಂಟರ್ನೆಟ್‌ ಸೇವೆ ನೀಡುವ ಸ್ಟಾರ್‌ಲಿಂಕ್‌ (Starlink) ಕಂಪನಿ ಶೀಘ್ರದಲ್ಲೇ ಭಾರತದಲ್ಲೂ ತನ್ನ ಸೇವೆ ಆರಂಭಿಸಲಿದೆ. ಜೊತೆಗೆ ಅಮೆಜಾನ್ ಕೂಡ ಭಾರತದಲ್ಲಿ ಇಂಟರ್ನೆಟ್ ಸಂಪರ್ಕ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಆಸ್ಟ್ರೇಲಿಯಾ, ಕೆನಡಾ, ಚಿಲಿ, ಇಂಗ್ಲೆಂಡ್ ಮತ್ತು ಅಮೆರಿಕ ಸಹಿತ 14 ವಿವಿಧ ರಾಷ್ಟ್ರಗಳಲ್ಲಿ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆ ಒದಗಿಸುತ್ತಿದೆ. ಮಿನಿ ಉಪಗ್ರಹ ಬಳಸಿಕೊಂಡು, ಅದರ ಮೂಲಕ ಹೆಚ್ಚಿನ ವ್ಯಾಪ್ತಿಯನ್ನು ತಲುಪುವ ಯೋಜನೆಯನ್ನು ಸ್ಪೇಸ್‌ಎಕ್ಸ್ ಸಮೂಹದ ಸ್ಟಾರ್‌ಲಿಂಕ್ ಹೊಂದಿದೆ. ಸದ್ಯ ಸ್ಟಾರ್‌ಲಿಂಕ್‌ ಕಂಪನಿಯು ಭಾರತದಲ್ಲಿ ಇಂಟರ್ನೆಟ್ ಸೇವೆ ನೀಡಲು ಅಗತ್ಯವಿರುವ ಸರ್ಕಾರಿ ಅನುಮತಿಗಳ ಕುರಿತು ಮಾಹಿತಿ ಪಡೆಯುತ್ತಿದೆ.

ಈಗಾಗಲೇ ಭಾರತದಲ್ಲಿ, ಅದರಲ್ಲೂ ನಮ್ಮ ಬೆಂಗಳುರಿನಲ್ಲಿ ಟೆಸ್ಲಾ ಕಾರುಗಳ ಮಾರಾಟಕ್ಕೆ ಯೋಜನೆ ಹಾಕಿಕೊಂಡಿರುವ ಎಲಾನ್ ಮಸ್ಕ್ ಇದೀಗ ಭಾರತದಲ್ಲಿ ಅತಿವೇಗದ ಇಂಟರ್ನೆಟ್ ಸೇವೆ ನೀಡುವ ಸ್ಟಾರ್‌ಲಿಂಕ್‌ ಕಂಪನಿ ಆರಂಭಕ್ಕೆ ತಯಾರಿ ನಡೆಸಿದ್ದಾರೆ. ಸಾಮಾನ್ಯ ಇಂಟರ್ನೆಟ್ ಸೇವೆ ನೀಡುವ ಟೆಲಿಕಾಂ ಕಂಪನಿಗಳು ತಲುಪದ ಕುಗ್ರಾಮ, ಕಾಡು ಅಥವಾ ಇನ್ನಿತರ ದುರ್ಗಮ ಪ್ರದೇಶಗಳಲ್ಲಿ ಉಪಗ್ರಹಗಳ ಗುಚ್ಚದ ಮೂಲಕ ಅಂತರಿಕ್ಷದಿಂದ ಅತಿವೇಗದ ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಅಮೆರಿಕ ಮುಂತಾದೆಡೆ ಸ್ಟಾರ್‌ಲಿಂಕ್‌ ಕಂಪನಿ ಪ್ರಾಯೋಗಿಕವಾಗಿ ಆರಂಭಿಸಿದ್ದು, ಈ ಸೇವೆಯನ್ನು ಜಗತ್ತಿನಾದ್ಯಂತ ವಿಸ್ತರಿಸಲು ಕಂಪೆನಿ ಉತ್ಸುಕವಾಗಿದೆ.

ಸ್ಟಾರ್ ಲಿಂಕ್ ಈಗಾಗಲೇ ವಿಶ್ವದಾದಂತ್ಯ ಸುಮಾರು ಲಕ್ಷ ಗ್ರಾಹಕರನ್ನ ಹೊಂದಿದೆ. ಆದರೆ ಸದ್ಯದ ಮಟ್ಟಿಗೆ ಇದು ವಿಧಿಸುತ್ತಿರುವ ಶುಲ್ಕ ಭಾರತೀಯ ಮಾರುಕಟ್ಟೆಯಲ್ಲಿ ಬಹಳ ಜನರಿಗೆ ಎಟುಕುವ ಸ್ಥಿತಿಯಲಿಲ್ಲ . ಇದರ ಸೇವೆ ಪಡೆಯಲು ಮೊದಲಿಗೆ 500 ಡಾಲರ್ ನೀಡಬೇಕಾಗುತ್ತದೆ. ಮತ್ತು ಮಾಸಿಕ 99 ಡಾಲರ್ ಹಣವನ್ನ ನೀಡಬೇಕಾಗುತ್ತದೆ. ಭಾರತೀಯ ರೂಪಾಯಿ ಲೆಕ್ಕದಲ್ಲಿ ಪ್ರಥಮವಾಗಿ 36ಸಾವಿರ ನಂತರ ಮಾಸಿಕ 7,400 ರೂಪಾಯಿ ನೀಡಬೇಕಾಗುತ್ತದೆ.

ಏನಿದು ಸ್ಟಾರ್‌ಲಿಂಕ್‌ ಇಂಟರ್ನೆಟ್‌:  ಸಾಮಾನ್ಯ ಇಂಟರ್ನೆಟ್‌ ಸೇವೆ ನೀಡುವ ಕಂಪನಿಗಳು ತಲುಪದ ಕುಗ್ರಾಮ, ಕಾಡು ಅಥವಾ ಇನ್ನಿತರ ದುರ್ಗಮ ಪ್ರದೇಶಗಳಲ್ಲಿ ಉಪಗ್ರಹಗಳ ಗುಚ್ಚದ ಮೂಲಕ ಅಂತರಿಕ್ಷದಿಂದ ಅತಿವೇಗದ ಇಂಟರ್ನೆಟ್‌ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಅಮೆರಿಕ ಮುಂತಾದೆಡೆ ಸ್ಟಾರ್‌ಲಿಂಕ್‌ ಕಂಪನಿ ಪ್ರಾಯೋಗಿಕವಾಗಿ ಆರಂಭಿಸಿದೆ. ಈಗಾಗಲೇ ಗ್ರಾಹಕರಿಗೆ ಇಂತಹ ಒಂದು ಲಕ್ಷ ಸಂಪರ್ಕಗಳನ್ನೂ ನೀಡಿದೆ. ಇದಕ್ಕಾಗಿ 2019ರಿಂದ ಆರಂಭಿಸಿ ಕಂಪನಿಯು ಈವರೆಗೆ 1700ಕ್ಕೂ ಹೆಚ್ಚು ಉಪಗ್ರಹಗಳನ್ನು ಹಾರಿಬಿಟ್ಟಿದೆ. ಒಟ್ಟು 30,000 ಉಪಗ್ರಹಗಳನ್ನು ಉಡಾವಣೆ ಮಾಡಿ, ಅಂತರಿಕ್ಷದಲ್ಲಿ ಅಲ್ಲಲ್ಲಿ ಉಪಗ್ರಹಗಳ ಗುಚ್ಚಗಳನ್ನು ನಿರ್ಮಿಸಿ, ಅವುಗಳಿಂದ ಇಡೀ ಜಗತ್ತಿಗೆ ಇಂಟರ್ನೆಟ್‌ ಸೇವೆ ನೀಡುವ ಉದ್ದೇಶವನ್ನು ಸ್ಟಾರ್‌ಲಿಂಕ್‌ ಹೊಂದಿದೆ.

Amazon Great Indian Festival 2021: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಸಿಗಲಿದೆ ಈ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು

Vivo X70 ProPlus, X70 Pro: ವಿವೋ ಕಂಪನಿಯಿಂದ ಬಂಪರ್ ಫೀಚರ್ಸ್​ನ ದುಬಾರಿಯ ಬೆಲೆಯ ಎರಡು ಹೊಸ ಸ್ಮಾರ್ಟ್​ಫೋನ್ ರಿಲೀಸ್

(Elon Musk and Jeff Bezos approached the Indian government with satellite-based internet connectivity)

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್