AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Electronics sale: ಫ್ಲಿಪ್​ಕಾರ್ಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಸೇಲ್ ಆರಂಭ: ಐಫೋನ್ ಸೇರಿದಂತೆ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

Flipkart Sale: ಫ್ಲಿಪ್​ಕಾರ್ಟ್​ನಲ್ಲಿ ಬಹುನಿರೀಕ್ಷಿತ ಎಲೆಕ್ಟ್ರಾನಿಕ್ಸ್ ಸೇಲ್​ಗೆ ಚಾಲನೆ ಸಿಕ್ಕಿದೆ. ಈ ಸೇಲ್​ನಲ್ಲಿ ಐಫೋನ್, ಮೋಟೋರೊಲಾ, ಶವೋಮಿ, ಸ್ಯಾಮ್​ಸಂಗ್, ರಿಯಲ್ ಮಿ ಸೇರಿದಂತೆ ಹೆಚ್ಚಿನ ಸ್ಮಾರ್ಟ್​ಫೋನ್​ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಕಾಣುತ್ತಿದೆ.

Flipkart Electronics sale: ಫ್ಲಿಪ್​ಕಾರ್ಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಸೇಲ್ ಆರಂಭ: ಐಫೋನ್ ಸೇರಿದಂತೆ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
Flipkart Electronics sale
Vinay Bhat
|

Updated on: Mar 25, 2023 | 12:52 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ (Flipkart) ಹೊಸ ಮೇಳದೊಂದಿಗೆ ಪುನಃ ಬಂದಿದೆ. ಬಹುನಿರೀಕ್ಷಿತ ಎಲೆಕ್ಟ್ರಾನಿಕ್ಸ್ ಸೇಲ್​ಗೆ ಚಾಲನೆ ಸಿಕ್ಕಿದ್ದು ಮಾರ್ಚ್ 30 ರ ವರೆಗೆ ನಡೆಯಲಿದೆ. ಈ ಸೇಲ್​ನಲ್ಲಿ ಐಫೋನ್, ಮೋಟೋರೊಲಾ, ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಸೇರಿದಂತೆ ಹೆಚ್ಚಿನ ಸ್ಮಾರ್ಟ್​ಫೋನ್​ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಕಾಣುತ್ತಿದೆ. ಮುಖ್ಯವಾಗಿ 5G ಬೆಂಬಲ ಪಡೆದುಕೊಂಡಿರುವ ಮೊಬೈಲ್ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಇದರ ಜೊತೆಗೆ ಎಕ್ಸ್​ಚೇಂಜ್ ಆಫರ್, ಬ್ಯಾಂಕ್ ಆಫರ್ ಕೂಡ ನೀಡಲಾಗಿದೆ. ಇಲ್ಲಿದೆ ನೋಡಿ ಎಲೆಕ್ಟ್ರಾನಿಕ್ಸ್ ಸೇಲ್​ನಲ್ಲಿ (Flipkart Electronics sale) ಕಡಿಮೆ ಬೆಲೆಗೆ ಮಾರಾಟ ಆಗುತ್ತಿರುವ ಕೆಲವು ಪ್ರಸಿದ್ಧ ಸ್ಮಾರ್ಟ್​ಫೋನ್​ಗಳು.

ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಮಾರಾಟದಲ್ಲಿ ಐಫೋನ್ 13 ಅನ್ನು ನೀವು ಕೇವಲ 61,999 ರೂಪಾಯಿಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು. ಇದು 128GB ಸ್ಟೋರೇಜ್ ರೂಪಾಂತರವಾಗಿದೆ. ಆ್ಯಪಲ್​ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಫೋನ್ ಬೆಲೆ 69,900 ರೂ. ಆಗಿದೆ. ಇದರಲ್ಲಿರುವ ಬಹುತೇಕ ಫೀಚರ್ ಹೊಸ ಐಫೋನ್ 14 ರೀತಿಯಲ್ಲೇ ಇದೆ. ಇನ್ನು ಹೆಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್‌ಗಳ ಮೇಲೆ 2,000 ರೂಪಾಯಿಗಳ ರಿಯಾಯಿತಿಯ ಕೊಡುಗೆಯೂ ಇದೆ. ಈ ಮೂಲಕ ಐಫೋನ್ 13 ಅನ್ನು ನೀವು 59,999 ರೂ. ಗೆ ಪಡೆದುಕೊಳ್ಳಬಹುದು.

Samsung Galaxy F14 5G: ಸ್ಮಾರ್ಟ್​ಫೋನ್ ಮಾರುಕಟ್ಟೆ ಶಾಕ್: ಕೇವಲ 12,990 ರೂ. ಗೆ ಹೊಸ 5G ಫೋನ್ ರಿಲೀಸ್ ಮಾಡಿದ ಸ್ಯಾಮ್​ಸಂಗ್

ಇದನ್ನೂ ಓದಿ
Image
Tech Tips: ನಿಮ್ಮ ಆಧಾರ್ ಕಾರ್ಡ್ ಮೂಲಕ ಯಾರಾದರು ಸಿಮ್ ಖರೀದಿಸಿದ್ದಾರಾ?: ಹೇಗೆ ತಿಳಿಯುವುದು?
Image
Nothing Ear 2: ಸ್ಟೈಲಿಶ್ ಆಗಿ ಪ್ರೀಮಿಯಂ ಸೌಂಡ್ ಅನುಭವ ಪಡೆಯಲು ನಥಿಂಗ್
Image
Samsung Galaxy M54 5G: ಗ್ಯಾಜೆಟ್ ಲೋಕದಲ್ಲಿ 5G ಯುಗ ಸ್ಯಾಮ್​ಸಂಗ್ ಹೊಸ ಸ್ಮಾರ್ಟ್​ಫೋನ್
Image
Oppo Enco Free 3: ಸೂಪರ್ ವಿನ್ಯಾಸದಲ್ಲಿ ಬಂದಿದೆ ಒಪ್ಪೊ ಎಂಕೊ ಇಯರ್​ಬಡ್ಸ್

ಇತ್ತೀಚಿಗಷ್ಟೆ ಬಿಡುಗಡೆಯಾದ ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಫೋನ್ ಕೂಡ ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ಇದನ್ನು ನೀವು 79,999 ರೂಪಾಯಿಗಳಿಗೆ ಖರೀದಿಸಬಹುದು. HDFC ಬ್ಯಾಂಕ್ ಕಾರ್ಡ್ ಬಳಸಿದರೆ 74,999 ರೂಪಾಯಿಗಳಿಗೆ ಸಿಗಲಿದೆ. ಈ ಆಫರ್ 256GB ಸ್ಟೋರೇಜ್ ಮಾದರಿಗೆ ಇದೆ. ಇದೊಂದು ಉತ್ತಮವಾದ ಆಂಡ್ರಾಯ್ಡ್ ಫೋನ್ ಆಗಿದ್ದು ಕ್ಯಾಮೆರಾ ಅದ್ಭುತವಾಗಿದೆ. ಜೊತೆಗೆ ಬಲಿಷ್ಠ ಪ್ರೊಸೆಸರ್, ದೀರ್ಘ ಸಮಯ ಬಾಳಿಕೆ ಬರುವ ಬ್ಯಾಟರಿ ಆಯ್ಕೆ ಕೂಡ ಇದೆ.

ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್​ನಲ್ಲಿ ರೆಡ್ಮಿ ನೋಟ್ 12 ಪ್ರೊ 5G ಫೋನ್‌ 24,999 ರೂ. ಯಿಂದ ಮಾರಾಟವಾಗುತ್ತಿದೆ. ಹೆಚ್​ಡಿಎಫ್​ಸಿ ಬ್ಯಾಂಕ್ ಕಾರ್ಡ್‌ಗಳಲ್ಲಿ ರೂ. 2,000 ರಿಯಾಯಿತಿಯ ಕೊಡುಗೆ ನೀಡಲಾಗಿದೆ. ಇದೊಂದು ಮಧ್ಯಮ ಶ್ರೇಣಿಯ 5G ಫೋನ್ ಆಗಿದ್ದು ರಿಯಾಯಿತಿಯಲ್ಲಿ 22,999 ರೂ. ಗೆ ಖರೀದಿಸಬಹುದು. ಇದರ ಜೊತೆಗೆ ವಿವೋ V27 ಫ್ಲಿಪ್‌ಕಾರ್ಟ್‌ ಸೇಲ್​ನಲ್ಲಿ 32,999 ರೂ. ಗೆ ಕಾಣಿಸಿಕೊಂಡಿದೆ. ಆದರೆ HDFC ಬ್ಯಾಂಕ್ ಕಾರ್ಡ್‌ಗಳಲ್ಲಿ ರೂ. 2,500 ರಿಯಾಯಿತಿ ಘೋಷಿಸಿದ್ದು ಈ ಮೂಲಕ 30,499 ರೂ. ಗಳಿಗೆ ನಿಮ್ಮದಾಗಿಸಬಹುದು. ಇದು 128GB ಸ್ಟೋರೇಜ್ ಆಯ್ಕೆಯನ್ನ ಹೊಂದಿದೆ.

ಕಳೆದ ವರ್ಷ ಬಿಡುಗಡೆ ಆದ ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್​ಫೋನ್ ನಥಿಂಗ್ ಫೋನ್ (1) ಕೇವಲ 29,999 ರೂ. ಗೆ ಸೇಲ್ ಆಗುತ್ತಿದೆ. ಇದರ ವಿನ್ಯಾಸವು ವಿಶಿಷ್ಟ ಮತ್ತು ಆಕರ್ಷಕವಾಗಿದೆ. ನೀವು ಫೋಟೋಗ್ರಫಿಗಾಗಿ ಉತ್ತಮ ಕ್ಯಾಮೆರಾ ಫೋನ್ ಹುಡುಕುತ್ತಿದ್ದರೆ Pixel 6a ಅನ್ನು ಖರೀದಿಸಬಹುದು. ಈ ಫೋನ್ 31,999 ರೂ. ಗಳ ಆರಂಭಿಕ ಬೆಲೆಯೊಂದಿಗೆ ಪಟ್ಟಿ ಮಾಡಲಾಗಿದೆ. ನೀವು HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು 29,999 ರೂ. ಗೆ ಖರೀದಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ