AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Microsoft: ಮೈಕ್ರೋಸಾಫ್ಟ್ ಬಳಕೆದಾರರಿಗೆ ಭಾರತ ಸರ್ಕಾರದಿಂದ ತುರ್ತು ಎಚ್ಚರಿಕೆ: ತಕ್ಷಣ ಅಪ್ಡೇಟ್ ಮಾಡಿ

ಸಿಇಆರ್‌ಟಿ-ಇನ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಾರ, ಮೈಕ್ರೋಸಾಫ್ಟ್ ಎಡ್ಜ್ (ಕ್ರೋಮಿಯಂ-ಆಧಾರಿತ) ನಲ್ಲಿ ಅನೇಕ ದುರ್ಬಲತೆಗಳು ಕಂಡುಬಂದಿದೆ. ಇದನ್ನು ರಿಮೋಟ್ ದಾಳಿಕೋರರು ಆ್ಯಕ್ಸೆಸ್ ಪಡೆದುಕೊಂಡು ಕನ್ನ ಹಾಕುವ ಸಾಧ್ಯತೆ ಇದೆ ಎಂದು ಹೇಳಿದೆ.

Microsoft: ಮೈಕ್ರೋಸಾಫ್ಟ್ ಬಳಕೆದಾರರಿಗೆ ಭಾರತ ಸರ್ಕಾರದಿಂದ ತುರ್ತು ಎಚ್ಚರಿಕೆ: ತಕ್ಷಣ ಅಪ್ಡೇಟ್ ಮಾಡಿ
Microsoft
TV9 Web
| Edited By: |

Updated on:Jan 27, 2023 | 1:19 PM

Share

ಮೈಕ್ರೋಸಾಫ್ಟ್ (Microsoft) ಎಡ್ಜ್ ವೆಬ್ ಬ್ರೌಸರ್‌ನಲ್ಲಿ ಕೆಲ ದೋಷಗಳು ಕಂಡುಬಂದಿದ್ದು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ತಂಡ (CERT-IN) ಈ ಬಗ್ಗೆ ಎಚ್ಚರಿಕೆ ನೀಡಿದೆ. ಆಪರೇಟಿಂಗ್ ಸಿಸ್ಟಂಗಳಲ್ಲಿನ ದೋಷಗಳು ಮತ್ತು ದುರ್ಬಲತೆಗಳ ಮೇಲೆ ಮೇಲ್ವಿಚಾರಣೆ ಮಾಡುವ ಮತ್ತು ಎಚ್ಚರಿಕೆ ನೀಡುವ ಸರ್ಕಾರಿ ಸಂಸ್ಥೆ ಸೆರ್ಟ್ ಇನ್, ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ ಮೇಲೆ ಸೈಬರ್ ದಾಳಿ (Cyber Attack) ನಡೆಯುವ ಸಾಧ್ಯತೆ ಇದೆ ಎಂದು ಬಳಕೆದಾರರನ್ನು ಎಚ್ಚರಿಸಿದೆ.

ಸಿಇಆರ್‌ಟಿ-ಇನ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಾರ, ಮೈಕ್ರೋಸಾಫ್ಟ್ ಎಡ್ಜ್ (ಕ್ರೋಮಿಯಂ-ಆಧಾರಿತ) ನಲ್ಲಿ ಅನೇಕ ದುರ್ಬಲತೆಗಳು ಕಂಡುಬಂದಿದೆ. ಇದನ್ನು ರಿಮೋಟ್ ದಾಳಿಕೋರರು ಆ್ಯಕ್ಸೆಸ್ ಪಡೆದುಕೊಂಡು ಕನ್ನ ಹಾಕುವ ಸಾಧ್ಯತೆ ಇದೆ ಎಂದು ಹೇಳಿದೆ. 109.0.1518.61 ಆವೃತ್ತಿಯ ಹಿಂದಿನ ಮೈಕ್ರೋಸಾಫ್ಟ್ ಎಡ್ಜ್ ಆವೃತ್ತಿಗಳಲ್ಲಿ ಈ ದುರ್ಬಲತೆಗಳು ಪತ್ತೆ ಆಗಿದೆ. ಈ ದೋಷಗಳಿಂದ ಸಿಸ್ಟಂಗಳನ್ನು ರಕ್ಷಿಸಲು, ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ ಅನ್ನು ಇತ್ತೀಚಿನ ಆವೃತ್ತಿಗೆ ಅಪ್​ಡೇಟ್ ಮಾಡಲು CERT-IN ಸಲಹೆ ನೀಡಿದೆ.

Tech Tips: ಎರಡು ಮೊಬೈಲ್​ಗಳಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ಬಳಸಲು ಸಾಧ್ಯವೇ?

ಇದನ್ನೂ ಓದಿ
Image
Android Phones: ಭಾರತದಲ್ಲಿ ಭಿನ್ನವಾಗಿರಲಿವೆ ಆ್ಯಂಡ್ರಾಯ್ಡ್ ಫೋನ್​ಗಳು; ಕಾರಣ ಇಲ್ಲಿದೆ
Image
Facebook WhatsApp Down: ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಡೌನ್, ಯುಎಸ್​ಯಲ್ಲಿ ಮೆಟಾ ಪ್ಲಾಟ್‌ಫಾರ್ಮ್ಸ್ ಸ್ಥಗಿತ
Image
Microsoft Teams Down: ಮೈಕ್ರೋಸಾಫ್ಟ್ ಸರ್ವರ್ ಡೌನ್; ಭಾರತದ ಬಳಕೆದಾರರಿಗೆ ತೊಂದರೆ
Image
Reliance Jio 5G Cities: ಭಾರತದ 50 ನಗರಗಳಲ್ಲಿ 5ಜಿ ಸೇವೆ ಘೋಷಿಸಿದ ರಿಲಯನ್ಸ್ ಜಿಯೋ

ಮೈಕ್ರೋಸಾಫ್ಟ್ ಈಗಾಗಲೇ ಹೊಸ ಆವೃತ್ತಿ 109.0.1518.61 ಅನ್ನು ಬಿಡುಗಡೆ ಮಾಡಿದೆ. ಇದು ಈ ದೋಷಗಳನ್ನು ಪರಿಹರಿಸುತ್ತದೆ ಮತ್ತು ಬಳಕೆದಾರರು ದಾಳಿಕೋರರಿಂದ ತಮ್ಮ ಸಿಸ್ಟಮ್‌ಗಳನ್ನು ರಕ್ಷಿಸಲು ತಕ್ಷಣವೇ ಡೌನ್‌ಲೋಡ್ ಮಾಡುವಂತೆ ಸೂಚಿಸಿದೆ. ನಿಮ್ಮ ಸಿಸ್ಟಂನಲ್ಲಿ ಅಪ್‌ಡೇಟ್ ಲಭ್ಯವಿದ್ದರೆ, ಪ್ರಾಂಪ್ಟ್‌ನಲ್ಲಿ ಪರಿಶೀಲಿಸಿ. ಇಲ್ಲಿ ಅಪ್​ಡೇಟ್ ಆಯ್ಕೆ ಕಾಣಿಸಿಲ್ಲ ಎಂದಾದರೆ ಹೀಗೆ ಮಾಡಿ.

  • ನಿಮ್ಮ ಬ್ರೌಸರ್‌ನ ಮೇಲಿನ ಬಲ ಭಾಗದಲ್ಲಿರುವ ಮೂರು ಚುಕ್ಕೆಗಳ ಮೇಲೆ ಕ್ಲಿಕ್ ಮಾಡಿ.
  • ಸೆಟ್ಟಿಂಗ್ಸ್​ಗೆ ಹೋಗಿ.
  • ಸೆಟ್ಟಿಂಗ್ಸ್​ ಅಡಿಯಲ್ಲಿ, ಮೈಕ್ರೋಸಾಫ್ಟ್ ಎಡ್ಜ್ ಕ್ಲಿಕ್ ಮಾಡಿ.
  • ಇತ್ತೀಚಿನ ಅಪ್ಡೇಟ್ ಬಗ್ಗೆ ಅಲ್ಲಿ ಮಾಹಿತಿ ಕಾಣಿಸುತ್ತದೆ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಅಪ್ಡೇಟ್ ಕೊಡಿ.

ಮೈಕ್ರೋಸಾಫ್ಟ್ ಸರ್ವರ್ ಡೌನ್

ಮೊನ್ನೆಯಷ್ಟೆ ಬುಧವಾರ ಮೈಕ್ರೋಸಾಫ್ಟ್ ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಡೌನ್ ಆಗಿತ್ತು. ಮೈಕ್ರೋಸಾಫ್ಟ್ ಅಜೂರ್​ ಪಬ್ಲಿಕ್ ಕ್ಲೌಡ್ ಪ್ಲಾಟ್​ಫಾರ್ಮ್​ ಕಾರ್ಯದಲ್ಲಿ ವ್ಯತ್ಯಯ ಉಂಟಾಗಿತ್ತು. ಕೇವಲ ಭಾರತ ಮಾತ್ರವಲ್ಲದೆ ಇತರ ಕೆಲವು ದೇಶಗಳಲ್ಲಿಯೂ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆದ ಬಗ್ಗೆ ವರದಿಯಾಗಿತ್ತು. ಜಪಾನ್​ನಲ್ಲಿ ಸುಮಾರು 900 ಮಂದಿ ಸರ್ವರ್ ಡೌನ್ ಆಗಿರುವ ಬಗ್ಗೆ ರಿಪೋರ್ಟ್ ಮಾಡಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾ, ಬ್ರಿಟನ್, ಯುಎಇಯಲ್ಲಿ ಕೂಡ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದೆ ಎಂದು ವರದಿಯಾಗಿದೆ. ಮೈಕ್ರೋಸಾಫ್ಟ್​ನ ಅನೇಕ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ನಿಗದಿಯಾಗಿರುವ ಕರೆಗಳನ್ನು ಸ್ವೀಕರಿಸಲೂ ಸಾಧ್ಯವಾಗುತ್ತಿರಲಿಲ್ಲವಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Fri, 27 January 23

Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು