AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಇನ್ಮುಂದೆ ಹಣ ಬೇಕು ಅಂದ್ರೆ ಎಟಿಎಂಗೆ ಹೋಗಬೇಕಿಲ್ಲ: ಈ ಶಾಪ್​ನಲ್ಲಿ ಸಿಗುತ್ತದೆ

Virtual ATM: ಕೆಲವು ಸಂದರ್ಭದಲ್ಲಿ ನಿಮಗೆ ಅಗತ್ಯವಾಗಿ ನಗದು ಹಣ ಬೇಕಾಗಿರುತ್ತದೆ. ಆಗ ಯುಪಿಐ ಕಾರ್ಯನಿರ್ವಹಿಸುವುದಿಲ್ಲ. ಕೈಯಲ್ಲಿ ಡೆಬಿಟ್ ಕಾರ್ಡ್ ಇರುವುದಿಲ್ಲ, ಇದ್ದರೂ ಎಟಿಎಂನಲ್ಲಿ ಹಣ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ವರ್ಚುವಲ್ ಎಟಿಎಂ ಸಹಾಯದಿಂದ ಕ್ಯಾಶ್ ಪಡೆಯಬಹುದು. ಇದು ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನೋಡಿ.

Tech Tips: ಇನ್ಮುಂದೆ ಹಣ ಬೇಕು ಅಂದ್ರೆ ಎಟಿಎಂಗೆ ಹೋಗಬೇಕಿಲ್ಲ: ಈ ಶಾಪ್​ನಲ್ಲಿ ಸಿಗುತ್ತದೆ
ATM Cash
Vinay Bhat
|

Updated on: Feb 15, 2024 | 11:48 AM

Share

ಇಂದು ಏಕೀಕೃತ ಪಾವತಿ ಇಂಟರ್ಫೇಸ್ ಅಂದರೆ ಯಪಿಐ (UPI) ದೇಶದಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಬಳಕೆದಾರರು ಮೊಬೈಲ್ ಮತ್ತು ಇಂಟರ್ನೆಟ್ ಬಳಸಿ ಆನ್‌ಲೈನ್ ಮೂಲಕ ಪಾವತಿಗಳನ್ನು ಮಾಡುತ್ತಾರೆ. ಹೀಗಾಗಿ ಅನೇಕರು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಉಪಯೋಗಿಸುವುದೂ ಇಲ್ಲ. ಆದರೆ ದೂರದ ಪ್ರದೇಶಗಳಲ್ಲಿ ಇಂಟರ್ನೆಟ್ ಕೆಲಸ ಮಾಡದಿದ್ದರೆ ನಗದು ಹಣ ಅಗತ್ಯವಿರುತ್ತದೆ. ಅಥವಾ QR ಕೋಡ್ ಅನ್ನು ವಿವಿಧ ಪ್ರದೇಶಗಳಲ್ಲಿ ಆನ್‌ಲೈನ್ ಪಾವತಿಗಾಗಿ ಇರಿಸಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಟಿಎಂ ಹುಡುಕುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಹಾಗೊಂದು ವೇಳೆ ಎಟಿಎಂ ಸಿಕ್ಕರೂ ಅದರಲ್ಲಿ ಹಣ ಇಲ್ಲದಿದ್ದರೆ ಏನು ಮಾಡುವುದು?.

ಇಂಥ ಸಮಸ್ಯೆಗೆ ಇದೀಗ ಪರಿಹಾರ ಸಿಕ್ಕಿದೆ. ಅದೇ ವರ್ಚುವಲ್ ಎಟಿಎಂ. ವರ್ಚುವಲ್ ಎಟಿಎಂ ಸಹಾಯದಿಂದ ನೀವು ಈ ಎಲ್ಲಾ ಸಮಸ್ಯೆಗಳನ್ನು ತೊಡೆದುಹಾಕಬಹುದು. ಇದು ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನೋಡಿ.

ಯಾರಾದರು ನಿಮಗೆ ತಪ್ಪಾಗಿ ಹಣ ಕಳುಹಿಸಿದರೆ ಖುಷಿ ಪಡಬೇಡಿ: ಇದರ ಹಿಂದಿದೆ ಅತಿ ದೊಡ್ಡ ಜಾಲ

ವರ್ಚುವಲ್ ಎಟಿಎಂ ಎಂದರೇನು?

ಚಂಡೀಗಢ ಮೂಲದ ಫಿನ್‌ಟೆಕ್ ಕಂಪನಿಯು ವರ್ಚುವಲ್ ಎಟಿಎಂ ವ್ಯವಸ್ಥೆಯನ್ನು ಪ್ರಾರಂಭಿಸಿದೆ. ಇದು ಕಾರ್ಡ್‌ಲೆಸ್ ಮತ್ತು ಹಾರ್ಡ್‌ವೇರ್ ಲೆಸ್ ವಾಪಸಾತಿ ಸೇವೆಯಾಗಿದೆ. ಇದಕ್ಕೆ ಎಟಿಎಂ ಕಾರ್ಡ್ ಮತ್ತು ಪಿನ್ ಅಗತ್ಯವಿಲ್ಲ.

ವರ್ಚುವಲ್ ಎಟಿಎಂನಿಂದ ಹಣವನ್ನು ಪಡೆಯುವುದು ಹೇಗೆ

ವರ್ಚುವಲ್ ಎಟಿಎಂನಿಂದ ಹಣವನ್ನು ಹಿಂಪಡೆಯಲು ಸ್ಮಾರ್ಟ್​ಫೋನ್ ಅಗತ್ಯವಿದೆ. ಜೊತೆಗೆ ಮೊಬೈಲ್ ಬ್ಯಾಂಕಿಂಗ್ ಮತ್ತು ಇಂಟರ್ನೆಟ್ ಬೇಕು. ನಂತರ ನೀವು ಆನ್‌ಲೈನ್ ಮೊಬೈಲ್ ಬ್ಯಾಂಕಿಂಗ್‌ನಿಂದ ಹಣವನ್ನು ಹಿಂಪಡೆಯಲು ಮನವಿಯನ್ನು ಸಲ್ಲಿಸಬೇಕಾಗುತ್ತದೆ. ಇದಕ್ಕೂ ಮುನ್ನ ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ನಿಮ್ಮ ಫೋನ್ ನಂಬರ್​ಗೆ ಲಿಂಕ್ ಆಗಿರಬೇಕು.

OTP ಮೂಲಕ ಕಾರ್ಯ

ನಂತರ ನೀವು ಬ್ಯಾಂಕ್ ನೀಡುವ OTP ಅನ್ನು ನಮೂದಿಸಬೇಕು. ಈಗ ನೀವು ಪೇಮಾರ್ಟ್ ಅಂಗಡಿಯಲ್ಲಿ OTP ತೋರಿಸಬೇಕು. ಈ ರೀತಿಯಾಗಿ ಅಂಗಡಿಯವರಿಂದ ಹಣವನ್ನು ಹಿಂಪಡೆಯಬಹುದು. ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ನಿಮಗೆ ವರ್ಚುವಲ್ Paytm Paymart ನ ಅಂಗಡಿದಾರರ ಪಟ್ಟಿಯನ್ನು ತೋರಿಸುತ್ತದೆ, ಅಲ್ಲಿ ಹೆಸರು, ಸ್ಥಳ, ಫೋನ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅಗತ್ಯವಿಲ್ಲ.

ಸ್ಯಾಮ್​ಸಂಗ್​ನ ಈ ಫೋನ್ ಬೆಲೆ ಭಾರತದಲ್ಲಿ ರೂ. 48,999, ಆದರೆ ಪಾಕಿಸ್ತಾನದಲ್ಲಿ 1.85 ಲಕ್ಷ

ವರ್ಚುವಲ್ ATM ಅನ್ನು ಯಾರು ಬಳಸಬಹುದು?

ವರ್ಚುವಲ್ ಎಟಿಎಂ ಐಡಿಬಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಜಮ್ಮು ಕಾಶ್ಮೀರ ಬ್ಯಾಂಕ್ ಜೊತೆ ಪಾಲುದಾರಿಕೆ ಹೊಂದಿದೆ. ಪ್ರಸ್ತುತ, ಚಂಡೀಗಢ, ದೆಹಲಿ, ಹೈದರಾಬಾದ್, ಚೆನ್ನೈ, ಮುಂಬೈನ ಆಯ್ದ ಸ್ಥಳಗಳಲ್ಲಿ ವರ್ಚುವಲ್ ಎಟಿಎಂಗಳನ್ನು ಕಾಣಬಹುದು. ಇದು ಈ ವರ್ಷದ ಮಾರ್ಚ್ ವೇಳೆಗೆ ದೇಶಾದ್ಯಂತ ಲಭ್ಯವಾಗಲಿದೆ.

ಎಷ್ಟು ಹಣವನ್ನು ಹಿಂಪಡೆಯಬಹುದು?

ವರ್ಚುವಲ್ ಎಟಿಎಂನಿಂದ ನೀವು ಕನಿಷ್ಟ 100 ರೂ. ಮತ್ತು ಗರಿಷ್ಠ 2,000 ರೂ. ವರೆಗೆ ಪಡೆಯಬಹುದು. ಇದರ ಮಾಸಿಕ ಮಿತಿ 10 ಸಾವಿರ ರೂ. ಅಂದರೆ ತಿಂಗಳಿಗೆ 10 ಸಾವಿರ ರೂಪಾಯಿಗಿಂತ ಹೆಚ್ಚು ಹಣವನ್ನು ಹಿಂಪಡೆಯುವಂತಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ