AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook: ಫೇಸ್​ಬುಕ್​ನಲ್ಲಿ ಅಟೊಮೆಟಿಕ್ ಆಗಿ ಸೆಂಡ್ ಆಗುತ್ತಿದೆ ಫ್ರೆಂಡ್ ರಿಕ್ವೆಸ್ಟ್: ಬಳಕೆದಾರರಿಂದ ದೂರು

ಫೇಸ್​ಬುಕ್​ನಲ್ಲಿ ಒಬ್ಬರ ಪ್ರೊಫೈಲ್ ಅನ್ನು ವೀಕ್ಷಿಸಲು ಅವರ ಖಾತೆಗೆ ತೆರಳಿದ ಸಂದರ್ಭ ಯಾವುದೇ ಸೂಚನೆ ನೀಡದೆ ಫ್ರೆಂಡ್ ರಿಕ್ವೆಸ್ಟ್ ಸೆಂಡ್ ಆಗುತ್ತಿದೆ. ಇದೀಗ ಫೇಸ್​ಬುಕ್​ನ ಪ್ರೈವಸಿ ವಿಚಾರವಾಗಿ ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

Facebook: ಫೇಸ್​ಬುಕ್​ನಲ್ಲಿ ಅಟೊಮೆಟಿಕ್ ಆಗಿ ಸೆಂಡ್ ಆಗುತ್ತಿದೆ ಫ್ರೆಂಡ್ ರಿಕ್ವೆಸ್ಟ್: ಬಳಕೆದಾರರಿಂದ ದೂರು
Facebook
Vinay Bhat
|

Updated on: May 15, 2023 | 11:46 AM

Share

ಮೆಟಾ (Meta) ಒಡೆತನದ ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್​ಬುಕ್ ಅನ್ನು ಬಳಸುವವರ ಸಂಖ್ಯೆ ಇಂದು 2.85 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 314 ಮಿಲಿಯನ್ ಜನರು ಖಾತೆ ಹೊಂದಿದ್ದಾರೆ. ಕೇವಲ ಮೆಸೇಜ್, ಫೋಟೋ, ವಿಡಿಯೋ ಹಂಚಿಕೊಳ್ಳಲು ಮಾತ್ರವಲ್ಲದೆ ಫೇಸ್​ಬುಕ್ (Facebook) ಇಂದು ದೊಡ್ಡ ಮಾರ್ಕೆಟೆಂಗ್ ತಾಣವಾಗಿ ಮಾರ್ಪಾಡಾಗಿದೆ. ಹೀಗೆ ಸಾಕಷ್ಟು ಬಳಕೆದಾರರನ್ನು ಹೊಂದಿರುವ ಫೇಸ್​ಬುಕ್​ನಲ್ಲಿ ಇದೀಗ ತೊಂದರೆ ಕಾಣಿಸಿಕೊಂಡಿದ್ದು, ಅಟೊಮೆಟಿಕ್ ಆಗಿ ಫ್ರೆಂಡ್ ರಿಕ್ವೆಸ್ಟ್ ಸೆಂಡ್ ಆಗುತ್ತಿದೆಯಂತೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ (Twitter) ಅನೇಕ ಎಫ್​ಬಿ ಬಳಕೆದಾರರು ದೂರುತ್ತಿದ್ದಾರೆ.

ಒಬ್ಬರ ಪ್ರೊಫೈಲ್ ಅನ್ನು ವೀಕ್ಷಿಸಲು ಅವರ ಖಾತೆಗೆ ತೆರಳಿದ ಸಂದರ್ಭ ಯಾವುದೇ ಸೂಚನೆ ನೀಡದೆ ಫ್ರೆಂಡ್ ರಿಕ್ವೆಸ್ಟ್ ಸೆಂಡ್ ಆಗುತ್ತಿದೆ. ಇದೀಗ ಫೇಸ್​ಬುಕ್​ನ ಪ್ರೈವಸಿ ವಿಚಾರವಾಗಿ ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಈ ಸಮಸ್ಯೆ ಬಾಂಗ್ಲಾದೇಶ, ಪಿಲಿಪೈನ್ಸ್ ಹಾಗೂ ಶ್ರೀಲಂಕಾದಲ್ಲಿ ಕಾಣಿಸಿಕೊಂಡಿದೆ. ಈ ತೊಂದರೆ ತನ್ನ ಗಮನಕ್ಕೆ ಬಂದ ತಕ್ಷಣ ಮೆಟಾ ಬಳಕೆದಾರರಲ್ಲಿ ಕ್ಷಮೆಯಾಚಿಸಿದೆ.

Redmi A2: ಮೇ 19ರ ಒಂದೇ ದಿನ ಎರಡು ಹೊಸ ಫೋನ್ ಬಿಡುಗಡೆ ಮಾಡಲಿದೆ ರೆಡ್ಮಿ

ಇದನ್ನೂ ಓದಿ
Image
Tech Tips: ಬೇಸಿಗೆ ಬಿಸಿಲಿಗೆ ಬ್ಲಾಸ್ಟ್ ಆಗುತ್ತಿದೆ ಸ್ಮಾರ್ಟ್​ಫೋನ್​ಗಳು: ನಿರ್ಲಕ್ಷಿಸದಿರಿ
Image
Realme 11 Pro+: ಬರೋಬ್ಬರಿ 200MP ಕ್ಯಾಮೆರಾ, ಅತಿ ಕಡಿಮೆ ಬೆಲೆ: ಮೇ 16ಕ್ಕೆ ಭಾರತದಲ್ಲಿ ರಿಯಲ್ ಮಿ 11 ಪ್ರೊ ಬಿಡುಗಡೆ
Image
Tech Tips: ವಾಟ್ಸ್​ಆ್ಯಪ್​ನಲ್ಲಿ ಟೈಪ್ ಮಾಡದೇ​​​ ಮೆಸೇಜ್ ಕಳುಹಿಸುವುದು ಹೇಗೆ ಗೊತ್ತೇ?
Image
Motorola Edge 40: ಭಾರತಕ್ಕೆ ಕಾಲಿಡಲಿದೆ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌: ಫೀಚರ್ಸ್ ಏನಿದೆ ನೋಡಿ

ಈ ಬಗ್ಗೆ ಬರೆದುಕೊಂಡಿರುವ ಮೆಟಾ, ”ಫೇಸ್​ಬುಕ್ ಇತ್ತೀಚಿನ ಅಪ್ಡೇಟ್​ನಲ್ಲಿ ಕೆಲವು ದೋಷಗಳು ಕಂಡುಬಂದಿದೆ. ಇದರಿಂದ ಅಟೊಮೆಟಿಕ್ ಆಗಿ ಫ್ರೆಂಡ್ ರಿಕ್ವೆಸ್ಟ್ ಸೆಂಡ್ ಆಗುತ್ತಿತ್ತು. ಈ ಸಮಸ್ಯೆ ಈಗ ಬಗೆ ಹರಿದಿದೆ. ಬಳಕೆದಾರರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ,” ಎಂದು ಮೆಟಾ ಹೇಳಿದೆ.

ಮೆಟಾ ಆದಾಯ ಹೆಚ್ಚಳ:

ಸತತ ಮೂರು ತ್ರೈಮಾಸಿಕ ಅವಧಿಯಲ್ಲಿ ಆದಾಯ ಇಳಿಮುಖ ಕಾಣುತ್ತಾ ನಿರಾಸೆ ಹೊಂದಿದ್ದ ಮೆಟಾ ಪ್ಲಾಟ್​ಫಾರ್ಮ್ಸ್ ಸಂಸ್ಥೆ ಈ ಕ್ಯಾಲೆಂಡರ್ ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಅದ್ವಿತೀಯ ಆದಾಯ ಗಳಿಸಿರುವುದು ವರದಿಯಾಗಿದೆ. ವಾಟ್ಸ್​ಆ್ಯಪ್, ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್​ನ ಮಾಲೀಕ ಸಂಸ್ಥೆ ಮೆಟಾ ಪ್ಲಾಟ್​ಫಾರ್ಮ್ಸ್​ನ ಆದಾಯ 2023 ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 28.6 ಬಿಲಿಯನ್ ಡಾಲರ್ (ಸುಮಾರು 2.33 ಲಕ್ಷ ಕೋಟಿ ರೂ) ಇದೆ. ಹಿಂದಿನ ವರ್ಷದ ಇದೇ ಅವಧಿಗಿಂತ ಆದಾಯದಲ್ಲಿ ಹೆಚ್ಚಳವಾಗಿರುವುದು ಕೇವಲ ಶೇ. 3 ಮಾತ್ರ. ಆದರೆ, ಇದು ಷೇರುಪೇಟೆ ನುರಿತರು ಅಂದಾಜು ಮಾಡಿದ್ದಕ್ಕಿಂತ ಉತ್ತಮವಾಗಿದೆ.

ಹಣ ಕೊಟ್ಟು ಬ್ಲೂ ಟಿಕ್ ಪಡೆಯುವ ಆಯ್ಕೆ:

ಹಣ ಕೊಟ್ಟು ಬ್ಲೂ ಟಿಕ್ ಪಡೆದುಕೊಳ್ಳಿ ಎಂಬ ನಿಯಮವನ್ನು ಮೆಟಾ ಕಂಪನಿಯೂ ಪ್ರಾರಂಭಿಸಿದೆ. ಟ್ವಿಟರ್​ ಅನ್ನೇ ಅನುಸರಿಸಿರುವ ಮೆಟಾ ಈಗ ಹಣ ಪಾವತಿ ಮಾಡಿದರೆ ಬ್ಲೂ ಟಿಕ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಮೆಟಾ ಪ್ರಸ್ತುತ ಯುನೈಟೆಡ್ ಸ್ಟೇಟ್​ನಲ್ಲಿ ಈ ಸೇವೆಗಳನ್ನು ಹೊರತಂದಿದೆ. ನೀವು ವೆಬ್‌ನಲ್ಲಿ ಸೈನ್ ಅಪ್ ಮಾಡಿದರೆ ತಿಂಗಳಿಗೆ $11.99 (989 ರೂ.) ನಿಗದಿ ಮಾಡಲಾಗಿದೆ. ಅದೇ ಮೊಬೈಲ್ ಆ್ಯಪ್ ಸ್ಟೋರ್ ಮೂಲಕ ಸೈನ್ ಅಪ್ ಮಾಡಿದರೆ $14.99 (1237 ರೂ.) ಇದೆ. ನೀವು ವೆಬ್‌ನಲ್ಲಿ ಸೈನ್ ಅಪ್ ಮಾಡಿದರೆ ಬ್ಲೂ ಟಿಕ್ ಅನ್ನು ಫೇಸ್‌ಬುಕ್‌ನಲ್ಲಿ ಮಾತ್ರ ಸ್ವೀಕರಿಸುತ್ತೀರಿ. ಆ್ಯಪ್ ಸ್ಟೋರ್ ಆಯ್ಕೆಯು ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್ ಎರಡಕ್ಕೂ ವೆರಿಫೈ ಅನ್ನು ಒಳಗೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ