AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್ ಬ್ಲೂಟಿಕ್​ಗೆ ಶುಲ್ಕ; ಭಾರತದ ಐಟಿ ಕಾನೂನಿನಡಿ ಅವಕಾಶ ಇದೆಯೇ?

ಟ್ವಿಟರ್​ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸಲು ನೆರವಾಗುವ ಬ್ಲೂಟಿಕ್ ಪಡೆಯಲು ಇನ್ನು ಮುಂದೆ 8 ಡಾಲರ್ ಶುಲ್ಕ ವಿಧಿಸುವ ಬಗ್ಗೆ ಮಾಲೀಕ ಎಲಾನ್ ಮಸ್ಕ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ರೀತಿಯ ಶುಲ್ಕ ವಿಧಿಸಲು ಭಾರತ ಐಟಿ ಕಾನೂನಿನ ಅಡಿಯಲ್ಲಿ ಅವಕಾಶ ಇದೆಯೇ? ಅಧಿಕಾರಿಗಳು ಏನು ಹೇಳುತ್ತಾರೆ ಎಂಬ ಮಾಹಿತಿ ಇಲ್ಲಿದೆ.

ಟ್ವಿಟರ್ ಬ್ಲೂಟಿಕ್​ಗೆ ಶುಲ್ಕ; ಭಾರತದ ಐಟಿ ಕಾನೂನಿನಡಿ ಅವಕಾಶ ಇದೆಯೇ?
ಟ್ವಿಟರ್
Follow us
TV9 Web
| Updated By: Ganapathi Sharma

Updated on: Nov 03, 2022 | 1:03 PM

ನವದೆಹಲಿ: ಟ್ವಿಟರ್​ನಲ್ಲಿ (Twitter) ಅಧಿಕೃತ ಖಾತೆಗಳನ್ನು ಗುರುತಿಸಲು ನೆರವಾಗುವ ಬ್ಲೂಟಿಕ್ ಪಡೆಯಲು ಇನ್ನು ಮುಂದೆ 8 ಡಾಲರ್ ಶುಲ್ಕ ವಿಧಿಸುವ ಬಗ್ಗೆ ಮಾಲೀಕ ಎಲಾನ್ ಮಸ್ಕ್ (Elon Musk) ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಸಾಮಾಜಿಕ ಮಾಧ್ಯಮಗಳು ಈ ರೀತಿಯ ಶುಲ್ಕ ವಿಧಿಸಲು ಭಾರತ ಐಟಿ ಕಾನೂನಿನ ಅಡಿಯಲ್ಲಿ ಅವಕಾಶ ಇದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಕೆಲವು ಸರ್ಕಾರಿ ಅಧಿಕಾರಿಗಳು ಈ ರೀತಿಯ ಶುಲ್ಕ ವಿಧಿಸಲು ಕಾನೂನಿನಡಿ ಅವಕಾಶ ಇಲ್ಲ ಎಂದರೆ, ಇನ್ನು ಕೆಲವು ಅಧಿಕಾರಿಗಳು, ಇದು ಕಂಪನಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದಿದ್ದಾರೆ.

ಸ್ವಯಂಪ್ರೇರಣೆಯಿಂದ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವ್ಯಕ್ತಿಯ ಖಾತೆಯನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ದೃಢೀಕರಿಸಬೇಕು ಎಂದು ನಾವು ಬಯಸುತ್ತೇವೆ. ಇದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತಿಗಳ ಗುರುತು ಕಂಡುಹಿಡಿಯುವುದು ಸುಲಭವಾಗಲಿದೆ ಎಂಬುದಾಗಿ ಕಳೆದ ವರ್ಷ ಐಟಿ ಕಾನೂನಿಗೆ ಮಾಡಲಾದ ತಿದ್ದುಪಡಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಆದಾಗ್ಯೂ ಈ ಸೇವೆಗೆ ಶುಲ್ಕ ವಿಧಿಸಬಹುದೇ ಅಥವಾ ಚಂದಾದಾರಿಕೆ ಪಡೆಯುವಂತೆ ಮಾಡಬಹುದೇ ಎಂಬುದನ್ನು ಉಲ್ಲೇಖಿಸಿಲ್ಲ.

ಫೇಸ್​ಬುಕ್, ಇನ್​ಸ್ಟಾಗ್ರಾಂ ಶುಲ್ಕ ವಿಧಿಸುತ್ತಿಲ್ಲ

ಇದನ್ನೂ ಓದಿ
Image
Air Asia: ಏರ್​ ಏಷಿಯಾ ಸಂಪೂರ್ಣ ಒಡೆತನ ಟಾಟಾ ಕಂಪನಿಯ ತೆಕ್ಕೆಗೆ
Image
Invest Karnataka 2022: ಹೂಡಿಕೆ ಸಮಾವೇಶದ ಮೊದಲ ದಿನವೇ ಹರಿದು ಬಂತು 3.61 ಲಕ್ಷ ಕೋಟಿ ರೂ.
Image
Airtel 5G: ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ ಏರ್ಟೆಲ್ 5ಜಿ
Image
ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಂ ಅಥವಾ ಕೂ ಬಳಕೆದಾರರ ದೃಢೀಕರಣಕ್ಕೆ ಶುಲ್ಕ ವಿಧಿಸುತ್ತಿಲ್ಲ ಎಂದು ಸರ್ಕಾರಿ ಅಧಿಕಾರಿಗಳು ಹೇಳಿರುವುದಾಗಿ ‘ನ್ಯೂಸ್ 18’ ವರದಿ ಮಾಡಿದೆ.

ನೂತನ ಐಟಿ ನಿಯಮದ ಅಡಿಯಲ್ಲಿ ಟ್ವಿಟರ್​ ಬ್ಲೂಟಿಕ್​ಗೆ ವಿಧಿಸಲಾಗುವ 8 ಡಾಲರ್ ಶುಲ್ಕದ ಬಗ್ಗೆ ಪ್ರಶ್ನಿಸಬಹುದಾಗಿದೆ. ಸದ್ಯದ ಮಟ್ಟಿಗೆ ಬಳಕೆದಾರರ ದೃಷ್ಟಿಯಿಂದ ಟ್ವಿಟರ್​ನ ನಿಯಮಗಳಲ್ಲಿ ಏನೇನು ಬದಲಾವಣೆ ಆಗಲಿದೆ ಎಂಬುದನ್ನು ಕಾದು ನೋಡುವುದು ಉತ್ತಮ. ದೇಶದ ಖರೀದಿಸುವ ಶಕ್ತಿಗೆ ಅನುಗುಣವಾಗಿ ಮಸ್ಕ್ ಅವರು ಶುಲ್ಕದ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Layoffs at Twitter: ಟ್ವಿಟರ್​ನಿಂದ 3,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಎಲಾನ್ ಮಸ್ಕ್ ಚಿಂತನೆ

ಟ್ವಿಟರ್​ ಬ್ಲೂಟಿಕ್​ಗೆ ಶುಲ್ಕ ವಿಧಿಸುವ ವಿಚಾರ ಕಂಪನಿ ಮತ್ತು ಬಳಕೆದಾರನಿಗೆ ಬಿಟ್ಟಿದ್ದು. ಈ ವಿಷಯದಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ ಎಂದು ಮತ್ತೊಬ್ಬರು ಅಧಿಕಾರಿ ಹೇಳಿರುವುದಾಗಿಯೂ ವರದಿ ಉಲ್ಲೇಖಿಸಿದೆ.

ಐಟಿ ಕಾಯ್ದೆ ಏನು ಹೇಳುತ್ತದೆ?

ಭಾರತದಲ್ಲಿ ಸ್ವಯಂಪ್ರೇರಣೆಯಿಂದ ಮನವಿ ಮಾಡುವ ಪ್ರತಿಯೊಬ್ಬ ವ್ಯಕ್ತಿಯ ಖಾತೆಯನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ದೃಢೀಕರಿಸಬೇಕು. ಮೊಬೈಲ್ ಸಂಖ್ಯೆ ಬಳಸಿಕೊಂಡು ಅಥವಾ ಇನ್ನಿತರ ಯಾವುದೇ ಮೆಕ್ಯಾನಿಸಂ ಉಪಯೋಗಿಸಿಕೊಂಡು ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರನ ಖಾತೆಯನ್ನು ದೃಢೀಕರಣಗೊಳಿಸಬಹುದು ಎಂದು ‘ಮಾಹಿತಿ ತಂತ್ರಜ್ಞಾನ ಕಾಯ್ದೆ 2021’ರ ಸೆಕ್ಷನ್ 4 (7) ರಲ್ಲಿ ಹೇಳಲಾಗಿದೆ. ಆದರೆ ಈ ಸೇವೆಗೆ ಶುಲ್ಕ ವಿಧಿಸಬಹುದೇ ಎಂಬ ಬಗ್ಗೆ ಈ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ.

ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ