Google Chrome: ಗೂಗಲ್​ನಿಂದ ವಾರ್ನಿಂಗ್: ಕ್ರೋಮ್ ಉಪಯೋಗಿಸುವವರು ತಕ್ಷಣವೇ ಹೀಗೆ ಮಾಡಿ

ಹಿಂದಿನ ಆವೃತ್ತಿಯ ಗೂಗಲ್ ಕ್ರೋಮ್​ನಲ್ಲಿ ಅಪಾಯಕಾರಿಯಾದ ದೋಷಗಳು ಕಂಡುಬಂದಿರುವ ಬಗ್ಗೆ ವರಿಯಾಗಿದೆ. ಹೀಗಾಗಿ ಕ್ರೋಮ್ ಬಳಕೆ ಮಾಡುವವರು ತಕ್ಷಣವೇ ತಮ್ಮ ಬ್ರೌಸರ್ ಅನ್ನು 102.0.5005.115 ನೂತನ ಆವೃತ್ತಿಗೆ ಅಪ್ಡೇಟ್ ಮಾಡುವಂತೆ ಸೂಚಿಸಲಾಗಿದೆ.

Google Chrome: ಗೂಗಲ್​ನಿಂದ ವಾರ್ನಿಂಗ್: ಕ್ರೋಮ್ ಉಪಯೋಗಿಸುವವರು ತಕ್ಷಣವೇ ಹೀಗೆ ಮಾಡಿ
Google Chrome
Follow us
| Updated By: Vinay Bhat

Updated on: Jun 16, 2022 | 12:34 PM

ನೀವು ಗೂಗಲ್ ಕ್ರೋಮ್ ಬಳಕೆದಾರರಾಗಿದ್ದಲ್ಲಿ ಆದಷ್ಟು ಬೇಗ ನಿಮ್ಮ ಬ್ರೌಸರ್ ಅನ್ನು ಹೊಸ ಆವೃತ್ತಿಗೆ ಅಪ್ಡೇಟ್ ಮಾಡಿ. ಯಾಕಂದ್ರೆ ಹಿಂದಿನ ಆವೃತ್ತಿಯ ಗೂಗಲ್ ಕ್ರೋಮ್​ನಲ್ಲಿ (Google Chrome) ಅಪಾಯಕಾರಿಯಾದ ದೋಷಗಳು ಕಂಡುಬಂದಿರುವ ಬಗ್ಗೆ ವರಿಯಾಗಿದೆ. ಹೀಗಾಗಿ ಕ್ರೋಮ್ ಬಳಕೆ ಮಾಡುವವರು ತಕ್ಷಣವೇ ತಮ್ಮ ಬ್ರೌಸರ್ ಅನ್ನು 102.0.5005.115 ನೂತನ ಆವೃತ್ತಿಗೆ ಅಪ್ಡೇಟ್ ಮಾಡುವಂತೆ ಸೂಚಿಸಲಾಗಿದೆ. ಈ ಹೊಸ ಆವೃತ್ತಿ ಕಳೆದ ಜೂನ್ 9 ರಂದು ಬಿಡುಗಡೆ ಮಾಡಲಾಗಿದೆ. ಸದ್ಯ ಕಂಡು ಬಂದಿರುವ ಕೊರತೆಯ ಬಗ್ಗೆ ಗೂಗಲ್ (Google) ಕೆಲಸ ಮಾಡುತ್ತಿದ್ದು ಆದಷ್ಟು ಬೇಗ ಸರಿಪಡಿಸುವುದಾಗಿ ಹೇಳಿದೆ. ವಿಂಡೋಸ್ (Windows), ಮ್ಯಾಕ್ ಮತ್ತು ಲಿನಕ್ಸ್​ನಲ್ಲಿ ಮಾತ್ರ ಕ್ರೋಮ್ ಹೊಸ ಅಪ್ಡೇಟ್ ಲಭ್ಯವಿದೆ. ಮುಂದಿನ ವಾರದಲ್ಲಿ ಎಲ್ಲ ಬಳಕೆದಾರರಿಗೆ ನೂತನ ಆವೃತ್ತಿ ಸಿಗಲಿದೆಯಂತೆ.

ಗೂಗಲ್ ಕ್ರೋಮ್ ಅತ್ಯಂತ ಪ್ರಸಿದ್ಧ ವೆಬ್ ಬ್ರೌಸರ್ ಆಗಿದೆ. ವಿಶ್ವದಲ್ಲಿ 2.6 ಬಿಲಿಯನ್​ಗೂ ಅಧಿಕ ಮಂದಿ ಉಪಯೋಗಿಸುತ್ತಿದ್ದಾರೆ. ಹೀಗಾಗಿ, ಹ್ಯಾಕರ್ಸ್‌ಗೆ ಇದು ದೊಡ್ಡ ಟಾರ್ಗೆಟ್. ಬಹಳ ಮಂದಿ ವೈಯಕ್ತಿಕವಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್‌ಗಳಲ್ಲಿ ಗೂಗಲ್ ಕ್ರೋಮ್ ಬ್ರೌಸರ್‌ನಲ್ಲಿ ಬಹಳಷ್ಟು ಪಾಸ್‌ವರ್ಡ್‌ಗಳನ್ನ ಆಟೊಸೇವ್ ಮಾಡಿರುತ್ತಾರೆ. ಈ ಪಾಸ್‌ವರ್ಡ್‌ಗಳನ್ನ ದೋಚಲು ಹ್ಯಾಕರ್ಸ್ ಅಥವಾ ವಂಚಕರು ಬಹಳ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ವಿವಿಧ ರೀತಿಯಲ್ಲಿ ಬಳಕೆದಾರರ ಮಾಹಿತಿ ಕದಿಯಲು ಪ್ರಯತ್ನಿಸುತ್ತಿರುತ್ತಾರೆ. ಇದಕ್ಕಾಗಿ ಕಾಲಕ್ಕೆ ತಕ್ಕಂತೆ ಅಪ್ಡೇಟ್ ಮಾಡುವುದು ಮುಖ್ಯ.

Best Smartphones: 30,000 ರೂ. ಒಳಗಿನ ಈ ಐದು ಸ್ಮಾರ್ಟ್​​ಫೋನ್ ಖರೀದಿಸಲು ಮುಗಿಬೀಳುತ್ತಿದ್ದಾರೆ ಜನರು

ಇದನ್ನೂ ಓದಿ
Image
Oppo K10 5G: 17,499 ರೂ.: ಈ ಅದ್ಭುತ ಕ್ಯಾಮೆರಾ ಫೋನ್​ ಖರೀದಿಸಿದ್ರೆ ನೀವು ಫಿದಾ ಆಗೋದು ಗ್ಯಾರೆಂಟಿ
Image
Internet Explorer: 27 ವರ್ಷಗಳ ಬಳಿಕ ಇಂಟರ್ನೆಟ್ ಎಕ್ಸ್‌ಪ್ಲೋರರ್ ಸ್ಥಗಿತ..!
Image
5G Spectrum: ದೇಶದ 13 ನಗರಗಳಲ್ಲಿ ಸಿಗಲಿದೆ 5G ಇಂಟರ್​​ನೆಟ್ ಸೇವೆ..!
Image
Tecno Pova 3: ಬಿಡುಗಡೆಗೆ 3 ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಿದೆ ಈ ಫೋನ್

ಇತ್ತೀಚೆಗಷ್ಟೆ ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದ ಬಗ್ಗೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಎಚ್ಚರಿಕೆ ನೀಡಿತ್ತು. CVE-2021-43527, CVE-2022-1489, CVE-2022-1633, CVE-202-1636, CVE-2022-1859, CVE-2022-1867, ಮತ್ತು C20 Google ನಿಂದ ಹಲವು ದೋಷಗಳನ್ನು ಪತ್ತೆ ಹಚ್ಚಲಾಗಿತ್ತು. ಈ ಎಲ್ಲಾ ದೋಷಗಳನ್ನು ಟೆಕ್ ದೈತ್ಯ ಗೂಗಲ್‌ ಕೂಡ ಒಪ್ಪಿಕೊಂಡಿದೆ. ಇನ್ನು ಈ ದೋಷಗಳಿಂದ ರಕ್ಷಿಸಲು ಕ್ರೋಮ್‌ OS ನ ಇತ್ತೀಚಿನ ಆವೃತ್ತಿಯನ್ನು ಡೌನ್‌ಲೋಡ್ ಮಾಡಲು ಗೂಗಲ್‌ ಕಂಪನಿ ಬಳಕೆದಾರರಿಗೆ ಹೇಳಿದೆ. ಈ ದುರ್ಬಲತೆಗಳು ಬಳಕೆದಾರರ ಡೇಟಾವನ್ನು ಹ್ಯಾಕರ್‌ಗಳಿಗೆ ಸಿಗುವಂತೆ ಮಾಡಲಿದೆ ಎಂದು ಹೇಳಿದೆ.

ಕ್ರೋಮ್ ಬ್ರೌಸರ್ ಅಪ್‌ಡೇಟ್ ಮಾಡುವುದು ಹೇಗೆ?:

  • ಡೆಸ್ಕ್‌ಟಾಪ್ ಕಂಪ್ಯೂಟರ್ ಬಳಕೆದಾರರು ಗೂಗಲ್ ಕ್ರೋಮ್ ಬ್ರೌಸರ್ ತೆರೆಯಿರಿ.
  • ಬಲ ತುದಿ ಮೇಲ್ಭಾಗದಲ್ಲಿರುವ ಮೂರು ಚುಕ್ಕಿಗಳ ಮೆನು ಆಯ್ಕೆ (Customize and control Google Chrome) ಕ್ಲಿಕ್ ಮಾಡಿ.
  • ನಂತರ ಸೆಟ್ಟಿಂಗ್ಸ್ ತೆರೆಯಿರಿ.
  • ಬಳಿಕ, ಅಬೌಟ್ ಕ್ರೋಮ್ ಓಪನ್ ಮಾಡಿ.
  • ಅಲ್ಲಿ ಇರುವ ಗೂಗಲ್ ಕ್ರೋಮ್ ಅಪ್‌ಡೇಟ್ ನೌ ಎಂದಿರುವುದನ್ನು ಕ್ಲಿಕ್ ಮಾಡಿ.
  • ಅಪ್‌ಡೇಟ್ ಆದ ಬಳಿಕ, ರೀಲಾಂಚ್ ಮಾಡಿ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ