AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಾನ್ ಮಸ್ಕ್ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕಂದ ಶೇ. 57ರಷ್ಟು ಜನ, ಈ ಟ್ವಿಟ್ಟರ್ ಸಮೀಕ್ಷೆಯ ಒಳ ಮರ್ಮವೇನು?

ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ (Twitter) ಮುಖ್ಯಸ್ಥನ ಹುದ್ದೆಯಿಂದ ತೊರೆಯಲು ಎಲಾನ್​ ಮಾಸ್ಕ್ ಜನಾಭಿಪ್ರಾಯ ಸಂಗ್ರಹ ಮೂಲಕ ಸುಳಿವು ಕೊಟ್ಟರೆ?

ಎಲಾನ್ ಮಸ್ಕ್ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕಂದ ಶೇ. 57ರಷ್ಟು ಜನ, ಈ ಟ್ವಿಟ್ಟರ್ ಸಮೀಕ್ಷೆಯ ಒಳ ಮರ್ಮವೇನು?
ಎಲಾನ್ ಮಸ್ಕ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 19, 2022 | 10:45 PM

ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ (Twitter) ಖರೀದಿಸಿದ ಮೇಲೆ ಎಲಾನ್ ಮಸ್ಕ್ ಹೊಸ-ಹೊಸ ಫೀಚರ್​ಗಳನ್ನು ಪರಿಚಯಿಸುತ್ತಿದ್ದಾರೆ. ಅದರಲ್ಲೂ ಬ್ಲೂಟಿಕ್​ಗೆ ಶುಲ್ಕ ವಿಧಿಸಲು ಮುಂದಾಗಿರುವುದಕ್ಕೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಶೇಕಡ 57ರಷ್ಟು ಜನ ಟ್ವಿಟ್ಟರ್​ ಮುಖ್ಯಸ್ಥನ ಹುದ್ದೆಯಿಂದ ಎಲಾನ್ ಮಸ್ಕ್ ತೊರೆಯಬೇಕೆಂದು ಹೇಳಿದ್ದಾರೆ. ಈ ಮೂಲಕ ಎಲಾನ್ ಮಸ್ಕ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Twitter Gold Checkmark: ಟ್ವಿಟರ್​ನಲ್ಲಿ ಬ್ಲೂ ಜತೆಗೆ ಗ್ರೇ, ಗೋಲ್ಡ್ ಟಿಕ್; ಏನಿದರ ಒಳಮರ್ಮ? ಇಲ್ಲಿದೆ ನೋಡಿ

ನಾನು ಟ್ವಿಟ್ಟರ್​ ಮುಖ್ಯಸ್ಥನ ಹುದ್ದೆಯಿಂದ ಕೆಳಗಿಳಿಯಬೇಕೆ? ಎಂದು ಎಲಾನ್​ ಮಸ್ಕ್ ಪೋಲ್​ ಹಾಕಿ ಸಮೀಕ್ಷೆ ನಡೆಸಿದ್ದರು. ಇದಕ್ಕೆ ಶೇಕಡ 57ರಷ್ಟು ಜನ ಹೌದು ನೀವು ಟ್ವಿಟ್ಟರ್​ ಮುಖ್ಯಸ್ಥನ ಹುದ್ದೆಯಿಂದ ಕೆಳಗಿಳಿಯಬೇಕು ಎಂದಿದ್ದಾರೆ. ಪೋಲ್ ಹಾಕುವಾಗ ಸಮೀಕ್ಷೆಯಿಂದ ಬರುವ ರಿಸಲ್ಟ್​ಗೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದರು. ಇದೀಗ ಸಮೀಕ್ಷೆಯಲ್ಲಿ ಬಹಳಷ್ಟು ಜನ ಎಲಾನ್ ಮಸ್ಕ್​ ವಿರುದ್ಧವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲಾನ್ ಮಸ್ಕ್​ ತಮ್ಮ ಮಾತಿಗೆ ಬದ್ಧರಾಗಿ ಟ್ವಿಟ್ಟರ್​ ಮುಖ್ಯಸ್ಥಾನ ತೊರೆಯುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನು ಎಲಾನ್ ಮಸ್ಕ್ ಹಾಕಿದ್ದ ಪೋಲ್​ಗೆ ಇದುವರೆಗೆ 1.75 ಕೋಟಿ ಜನ ಪ್ರತಿಕ್ರಿಯಿಸಿ ತಮ್ಮ-ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. 1.75 ಕೋಟಿ ಜನರ ಪೈಕಿ ಅರ್ಧಕ್ಕಿಂತ ಹೆಚ್ಚು 57ರಷ್ಟು ಜನರು ಎಲಾನ್ ಮಸ್ಕ್​ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕೆಂದು ಹೇಳಿದ್ದಾರೆ. ಶೇ.43ರಷ್ಟು ಬಳಕೆದಾರರಿಂದ ಮಾತ್ರ ಬೇಡ ಎಂದಿದ್ದಾರೆ. ಹೀಗಾಗಿ ಎಲಾನ್ ಮಸ್ಕ್​ ಟ್ವಿಟ್ಟರ್​ ಮುಖ್ಯಸ್ಥನ ಹುದ್ದೆಯಿಂದ ಕೆಳಗಳಿಯುವವರೇ ಎನ್ನುವ ಪ್ರಶ್ನೆಗಳು ಮೂಡಿವೆ.  ಇನ್ನು ಹುದ್ದೆಯಿಂದ ತೊರೆಯಲು ಜನಾಭಿಪ್ರಾಯ ಸಂಗ್ರಹ ಮೂಲಕ ಸುಳಿವು ಕೊಟ್ಟರೆ? ಅಥವಾ ತಮ್ಮ ಜನಪ್ರಿಯತೆ ಎಷ್ಟಿದೆ ಎನ್ನುವುದನ್ನ ತಿಳಿಯಲು ಈ ರೀತಿ ಮಾಡಿದರೆ? ಎನ್ನುವ ಪ್ರಶ್ನೆಗಳು ಹುಟ್ಟು ಹಾಕಿವೆ.

ಒಟ್ಟಿನಲ್ಲಿ ಎಲಾನ್​ ಮಾಸ್ಕ್ ಅವರ ಪೋಲ್​ ಸಮೀಕ್ಷೆ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:03 pm, Mon, 19 December 22

ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ