AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ ಮೇಲ್ ಸೇವೆಗಳು

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿತ್ತು. ಇದೀಗ ಸಮಸ್ಯೆಗಳನ್ನು ಪರಿಹರಿಸಲಾಗಿದ್ದು, ಮೈಲ್ ಸೇವೆಗಳು ಸಹಜ ಸ್ಥಿತಿಗೆ ಮರಳಿದೆ.

ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ  ಮೇಲ್ ಸೇವೆಗಳು
Gmail (ಜಿಮೇಲ್)Image Credit source: Getty Images
TV9 Web
| Edited By: |

Updated on:Dec 11, 2022 | 7:48 AM

Share

ಶನಿವಾರ ಭಾರತ ಸೇರಿದಂತೆ ಜಾಗತಿಕವಾಗಿ ಲಕ್ಷಾಂತರ ಬಳಕೆದಾರರು ಭಾರಿ ಅಡಚಣೆಯನ್ನು ಅನುಭವಿಸಿದ ನಂತರ ಗೂಗಲ್ ಅಂತಿಮವಾಗಿ ಜಿಮೇಲ್ ಸೇವೆಯನ್ನು ಮರುಸ್ಥಾಪಿಸಿದೆ. ಜಿಮೇಲ್ ಬಳಕೆದಾರರು ಮೇಲ್‌ಗಳನ್ನು ಸ್ವೀಕರಿಸದಿರುವ ಹಾಗೂ ಕಳುಹಿಸಲು ಸಾಧ್ಯವಾಗದಿರುವ ಬಗ್ಗೆ ದೂರು ನೀಡಿದ್ದರು. ಮೊಬೈಲ್ ಅಪ್ಲಿಕೇಶನ್ ಮತ್ತು ಡೆಸ್ಕ್‌ಟಾಪ್ ಆವೃತ್ತಿಗಳೆರಡರಲ್ಲೂ ಪ್ರಪಂಚದಾದ್ಯಂತ ಈ ಸಮಸ್ಯೆಯ ಪರಿಣಾಮ ಬೀರಿತ್ತು. ಇದೀಗ ಸರ್ವರ್ ಡೌನ್ (Gmail server down)ಸಮಸ್ಯೆ ಸರಿಪಡಿಸಲಾಗಿದ್ದು, “ಜಿಮೇಲ್​ನಲ್ಲಿನ ಸಮಸ್ಯೆಯನ್ನು ಈಗ ಸಂಪೂರ್ಣವಾಗಿ ತಗ್ಗಿಸಲಾಗಿದೆ. ತಲುಪದ ಸಂದೇಶಗಳ ಎಲ್ಲಾ ಬ್ಯಾಕ್‌ಲಾಗ್ ಅನ್ನು ತೆರವುಗೊಳಿಸಲಾಗಿದೆ ಮತ್ತು ಮೇಲ್ ಸೇವೆಗಳು ಸಹಜ ಸ್ಥಿತಿಗೆ ಮರಳಿದೆ” ಎಂದು ಗೂಗಲ್ ವರ್ಕ್​ಸ್ಪೇಸ್ ಅಪ್‌ಡೇಟ್‌ನಲ್ಲಿ ತಿಳಿಸಿದೆ.

“ನಾವು ಈ ಸಮಸ್ಯೆಯನ್ನು ಪರಿಹರಿಸುವಾಗ ತಾಳ್ಮೆ ವಹಿಸಿದ ನಿಮಗೆ ಧನ್ಯವಾದಗಳು” ಎಂದು ಹೇಳಿದ ಕಂಪನಿ, ಇಮೇಲ್ ವಿತರಣೆಯು ಇನ್ನು ಮುಂದೆ ವಿಫಲಗೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ. ಅಲ್ಲದೆ, ಗೂಗಲ್ ಇಂಜಿನಿಯರಿಂಗ್ ತಂಡವು ಬ್ಯಾಕ್‌ಲಾಗ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಎಲ್ಲಾ ಸಂದೇಶಗಳನ್ನು ತಲುಪಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಆದಾಗ್ಯೂ, ಜಾಗತಿಕ ಸರ್ವರ್ ಡೌನ್​ ಹಿಂದಿನ ಕಾರಣವನ್ನು ಗೂಗಲ್ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ

ಜಿಮೇಕ್​ನಲ್ಲಿ ಮೇಲ್​ಗಳನ್ನು ಕಳುಹಿಸಲು ಸಾಧ್ಯವಾಗದಿರುವುದು ಮತ್ತು ಸ್ವೀಕರಿಸಲು ಸಾಧ್ಯವಾಗದಿರುವ ಬಗ್ಗೆ ಹಲವರು ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. “ಎಲ್ಲರಿಗೂ ಜಿಮೇಲ್ ಡೌನ್ ಆಗಿದೆಯೇ ಅಥವಾ ನನ್ನ ಖಾತೆಯಲ್ಲಿ ಏನಾದರೂ ತಪ್ಪಾಗಿದೆಯೇ? ನಾನು ಯಾವುದೇ ಮೇಲ್ ಸ್ವೀಕರಿಸುತ್ತಿಲ್ಲ” ಎಂದು ಜಿಮೇಲ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದರು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Sun, 11 December 22

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ