Tech Tips: ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು

Lost Aadhaar Card: ಎಲ್ಲಾದರು ಆಧಾರ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು?, ಇದನ್ನು ಮರಳಿ ಪಡೆಯುವುದು ಹೇಗೆ? ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ.

Tech Tips: ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು
ಆಧಾರ್ ಕಾರ್ಡ್
Follow us
|

Updated on: May 25, 2023 | 3:43 PM

ಭಾರತದಲ್ಲಿ ಪ್ರತಿಯೊಬ್ಬ ನಾಗರಿಕ ಆಧಾರ್ ಕಾರ್ಡ್ (Aadhaar card) ಹೊಂದುವುದು ಬಹುಮುಖ್ಯ. ಇಲ್ಲವಾದಲ್ಲಿ ಸರ್ಕಾರದ ಅತ್ಯಮೂಲ್ಯ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಇದೇ ಕಾರಣಕ್ಕೆ ಪ್ರತಿಯೊಬ್ಬರು ಆಧಾರ್‌ ಕಾರ್ಡ್‌ಗಳನ್ನ ಹೊಂದಿರುತ್ತಾರೆ. 2009ರಲ್ಲಿ ಭಾರತ ವಾಸಿಗಳ ಜಾಗತಿಕ ಗುರುತಿನ ಮನ್ನಣೆಗಾಗಿ ಪ್ರಾರಂಭಿಸಲಾದ ಆಧಾರ್ ಹಾಗೂ ಇದರಲ್ಲಿರುವ 12 ಅಂಕಿಗಳ ಸಂಖ್ಯೆ ಪ್ರತಿಯೊಬ್ಬ ಭಾರತೀಯನ ಗುರುತಾಗಿ ಮಾರ್ಪಟ್ಟಿದೆ. ಆಧಾರ್ ಕಾರ್ಡ್​ ಬಂದು 14 ವರ್ಷಗಳಾಗಿವೆ. ಇಂದು ಇದರಲ್ಲಿ ಅನೇಕ ಬದಲಾವಣೆ ತರಲಾಗಿದ್ದು ಆನ್​ಲೈನ್ (Online) ಮೂಲಕವೇ ಹೆಸರು, ವಿಳಾಸವನ್ನು, ಫೋಟೋ (Photo) ಕೂಡ ಬದಲಿಸಬಹುದು. ಹೀಗಿರುವಾಗ ಎಲ್ಲಾದರು ಆಧಾರ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು?, ಇದನ್ನು ಮರಳಿ ಪಡೆಯುವುದು ಹೇಗೆ? ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ.

ಆಧಾರ್ ಕಾರ್ಡ್ ಕಳೆದು ಹೋಯಿತು ಎಂದಾದರೆ ಮರಳಿ ಪಡೆಯಲು ಕೇಂದ್ರ ಸರ್ಕಾರ ಇತರೆ ಸೌಲಭ್ಯವನ್ನು ನೀಡಿದೆ. ನೀವು ಸುಲಭವಾಗಿ ಅಧಿಕೃತ ಯುಐಡಿಎಐ ವೆಬ್‌ಸೈಟ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ಬಳಸಿ ಮರಳಿ ಪಡೆಯಬಹುದು. ಆಧಾರ್ ಕಾರ್ಡ್ ನೋಂದಣಿ ಸಂಖ್ಯೆಯನ್ನು ಒದಗಿಸುವ ಮೂಲಕವೂ ಯುಐಡಿಎಐನ ಅಧಿಕೃತ ವೆಬ್​ಸೈಟ್‌ನಿಂದ ನಕಲಿ ಆಧಾರ್ ಕಾರ್ಡ್ ಪಡೆಯಲು ಅವಕಾಶವಿದೆ. ಆದರೆ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ನೀಡಿದರೇ ಮಾತ್ರ ಒಟಿಪಿ ಬರುತ್ತದೆ. ಅದಕ್ಕೆ 50 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಮೊಬೈಲ್ ನಂಬರ್ ಲಿಂಕ್ ಆಗಿದ್ದರೇ ನೋಂದಣಿ ಸಂಖ್ಯೆ ಅಗತ್ಯವಿಲ್ಲ.

ಇಲ್ಲಿ ಒಟಿಪಿ ಲಿಂಕ್ ಮಾಡಿದ ಮೊಬೈಲ್ ನಂಬರ್​ಗೆ ಅಥವಾ ಇ-ಮೇಲ್ ಐಡಿಗೆ ಮಾತ್ರ ಕಳುಹಿಸಲಾಗುತ್ತದೆ. ಸ್ವೀಕರಿಸಿದ ಒಟಿಪಿಯನ್ನು ನಮೂದಿಸುವ ಮೂಲಕ ನೀವು ಧೃಡಿಕರಿಸಿದ ನಂತರ, ನಿಮ್ಮ ಆಧಾರ್ ಸಂಖ್ಯೆಯನ್ನು ಮೊಬೈಲ್ ಸಂಖ್ಯೆ ಅಥವಾ ಇ-ಮೇಲ್ ಐಡಿಗೆ ಕಳುಹಿಸಲಾಗುತ್ತದೆ. ಸ್ವೀಕರಿಸಿದ ಆಧಾರ್ ಸಂಖ್ಯೆಯನ್ನು ನಿಮ್ಮ ಆಧಾರ್ ಡೌನ್‌ಲೋಡ್ ಮಾಡಲು ಅಥವಾ ನಿಮ್ಮ ಆಧಾರ್‌ನ ಮರುಮುದ್ರಣಕ್ಕೆ ಆದೇಶಿಸಬಹುದು. ಇದಕ್ಕೂ ಮುನ್ನ ಆಧಾರ್ ಕಳೆದುಕೊಂಡ ತಕ್ಷಣ ಅದನ್ನು ಲಾಕ್ ಮಾಡುವುದು ಮುಖ್ಯ.

ಇದನ್ನೂ ಓದಿ
Image
iQOO Neo 8 Series: ಮಾರುಕಟ್ಟೆಗೆ ಎಂಟ್ರಿಕೊಟ್ಟಿದೆ 120W ಫಾಸ್ಟ್ ಚಾರ್ಜರ್ ಎರಡು ಹೊಸ ಐಕ್ಯೂ ಸ್ಮಾರ್ಟ್​ಫೋನ್
Image
Ashwini Vaishnaw: 6ಜಿ ತಂತ್ರಜ್ಞಾನದಲ್ಲಿ ಜಗತ್ತಿನ ಮುಂದಾಳತ್ವ ವಹಿಸಬಹುದು ಭಾರತ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
Image
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೀಗೂ ಬಳಕೆಯಾಗುತ್ತಾ? ಕಲಾವಿದ ಮಾಡಿದ ಮೋಡಿ ನೋಡಿ!
Image
Nokia C32: 50 ಮೆಗಾಪಿಕ್ಸೆಲ್ ಕ್ಯಾಮೆರಾ ನೋಕಿಯಾ ಫೋನ್ ₹8,999 ದರ

ಆಧಾರ್ ನಂಬರ್ ಲಾಕ್ ಮಾಡಿ:

ಆಧಾರ್ ಕಾರ್ಡ್ ಕಳೆದು ಹೋದರೆ ಮೊದಲು ಆಧಾರ್ ಸಂಖ್ಯೆಯನ್ನ ಲಾಕ್ ಮಾಡಬೇಕು. ನಂತರ ಅನ್​ಲಾಕ್ ಮಾಡುವ ಮೂಲಕ ಬಳಸಬಹುದಾಗಿದೆ. ಈ ಬಗ್ಗೆ ಯುಐಡಿಐಡಿ ಅಧಿಕೃತ ವೆಬ್​ಸೈಟ್​ನಲ್ಲಿ ಮಾಹಿತಿ ನೀಡಲಾಗಿದೆ

  • ಮೊದಲಿಗೆ https://resident.uidai.in/ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ನಂತರ ‘ನನ್ನ ಆಧಾರ್’ ಆಯ್ಕೆಯಲ್ಲಿ ‘ಆಧಾರ್ ಸರ್ವೀಸ್’ ಸೆಲೆಕ್ಟ್ ಮಾಡಿ.
  • ಇಲ್ಲಿ ಲಾಕ್​ ಅನ್​ಬಯೋಮೆಟ್ರಿಕ್ ಆಧಾರ್ ಸರ್ವೀಸ್ ಆಯ್ಕೆ ಕಾಣಿಸುತ್ತದೆ. ಅಲ್ಲಿ ಕ್ಲಿಕ್ ಮಾಡಿ.
  • 12 ಅಂಕಿಯ ಆಧಾರ್ ಸಂಖ್ಯೆಯನ್ನ ನಮೂದಿಸುವ ಮೂಲಕ ಲಾಗ್ ಇನ್ ಆಗಿ.
  • ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ಸೆಂಡ್ ಓಟಿಪಿ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಒಟಿಪಿ ಹಾಕಿದ ನಂತರ ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮಾಡುವ ಆಯ್ಕೆ ಕಾಣಿಸುತ್ತದೆ.
  • ಈಗ ಬಯೋಮೆಟ್ರಿಕ್ ಡೇಟಾವನ್ನು ಕ್ಲಿಕ್ ಮಾಡಿದರೆ ನಿಮ್ಮ ಆಧಾರ್ ಲಾಕ್ ಆಗುತ್ತದೆ.

Boat Storm Connect Plus: ಜನಪ್ರಿಯ ಸ್ಮಾರ್ಟ್​​ವಾಚ್ ಬ್ರ್ಯಾಂಡ್ ಬೋಟ್​ನಿಂದ ಮತ್ತೊಂದು ವಾಚ್ ಬಿಡುಗಡೆ

ಇ-ಆಧಾರ್ ಪಡೆಯುವುದು ಹೇಗೆ?:

  • ಅಧಿಕೃತ ಯುಐಡಿಎಐ ವೆಬ್‌ಸೈಟ್‌ https://uidai.gov.in/ ಗೆ ಭೇಟಿ ನೀಡಿ.
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ವಿವರ ನಮೂದಿಸಿ (ಆಧಾರ್​ನಲ್ಲಿ ಇರುವಂತೆ ಬರೆಯಬೇಕು).
  • ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ನಮೂದಿಸಿ ಮುಂದುವರೆಯಿರಿ.
  • ನಿಮ್ಮ ಮೊಬೈಲ್ ನಂಬರ್​ಗೆ ಆಧಾರ್ ಅಥವಾ ದಾಖಲಾತಿ ಐಡಿ ಬಂದ ನಂತರ https://eaadhaar.uidai.gov.in/ ಭೇಟಿ ನೀಡಿ.
  • ಅಲ್ಲಿ ನೀವು ಆಧಾರ್ ನಂಬರ್ ಅಥವಾ ದಾಖಲಾತಿ ಸಂಖ್ಯೆ ನಮೂದಿಸಬೇಕು.
  • ಆಧಾರ್ ನಂಬರ್ ನಮೂದಿಸಿ, ವಿಳಾಸ, ಪಿನ್ ಕೋಡ್, ಸೆಕ್ಯುರಿಟಿ ಕೋಡ್ ಮತ್ತು ಮೊಬೈಲ್ ನಂಬರ್ ನಮೂದಿಸಿ.
  • ನಿಮ್ಮ ಮೊಬೈಲ್ ನಂಬರ್​ಗೆ ಬರುವ OTP ನಮೂದಿಸಿ ಹಾಗೂ Validate and Generat ಮೇಲೆ ಕ್ಲಿಕ್ ಮಾಡಿ.
  • ಇಲ್ಲಿ ನೀವು ಆನ್​ಲೈನ್​ ಮೂಲಕವೇ ಆಧಾರ್ ಕಾರ್ಡ್ ಡೌನ್​ಲೋಡ್ ಮಾಡಬಹುದು. ಅಥವಾ ಪಿಡಿಎಫ್ ಫೈಲ್ ಮೂಲಕವೂ ಪಡೆಯಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್