Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Attack: 829 ಮಿಲಿಯನ್ ಸೈಬರ್ ದಾಳಿ: 2022 ರಲ್ಲಿ ಅತಿ ಹೆಚ್ಚು ಸೈಬರ್ ಅಟ್ಯಾಕ್ ಆಗಿದ್ದೇ ಭಾರತದಲ್ಲಿ

2022 ರ ನಾಲ್ಕನೇ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಪತ್ತೆ ಹಚ್ಚಿದ ಮತ್ತು ನಿರ್ಬಂಧಿಸಿದ 829 ಮಿಲಿಯನ್ ಸೈಬರ್ ದಾಳಿಗಳಲ್ಲಿ, 59 ಪ್ರತಿಶತದಷ್ಟು ಭಾರತದಲ್ಲೇ ಜರುಗಿದ ಘಟನೆಗಳು ಎಂದು ಉಲ್ಲೇಖಿಸಲಾಗಿದೆ.

Cyber Attack: 829 ಮಿಲಿಯನ್ ಸೈಬರ್ ದಾಳಿ: 2022 ರಲ್ಲಿ ಅತಿ ಹೆಚ್ಚು ಸೈಬರ್ ಅಟ್ಯಾಕ್ ಆಗಿದ್ದೇ ಭಾರತದಲ್ಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Vinay Bhat

Updated on:Dec 31, 2022 | 12:59 PM

ವಿಶ್ವದಲ್ಲಿ ಸೈಬರ್ ದರೋಡೆಕೋರರ (Cyber Fraud) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೋಸ ಮಾಡಲು ಒಂದಲ್ಲ ಒಂದು ಹೊಸ ಮಾರ್ಗಗಳನ್ನು ಕಂಡುಹಿಡಿಯುತ್ತಿದ್ದಾರೆ. ಅನಾಮಿಕರ ಮಾತು ನಂಬಿ ಒಟಿಪಿ (OTP) ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ ಇದೆ. ಈ ಹಿಂದೆ ವಿದ್ಯುತ್ ಬಿಲ್, ಓಟಿಪಿ ಮೂಲಕ ಹಣ ದೋಚಿಕೊಳ್ಳುತ್ತಿದ್ದ ಖದೀಮರು ಈಗೀಗ ಫೋನ್‌ಗೆ ಮಿಸ್ಡ್‌ಕಾಲ್‌ (Missed Call) ಕೊಡುವ ಮೂಲಕ ಸಿಮ್ ಸ್ವ್ಯಾಪ್ ಮಾಡಿ ಹಣ ಖದಿಯುವ ರಹಸ್ಯ ದಾರಿಯನ್ನೂ ಹುಡುಕಿದ್ದಾರೆ. ಅಚ್ಚರಿ ಎಂದರೆ ಇತರೆ ದೇಶಗಳಿಗೆ ಹೋಲಿಸಿದರೆ ಸೈಬರ್ ಅಟ್ಯಾಕ್ ಹೆಚ್ಚಾಗಿ ನಡೆಯುತ್ತಿರುವುದು ಭಾರತದಲ್ಲೇ.

2022 ರಲ್ಲಿ ಭಾರತವು ಸೈಬರ್‌ ಅಟ್ಯಾಕ್‌ಗಳಿಗೆ ಗುರಿಯದ ಪ್ರಮುಖ ದೇಶವಾಗಿದೆ ಎಂದು ವೆಬ್ ಭದ್ರತಾ ಸಂಸ್ಥೆ ಇಂಡಸ್‌ಫೇಸ್ ಅಧ್ಯಯನದಿಂದ ತಿಳಿದುಬಂದಿದೆ. 2022 ರ ನಾಲ್ಕನೇ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಪತ್ತೆ ಹಚ್ಚಿದ ಮತ್ತು ನಿರ್ಬಂಧಿಸಿದ 829 ಮಿಲಿಯನ್ ಸೈಬರ್ ದಾಳಿಗಳಲ್ಲಿ, 59 ಪ್ರತಿಶತದಷ್ಟು ಭಾರತದಲ್ಲೇ ಜರುಗಿದ ಘಟನೆಗಳು ಎಂದು ಉಲ್ಲೇಖಿಸಲಾಗಿದೆ. ಇದರಲ್ಲಿ ನಮ್ಮವರೇ ಭಾಗಿಯಾಗಿರುವುದು ಅತ್ಯಂತ ಕೆಟ್ಟ ಘಟನೆಯಾಗಿದೆ ಎಂದು ಹೇಳಿದೆ.

Infinix Zero Ultra: 200MP ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?

ಇದನ್ನೂ ಓದಿ
Image
Reliance Jio 5G: ಮೈಸೂರು ಬಳಿಕ ಮತ್ತೆರಡು ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಆರಂಭ
Image
Flipkart Year End Sale: ಫ್ಲಿಪ್​ಕಾರ್ಟ್ ಇಯರ್ ಎಂಡ್ ಸೇಲ್ ಆಫರ್ ಮಾಡಬೇಡಿ: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
Image
iQoo Neo 7: 50MP ಕ್ಯಾಮೆರಾ, 120W ಫಾಸ್ಟ್ ಚಾರ್ಜರ್: ಐಕ್ಯೂ ನಿಯೋ 7 ರೇಸಿಂಗ್ ಎಡಿಷನ್ ಸ್ಮಾರ್ಟ್​ಫೋನ್ ಬಿಡುಗಡೆ
Image
WhatsApp: ಹೊಸ ವರ್ಷಕ್ಕೆ ಮೆಟಾದಿಂದ ಬಿಗ್ ಶಾಕ್: ಈ ಆಂಡ್ರಾಯ್ಡ್-ಐಫೋ​ನ್​ನಲ್ಲಿ ವಾಟ್ಸ್​ಆ್ಯಪ್ ಬಂದ್

ಭಾರತ, ಯುಎಸ್ಎ, ಇಂಡೋನೇಷ್ಯಾ ಮತ್ತು ಚೀನಾ ಕಳೆದ ಎರಡು ವರ್ಷಗಳಲ್ಲಿ ಹೆಚ್ಚು ಸೈಬರ್‌ ದಾಳಿಗೆ ಗುರಿಯಾದ ಪ್ರಮುಖ ದೇಶಗಳಾಗಿದ್ದು, ನಾಲ್ಕು ದೇಶಗಳಲ್ಲಿ ಒಟ್ಟಾಗಿ 40 ಕ್ಕೂ ಹೆಚ್ಚಿನ ಪ್ರತಿಶತ ಘಟನೆ ವರದಿ ಮಾಡಿವೆ. ಹಾಗೆಯೇ ಈ ಸೈಬರ್ ದಾಳಿಗಳ ಪ್ರಾಥಮಿಕ ಉದ್ದೇಶವು ಹಣಕಾಸಿನ ಲಾಭಗಳಿಗಷ್ಟೇ ಅಲ್ಲದೆ ಒಂದು ನಿರ್ದಿಷ್ಟ ರಾಜಕೀಯ, ಧಾರ್ಮಿಕ ಅಥವಾ ಆರ್ಥಿಕ ಗುರಿಗಾಗಿ ಬೆಂಬಲ ಅಥವಾ ವಿರೋಧವನ್ನು ವ್ಯಕ್ತಪಡಿಸುವ ಮಾರ್ಗವಾಗಿ ಬಳಕೆ ಮಾಡಿಕೊಳ್ಳಲಾಗಿದೆ.

ಆಗಸ್ಟ್ 2019 ರಿಂದ ಡಿಸೆಂಬರ್ 12, 2022 ರವರೆಗೆ ಭಾರತದಲ್ಲಿ ಸೈಬರ್ ವಂಚನೆಯ 6 ಲಕ್ಷಕ್ಕೂ ಅಧಿಕ ದೂರುಗಳು ದಾಖಲಾಗಿವೆ. 1 ಲಕ್ಷದ 11 ಸಾವಿರ ದೂರುಗಳಲ್ಲಿ 188 ಸಾವಿರ ಕೋಟಿ ರೂಪಾಯಿ ವಂಚನೆಯಿಂದ ಉಳಿಸಲಾಗಿದೆ. ಯಾರಾದರೂ ಸೈಬರ್ ವಂಚನೆ ಮೂಲಕ ಹಣ ಕಳೆದುಕೊಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯಾದ 1930ಕ್ಕೆ ಕರೆ ಮಾಡಿ ವಿಷಯ ತಿಳಿಸಿದರೆ ಸೈಬರ್ ಕ್ರೈಂ ವಿಭಾಗದ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ನಿಮ್ಮ ಮಾಹಿತಿಯನ್ನು ಆಧರಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡುತ್ತಾರೆ. ಇದರಿಂದ ನಿಮ್ಮ ಖಾತೆಯಿಂದ ಬೇರೆಯವರಿಗೆ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಇದರ ಜೊತೆಗೆ www.cybercrime.gov.in ಮೂಲಕವೂ ದೂರು ನೀಡಬಹುದು. ಈ ಮೂಲಕ ಸೈಬರ್ ವಂಚಕರ ಮೋಸದ ಜಾಲ ನಿಯಂತ್ರಣಕ್ಕೆ ಮಹತ್ವದ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Sat, 31 December 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!