AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ

ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
ಇಂಟರ್​ನೆಟ್ ಸಂಪರ್ಕ ಸ್ಥಗಿತ
Follow us
ಕಿರಣ್​ ಐಜಿ
|

Updated on: Mar 01, 2023 | 3:56 PM

ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ (Internet Connection) ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು ಕಾಶ್ಮೀರದಲ್ಲೇ ಅತ್ಯಧಿಕ ಬಾರಿ ಅಂದರೆ, 49 ಸಂದರ್ಭದಲ್ಲಿ ಇಂಟರ್​ನೆಟ್ ಸಂಪರ್ಕ ನಿಲ್ಲಿಸಲಾಗಿದೆ ಎಂದು ಅಕ್ಸೆಸ್ ನೌ ವರದಿ ಹೇಳಿದೆ. ಜತೆಗೆ, ಸತತ ಐದನೇ ವರ್ಷ ಭಾರತ ಟಾಪ್ ಸ್ಥಾನದಲ್ಲಿದೆ ಎಂದು ಜಾಗತಿಕವಾಗಿ ಇಂಟರ್​ನೆಟ್ ಸೇವೆಗಳ ಸ್ಥಗಿತ, ನಿರ್ಬಂಧ ಕುರಿತು ಪರಿಶೀಲಿಸುವ ಅಕ್ಸೆಸ್ ನೌ ತಿಳಿಸಿದೆ.

ಭಾರತದಲ್ಲಿ ಇಂಟರ್​ನೆಟ್ ಶಟ್​ಡೌನ್ ಅಧಿಕ ಯಾಕೆ?

ನ್ಯೂಯಾರ್ಕ್ ಮೂಲದ ಅಕ್ಸೆಸ್ ನೌ (Access Now), ಜಾಗತಿಕವಾಗಿ ಇಂಟರ್​ನೆಟ್ ಸಂಪರ್ಕ ಕಡಿತವಾದರೆ, ಸರ್ಕಾರ ಮತ್ತು ಇಲಾಖೆಗಳು ಅಧಿಕೃತವಾಗಿ ನಿರ್ಬಂಧ ವಿಧಿಸಿದರೆ ಅದನ್ನು ವರದಿ ಮಾಡುತ್ತದೆ. ಈ ಪೈಕಿ, ಭಾರತದಲ್ಲೇ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಉಂಟಾಗುವ ಗಲಭೆ ತಡೆಗಟ್ಟಲು ಸರ್ಕಾರ, ಹಲವು ಸಂದರ್ಭದಲ್ಲಿ ಇಂಟರ್​ನೆಟ್ ನಿರ್ಬಂಧ ವಿಧಿಸುತ್ತದೆ. ಹೀಗಾಗಿ ಭಾರತ, ಜಾಗತಿಕವಾಗಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿದೆ ಉಕ್ರೇನ್

ಭದ್ರತಾ ಕಾರಣಗಳಿಗೋಸ್ಕರ ಇಂಟರ್​ನೆಟ್ ನಿರ್ಬಂಧ ವಿಧಿಸಲಾಗಿದೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ. ಭಾರತ ಹೊರತುಪಡಿಸಿದರೆ, ಉಕ್ರೇನ್ ಎರಡನೇ ಸ್ಥಾನದಲ್ಲಿದೆ. ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಅಲ್ಲಿ ಕಳೆದ ವರ್ಷ ಕನಿಷ್ಠ 22 ಬಾರಿ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೂರನೇ ಸ್ಥಾನದಲ್ಲಿ ಇರಾನ್ ಇದ್ದು, ಅಲ್ಲಿ 18 ಬಾರಿ ಇಂಟರ್​ನೆಟ್ ಶಟ್​ಡೌನ್ ಮಾಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು