Google India: ಭಾರತದ 453 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ಗೂಗಲ್

Google Layoffs: ಗೂಗಲ್ ಇಂಡಿಯಾದ ಮುಖ್ಯಸ್ಥ ಮತ್ತು ಉಪಾಧ್ಯಕ್ಷ ಸಂಜಯ್ ಗುಪ್ತಾ (Sanjay Gupta) ಉದ್ಯೋಗಿಗಳಿಗೆ ಮೇಲ್ ಕಳುಹಿಸಿದ್ದಾರೆ. ಕಳೆದ ತಿಂಗಳು ಗೂಗಲ್‌ನ ಮೂಲ ಕಂಪನಿ Alphabet Inc 12,000 ಉದ್ಯೋಗಿಗಳನ್ನು ಜಾಗತಿಕವಾಗಿ ವಜಾಗೊಳಿಸಿತ್ತು.

Google India: ಭಾರತದ 453 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ ಗೂಗಲ್
ಗೂಗಲ್ ಕಚೇರಿ
Follow us
| Updated By: Vinay Bhat

Updated on:Feb 17, 2023 | 9:55 AM

ಗೂಗಲ್ ಇಂಡಿಯಾ (Google India) ಗುರುವಾರ ತಡರಾತ್ರಿ ವಿವಿಧ ಇಲಾಖೆಗಳಲ್ಲಿನ 453 ಉದ್ಯೋಗಿಗಳನ್ನು ವಜಾ ಮಾಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಉದ್ಯೋಗಿಗಳಿಗೆ ಮೇಲ್ ಕಳಹಿಸಿ ಸೂಚಿಸಲಾಗಿದೆಯಂತೆ. ಬ್ಯುಸಿನೆಸ್‌ಲೈನ್‌ನ ವರದಿಯ ಪ್ರಕಾರ, ಗೂಗಲ್ ಇಂಡಿಯಾದ ಮುಖ್ಯಸ್ಥ ಮತ್ತು ಉಪಾಧ್ಯಕ್ಷ ಸಂಜಯ್ ಗುಪ್ತಾ (Sanjay Gupta) ಉದ್ಯೋಗಿಗಳಿಗೆ ಮೇಲ್ ಕಳುಹಿಸಿದ್ದಾರೆ. ಕಳೆದ ತಿಂಗಳು ಗೂಗಲ್‌ನ ಮೂಲ ಕಂಪನಿ Alphabet Inc 12,000 ಉದ್ಯೋಗಿಗಳನ್ನು ಜಾಗತಿಕವಾಗಿ ವಜಾಗೊಳಿಸಿತ್ತು. ಇದರಲ್ಲಿ ವಾರ್ಷಿಕ 8 ರಿಂದ 10 ಕೋಟಿ ರೂ. ವೇತನ ಪಡೆಯುತ್ತಿದ್ದವರೂ ಸೇರಿದ್ದಾರೆ.

ಗೂಗಲ್ ಕಂಪನಿಯು 2023 ರಲ್ಲಿ ಉದ್ಯೋಗ ಕಡಿತ ಮಾಡಲಿದೆ ಎಂಬ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಊಹಾಪೋಹಗಳು ಹರಿದಾಡಿದ್ದವು. ಬಳಿಕ 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿತ್ತು. ಇದೀಗ ಭಾರತದಲ್ಲಿ 453 ಉದ್ಯೋಗಿಗಳನ್ನು ವಜಾ ಮಾಡಿದೆ. ಹಲವು ವರ್ಷಗಳ ಉದ್ಯಮ ಬೆಳವಣಿಗೆ, ನೇಮಕಾತಿಗಳ ಬಳಿಕ ಮೊದಲ ಬಾರಿಗೆ ಗೂಗಲ್ ಇಂಥ ಕ್ರಮ ಕೈಗೊಂಡಿದೆ. ಈ ಬಗ್ಗೆ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರಂತೆ.

ಸುಂದರ್ ಪಿಚೈ ಅವರು ಗೂಗಲ್​ನ ಕೆಲವೊಂದು ಉನ್ನತ ಹುದ್ದೆಗಳನ್ನೂ ಕಡಿತಗೊಳಿಸಿದ್ದು, ವಾರ್ಷಿಕ 5 ಲಕ್ಷ ಡಾಲರ್​ನಿಂದ 10 ಲಕ್ಷ ಡಾಲರ್ ವರೆಗೆ ಪಡೆಯುತ್ತಿದ್ದ ವ್ಯವಸ್ಥಾಪಕ ಸ್ಥಾನಗಳಲ್ಲಿದ್ದ ಉದ್ಯೋಗಿಗಳೂ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಕಾರ್ಯಕ್ಷಮತೆ ಪರಾಮರ್ಶೆಯ ಸಂದರ್ಭದಲ್ಲಿ ಹೆಚ್ಚಿನ ಉದ್ಯೋಗಿಗಳನ್ನು ಕಳಪೆ ಕಾರ್ಯನಿರ್ವಹಣೆ ಪಟ್ಟಿಗೆ ಸೇರಿಸುವಂತೆ ಮ್ಯಾನೇಜರ್​ಗಳಿಗೆ ಗೂಗಲ್ ಸೂಚಿಸಿತ್ತು. ಉದ್ಯೋಗ ಕಡಿತಕ್ಕೆ ಉದ್ಯೋಗಿಗಳನ್ನು ಆಯ್ಕೆ ಮಾಡುವುದನ್ನು ಸುಲಭಗೊಳಿಸುವುದಕ್ಕಾಗಿ ಕಂಪನಿಯು ಈ ಸೂಚನೆ ನೀಡಿತ್ತು.

ಇದನ್ನೂ ಓದಿ
Image
Lava Blaze 5G: ವಿದೇಶಿ ಮೊಬೈಲ್ ಕಂಪನಿಗಳ ಹುಟ್ಟಡಗಿಸಿದ ಭಾರತದ ಲಾವಾ ಬ್ಲೇಜ್ ಈಗ ಖರೀದಿಗೆ ಲಭ್ಯ
Image
Tech Tips: ಪವರ್ ಬ್ಯಾಂಕ್ ಅಲ್ಲ: ಕರೆಂಟ್ ಇಲ್ಲದೆಯೂ ನಿಮ್ಮ ಮೊಬೈಲ್ ಚಾರ್ಜ್ ಮಾಡಬಹುದು: ಹೇಗೆ ಗೊತ್ತೇ?
Image
Tech Tips: ನಿಮಗೆ ಇನ್​ಸ್ಟಾಗ್ರಾಮ್​ನಲ್ಲಿ ಬ್ಲೂ ಟಿಕ್ ಬೇಕೇ?: ವೇರಿಫೈಡ್‌ ಬ್ಯಾಡ್ಜ್ ಪಡೆಯಲು ಇಲ್ಲಿದೆ ಹೊಸ ಟ್ರಿಕ್
Image
Galaxy S23: ಸ್ಯಾಮ್​ಸಂಗ್ ಹೊಸ ಸ್ಮಾರ್ಟ್​ಫೋನ್​ ಬುಕಿಂಗ್​ಗೆ ಭರ್ಜರಿ ಆಫರ್

Vivo Y100: ಇದು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ವಿವೋದಿಂದ ಭಾರತದಲ್ಲಿ ವಿಶಿಷ್ಠ ಮೊಬೈಲ್ ರಿಲೀಸ್: ಬೆಲೆ ಎಷ್ಟು?

ಉದ್ಯೋಗ ಕಡಿತಕ್ಕೆ ಮೆಟಾ ಚಿಂತನೆ:

ಕಳೆದ ವರ್ಷ ಜಾಗತಿಕವಾಗಿ 11,000 ಉದ್ಯೋಗಿಗಳನ್ನು ವಜಾಗೊಳಿಸಿ ಸುದ್ದಿಯಾಗಿದ್ದ ಟೆಕ್ ದೈತ್ಯ ಮೆಟಾ ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಫೇಸ್​​ಬುಕ್ ಮಾಲೀಕತ್ವ ಹೊಂದಿರುವ ಕಂಪನಿಯು ಅನೇಕ ತಂಡಗಳ ಬಜೆಟ್​ ಅನ್ನು ಅಂತಿಮಗೊಳಿಸಿಲ್ಲ. ಬಜೆಟ್ ಅನ್ನು ಮುಂದೂಡಿಕೆ ಮಾಡಿದ್ದು, ಮತ್ತೊಂದು ಸುತ್ತಿನ ಉದ್ಯೋಗ ಕಡಿತದ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಬ್ರಿಟನ್​ನ ಮಾಧ್ಯಮವೊಂದು ವರದಿ ಮಾಡಿದೆ. ಮುಂದಿನ ಕೆಲವೇ ವಾರಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭವಾಗಬಹುದು. ಬಜೆಟ್​ ವಿಳಂಬಕ್ಕೆ ಇದುವೇ ಕಾರಣ ಎಂದು ಇಬ್ಬರು ಅಧಿಕೃತ ಮೂಲಗಳು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

2023ರಲ್ಲಿ ಕಂಪನಿಯ ವೆಚ್ಚಗಳು 89 ಶತಕೋಟಿ ಡಾಲರ್​​ಗಳಿಂದ 95 ಶತಕೋಟಿ ಡಾಲರ್ ಮಧ್ಯೆ ಇರಲಿದೆ ಎಂದು ಕೆಲವು ದಿನಗಳ ಹಿಂದೆ ಮೆಟಾ ಮಾಹಿತಿ ನೀಡಿತ್ತು. 2023 ದಕ್ಷತೆಯ ವರ್ಷವಾಗಿರಲಿದೆ ಎಂದು ಸಿಇಒ ಮಾರ್ಕ್ ಝುಕರ್​ಬರ್ಗ್ ಘೋಷಿಸಿದ್ದರು. ಉದ್ಯೋಗ ಕಡಿತದ ವರದಿ ನಿಜವಾದಲ್ಲಿ ಮೆಟಾ ಮತ್ತೆ ಸಾವಿರಾರು ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Fri, 17 February 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ