AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ ಮೇಲ್ ಸೇವೆಗಳು

ಜಗತ್ತಿನ ಅತಿ ದೊಡ್ಡ ಸಂಪರ್ಕ ಜಾಲ ಜಿಮೇಲ್ ​(Gmail) ಸರ್ವರ್​​ ಡೌನ್​ ಆಗಿತ್ತು. ಇದೀಗ ಸಮಸ್ಯೆಗಳನ್ನು ಪರಿಹರಿಸಲಾಗಿದ್ದು, ಮೈಲ್ ಸೇವೆಗಳು ಸಹಜ ಸ್ಥಿತಿಗೆ ಮರಳಿದೆ.

ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ  ಮೇಲ್ ಸೇವೆಗಳು
Gmail (ಜಿಮೇಲ್)Image Credit source: Getty Images
TV9 Web
| Updated By: Rakesh Nayak Manchi|

Updated on:Dec 11, 2022 | 7:48 AM

Share

ಶನಿವಾರ ಭಾರತ ಸೇರಿದಂತೆ ಜಾಗತಿಕವಾಗಿ ಲಕ್ಷಾಂತರ ಬಳಕೆದಾರರು ಭಾರಿ ಅಡಚಣೆಯನ್ನು ಅನುಭವಿಸಿದ ನಂತರ ಗೂಗಲ್ ಅಂತಿಮವಾಗಿ ಜಿಮೇಲ್ ಸೇವೆಯನ್ನು ಮರುಸ್ಥಾಪಿಸಿದೆ. ಜಿಮೇಲ್ ಬಳಕೆದಾರರು ಮೇಲ್‌ಗಳನ್ನು ಸ್ವೀಕರಿಸದಿರುವ ಹಾಗೂ ಕಳುಹಿಸಲು ಸಾಧ್ಯವಾಗದಿರುವ ಬಗ್ಗೆ ದೂರು ನೀಡಿದ್ದರು. ಮೊಬೈಲ್ ಅಪ್ಲಿಕೇಶನ್ ಮತ್ತು ಡೆಸ್ಕ್‌ಟಾಪ್ ಆವೃತ್ತಿಗಳೆರಡರಲ್ಲೂ ಪ್ರಪಂಚದಾದ್ಯಂತ ಈ ಸಮಸ್ಯೆಯ ಪರಿಣಾಮ ಬೀರಿತ್ತು. ಇದೀಗ ಸರ್ವರ್ ಡೌನ್ (Gmail server down)ಸಮಸ್ಯೆ ಸರಿಪಡಿಸಲಾಗಿದ್ದು, “ಜಿಮೇಲ್​ನಲ್ಲಿನ ಸಮಸ್ಯೆಯನ್ನು ಈಗ ಸಂಪೂರ್ಣವಾಗಿ ತಗ್ಗಿಸಲಾಗಿದೆ. ತಲುಪದ ಸಂದೇಶಗಳ ಎಲ್ಲಾ ಬ್ಯಾಕ್‌ಲಾಗ್ ಅನ್ನು ತೆರವುಗೊಳಿಸಲಾಗಿದೆ ಮತ್ತು ಮೇಲ್ ಸೇವೆಗಳು ಸಹಜ ಸ್ಥಿತಿಗೆ ಮರಳಿದೆ” ಎಂದು ಗೂಗಲ್ ವರ್ಕ್​ಸ್ಪೇಸ್ ಅಪ್‌ಡೇಟ್‌ನಲ್ಲಿ ತಿಳಿಸಿದೆ.

“ನಾವು ಈ ಸಮಸ್ಯೆಯನ್ನು ಪರಿಹರಿಸುವಾಗ ತಾಳ್ಮೆ ವಹಿಸಿದ ನಿಮಗೆ ಧನ್ಯವಾದಗಳು” ಎಂದು ಹೇಳಿದ ಕಂಪನಿ, ಇಮೇಲ್ ವಿತರಣೆಯು ಇನ್ನು ಮುಂದೆ ವಿಫಲಗೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ. ಅಲ್ಲದೆ, ಗೂಗಲ್ ಇಂಜಿನಿಯರಿಂಗ್ ತಂಡವು ಬ್ಯಾಕ್‌ಲಾಗ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಎಲ್ಲಾ ಸಂದೇಶಗಳನ್ನು ತಲುಪಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಆದಾಗ್ಯೂ, ಜಾಗತಿಕ ಸರ್ವರ್ ಡೌನ್​ ಹಿಂದಿನ ಕಾರಣವನ್ನು ಗೂಗಲ್ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ

ಜಿಮೇಕ್​ನಲ್ಲಿ ಮೇಲ್​ಗಳನ್ನು ಕಳುಹಿಸಲು ಸಾಧ್ಯವಾಗದಿರುವುದು ಮತ್ತು ಸ್ವೀಕರಿಸಲು ಸಾಧ್ಯವಾಗದಿರುವ ಬಗ್ಗೆ ಹಲವರು ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. “ಎಲ್ಲರಿಗೂ ಜಿಮೇಲ್ ಡೌನ್ ಆಗಿದೆಯೇ ಅಥವಾ ನನ್ನ ಖಾತೆಯಲ್ಲಿ ಏನಾದರೂ ತಪ್ಪಾಗಿದೆಯೇ? ನಾನು ಯಾವುದೇ ಮೇಲ್ ಸ್ವೀಕರಿಸುತ್ತಿಲ್ಲ” ಎಂದು ಜಿಮೇಲ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದರು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Sun, 11 December 22

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ