Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ತಪ್ಪಿ ಬೇರೆಯವರ ನಂಬರ್​ಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ ಪಡೆಯುವುದು ಹೇಗೆ?

ನೀವು ತಪ್ಪಾಗಿ ಅಥವಾ ತರಾತುರಿಯಲ್ಲಿ ರಾಂಗ್ ನಂಬರ್‌ಗೆ ರೀಚಾರ್ಜ್ ಮಾಡಿದ್ದರೆ, ನೀವು ಸಿಮ್ ಕಾರ್ಡ್ ಬಳಸುತ್ತಿರುವ ಟೆಲಿಕಾಂ ಆಪರೇಟರ್‌ನ ಕಸ್ಟಮರ್ ಕೇರ್‌ಗೆ ತಕ್ಷಣ ಕರೆ ಮಾಡಿ ಮತ್ತು ಅವರಿಗೆ ಎಲ್ಲಾ ಮಾಹಿತಿಯನ್ನು ನೀಡಿ.

Tech Tips: ತಪ್ಪಿ ಬೇರೆಯವರ ನಂಬರ್​ಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
Follow us
Vinay Bhat
|

Updated on:Jun 09, 2023 | 1:24 PM

ಇಂದು ತಂತ್ರಜ್ಞಾನ (Technology) ಮಾರುಕಟ್ಟೆ ಸಾಕಷ್ಟು ಬೆಳವಣಿಗೆ ಕಂಡಿದ್ದು ಇಂದು ಮನೆಯಲ್ಲಿಯೇ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಅನೇಕ ಅಪ್ಲಿಕೇಷನ್​ಗಳಿಗೆ. ಫೋನ್ ಪೇ (PhonePe), ಗೂಗಲ್ ಪೇ, ಪೇಟಿಎಂ ಅಥವಾ ಆ ಟೆಲಿಕಾಂ ಸಂಸ್ಥೆಯದ್ದೇ ಆ್ಯಪ್​ಗಳು ಇದೆ. ಆದರೆ ಅನೇಕ ಬಾರಿ ನಾವು ತರಾತುರಿಯಲ್ಲಿ ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡುತ್ತೇವೆ. ಅದು ಸಣ್ಣ ಮೊತ್ತದ ರೀಚಾರ್ಜ್ ಆಗಿದ್ದರೆ ನಿರ್ಲಕ್ಷಿಸುತ್ತಾರೆ, ಅದೇ ದೊಡ್ಡ ಮೊತ್ತ ರಾಂಗ್ ನಂಬರ್​ಗೆ (Wrong Number) ರೀಚಾರ್ಜ್ ಆಗಿದ್ದರೆ ಟೆನ್ಶನ್ ಆಗುತ್ತದೆ. ಆದರೆ, ರಾಂಗ್ ನಂಬರ್​ಗೆ ರೀಚಾರ್ಜ್ ಮಾಡಿದರೆ ಈ ಹಣ ಹಿಂಪಡೆಯಬಹುದು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.

ನೀವು ತಪ್ಪು ಸಂಖ್ಯೆ ನಮೂದಿಸಿದರೆ ಏನು ಮಾಡಬೇಕು?:

ನೀವು ತಪ್ಪಾಗಿ ಅಥವಾ ತರಾತುರಿಯಲ್ಲಿ ರಾಂಗ್ ನಂಬರ್‌ಗೆ ರೀಚಾರ್ಜ್ ಮಾಡಿದ್ದರೆ, ನೀವು ಸಿಮ್ ಕಾರ್ಡ್ ಬಳಸುತ್ತಿರುವ ಟೆಲಿಕಾಂ ಆಪರೇಟರ್‌ನ ಕಸ್ಟಮರ್ ಕೇರ್‌ಗೆ ತಕ್ಷಣ ಕರೆ ಮಾಡಿ ಮತ್ತು ಅವರಿಗೆ ಎಲ್ಲಾ ಮಾಹಿತಿಯನ್ನು ನೀಡಿ. ಅಂದರೆ ನೀವು ಎಷ್ಟು ಮೊತ್ತ ರೀಚಾರ್ಜ್ ಮಾಡಿದ್ದೀತಿ, ಯಾವ ಕಂಪನಿಯ ನಂಬರ್ ರೀಚಾರ್ಜ್ ಮಾಡಲಾಗಿದೆ ಹಾಗೂ ಯಾವ ಆ್ಯಪ್​ ಅನ್ನು ರೀಚಾರ್ಜ್ ಮಾಡಲು ಬಳಸಿದ್ದೀರಿ, ಹೀಗೆ ಎಲ್ಲ ಮಾಹಿತಿಯನ್ನು ಟೆಲಿಕಾಂ ಆಪರೇಟರ್‌ಗೆ ನೀಡಬೇಕು.

Apple Vision Pro: ಆ್ಯಪಲ್ ವಿಆರ್ ಹೆಡ್​ಸೆಟ್ ವಿಶನ್ ಪ್ರೊ ಬೆಲೆ ಭಾರತದಲ್ಲಿ ₹2,88,700!!

ಇದನ್ನೂ ಓದಿ
Image
Realme 11 Pro+ 5G: ಭಾರತಕ್ಕೆ ಬಂದೇ ಬಿಡ್ತು ರಿಯಲ್ ಮಿಯ ಚೊಚ್ಚಲ 200MP ಕ್ಯಾಮೆರಾ ಫೋನ್: ಬೆಲೆ ಕೇವಲ 27,999 ರೂ.
Image
Blue Tick: ಫೇಸ್​ಬುಕ್,​ ಇನ್​ಸ್ಟಾಗ್ರಾಮ್​ನಲ್ಲಿ ಬಂದಿದೆ ಹಣ ಕೊಟ್ಟು ಬ್ಲೂ ಟಿಕ್ ಪಡೆಯುವ ಆಯ್ಕೆ: ಬೆಲೆ ಎಷ್ಟು ನೋಡಿ?
Image
Lava Agni 5G: ಭಾರತದಲ್ಲಿ ಮತ್ತೊಮ್ಮೆ ಸೇಲ್ ಕಾಣುತ್ತಿದೆ ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಲಾವಾ ಅಗ್ನಿ 5G ಫೋನ್
Image
WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್: ಫೋಟೋ ಶೇರ್ ಮಾಡುವಾಗ ಸಿಗುತ್ತೆ ಈ ಆಯ್ಕೆ

ಇದಲ್ಲದೆ, ನೀವು ತಪ್ಪಾಗಿ ರೀಚಾರ್ಜ್ ಮಾಡಿದ ಬಗ್ಗೆ ಸಂಪೂರ್ಣ ವಿವರಗಳನ್ನು ಇಮೇಲ್ ಮೂಲಕ ಸಂಬಂಧಪಟ್ಟ ಕಂಪನಿಗೆ ಕಳುಹಿಸಬಹುದು. ಈ ಮೂಲಕ ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಭಾರತದಲ್ಲಿ ಹೆಚ್ಚಿನ ಜನರು ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಸಿಮ್ ಕಾರ್ಡ್‌ಗಳನ್ನು ಬಳಸುತ್ತಾರೆ. ನೀವು ಈ ಟೆಲಿಕಾಂ ಕಂಪನಿಯ ಇಮೇಲ್ ಐಡಿಯನ್ನು ಸುಲಭವಾಗಿ ಪಡೆಯಬಹುದು. ಹೀಗೆ ಅವರಿಗೆ ಮೇಲ್ ಮೂಲಕ ಸ್ಪಷ್ಟ ಮಾಹಿತಿಯನ್ನು ನೀಡಿ.

ಟೆಲಿಕಾಂ ಕಂಪನಿ ಪ್ರತಿಕ್ರಿಯಿಸದಿದ್ದಲ್ಲಿ ಏನು ಮಾಡುವುದು?:

ಅನೇಕ ಬಾರಿ ಟೆಲಿಕಾಂ ಕಂಪನಿಗಳು ಗ್ರಾಹಕರ ದೂರುಗಳನ್ನು ಸ್ವೀಕರಿಸುವುದಿಲ್ಲ. ದೀರ್ಘಕಾಲದವರೆಗೆ ಕರೆಯಲ್ಲಿ ಕಾದರೂ ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಕೆಲವು ಬಾರಿ ಕಾಲ್ ಕನೆಕ್ಟ್ ಕೂಡ ಆಗುವುದಿಲ್ಲ. ಟೆಲಿಕಾಂ ಕಂಪನಿಯು ನಿಮ್ಮ ದೂರಿನ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳದಿದ್ದರೂ ಸಹ, ನೀವು ಕಸ್ಟಮರ್ ಕೇರ್ ಪೋರ್ಟಲ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಬಹುದು. ಅಥವಾ ನಿಮ್ಮ ದೂರನ್ನು ವಾಟ್ಸ್​ಆ್ಯಪ್ ಮೂಲಕವೂ ದಾಖಲಿಸಬಹುದು. ಇದಲ್ಲದೆ, ನೀವು ಪ್ಲೇ ಸ್ಟೋರ್‌ನಿಂದ ಗ್ರಾಹಕ ಸೇವಾ ಪೋರ್ಟಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಮೂಲಕವೂ ದೂರು ಸಲ್ಲಿಸಬಹುದು.

ಈ ವಿಚಾರ ನೆನಪಿನಲ್ಲಿಡಿ:

ಆದರೆ ಒಂದು ವಿಷಯ ನೆನಪಿಡಿ, ನೀವು ಸಮಯಕ್ಕೆ ಸರಿಯಾಗಿ ದೂರು ಸಲ್ಲಿಸಿದರೆ ಮಾತ್ರ ನಿಮ್ಮ ಹಣವನ್ನು ನೀವು ಹಿಂಪಡೆಯಬಹುದು. ಅಲ್ಲದೆ ನಿಮ್ಮ ಮೊಬೈಲ್ ಸಂಖ್ಯೆಯು ರೀಚಾರ್ಜ್ ಮಾಡಿದ ಸಂಖ್ಯೆಯೊಂದಿಗೆ ಹೊಂದಾಣಿಕೆಯಾಗಬೇಕು. ಅಂದರೆ, ಒಂದು ಅಥವಾ ಎರಡು ಸಂಖ್ಯೆಗಳಿಂದಾಗಿ ರೀಚಾರ್ಜ್ ತಪ್ಪು ಸಂಖ್ಯೆಗೆ ಹೋದರೆ, ಹಣವನ್ನು ಮರಳಿ ಪಡೆಯುವ ಅವಕಾಶವಿದೆ. ಅದೇ ಸಂಪೂರ್ಣ ಸಂಖ್ಯೆ ವಿಭಿನ್ನವಾಗಿದ್ದರೆ, ಅಂತಹ ಸಂದರ್ಭದಲ್ಲಿ ಕಂಪನಿಯು ಪಾವತಿಸಲು ಹಿಂಜರಿಯುತ್ತದೆ. ಏಕೆಂದರೆ ಅನೇಕ ಜನರು ಉದ್ದೇಶಪೂರ್ವಕವಾಗಿ ಈರೀತಿ ಮಾಡುವವರೂ ಇರುತ್ತಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Fri, 9 June 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ