AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ

ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
ಇಂಟರ್​ನೆಟ್ ಸಂಪರ್ಕ ಸ್ಥಗಿತ
ಕಿರಣ್​ ಐಜಿ
|

Updated on: Mar 01, 2023 | 3:56 PM

Share

ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ (Internet Connection) ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು ಕಾಶ್ಮೀರದಲ್ಲೇ ಅತ್ಯಧಿಕ ಬಾರಿ ಅಂದರೆ, 49 ಸಂದರ್ಭದಲ್ಲಿ ಇಂಟರ್​ನೆಟ್ ಸಂಪರ್ಕ ನಿಲ್ಲಿಸಲಾಗಿದೆ ಎಂದು ಅಕ್ಸೆಸ್ ನೌ ವರದಿ ಹೇಳಿದೆ. ಜತೆಗೆ, ಸತತ ಐದನೇ ವರ್ಷ ಭಾರತ ಟಾಪ್ ಸ್ಥಾನದಲ್ಲಿದೆ ಎಂದು ಜಾಗತಿಕವಾಗಿ ಇಂಟರ್​ನೆಟ್ ಸೇವೆಗಳ ಸ್ಥಗಿತ, ನಿರ್ಬಂಧ ಕುರಿತು ಪರಿಶೀಲಿಸುವ ಅಕ್ಸೆಸ್ ನೌ ತಿಳಿಸಿದೆ.

ಭಾರತದಲ್ಲಿ ಇಂಟರ್​ನೆಟ್ ಶಟ್​ಡೌನ್ ಅಧಿಕ ಯಾಕೆ?

ನ್ಯೂಯಾರ್ಕ್ ಮೂಲದ ಅಕ್ಸೆಸ್ ನೌ (Access Now), ಜಾಗತಿಕವಾಗಿ ಇಂಟರ್​ನೆಟ್ ಸಂಪರ್ಕ ಕಡಿತವಾದರೆ, ಸರ್ಕಾರ ಮತ್ತು ಇಲಾಖೆಗಳು ಅಧಿಕೃತವಾಗಿ ನಿರ್ಬಂಧ ವಿಧಿಸಿದರೆ ಅದನ್ನು ವರದಿ ಮಾಡುತ್ತದೆ. ಈ ಪೈಕಿ, ಭಾರತದಲ್ಲೇ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಉಂಟಾಗುವ ಗಲಭೆ ತಡೆಗಟ್ಟಲು ಸರ್ಕಾರ, ಹಲವು ಸಂದರ್ಭದಲ್ಲಿ ಇಂಟರ್​ನೆಟ್ ನಿರ್ಬಂಧ ವಿಧಿಸುತ್ತದೆ. ಹೀಗಾಗಿ ಭಾರತ, ಜಾಗತಿಕವಾಗಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿದೆ ಉಕ್ರೇನ್

ಭದ್ರತಾ ಕಾರಣಗಳಿಗೋಸ್ಕರ ಇಂಟರ್​ನೆಟ್ ನಿರ್ಬಂಧ ವಿಧಿಸಲಾಗಿದೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ. ಭಾರತ ಹೊರತುಪಡಿಸಿದರೆ, ಉಕ್ರೇನ್ ಎರಡನೇ ಸ್ಥಾನದಲ್ಲಿದೆ. ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಅಲ್ಲಿ ಕಳೆದ ವರ್ಷ ಕನಿಷ್ಠ 22 ಬಾರಿ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೂರನೇ ಸ್ಥಾನದಲ್ಲಿ ಇರಾನ್ ಇದ್ದು, ಅಲ್ಲಿ 18 ಬಾರಿ ಇಂಟರ್​ನೆಟ್ ಶಟ್​ಡೌನ್ ಮಾಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?