AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ

ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
ಇಂಟರ್​ನೆಟ್ ಸಂಪರ್ಕ ಸ್ಥಗಿತ
ಕಿರಣ್​ ಐಜಿ
|

Updated on: Mar 01, 2023 | 3:56 PM

Share

ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ (Internet Connection) ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು ಕಾಶ್ಮೀರದಲ್ಲೇ ಅತ್ಯಧಿಕ ಬಾರಿ ಅಂದರೆ, 49 ಸಂದರ್ಭದಲ್ಲಿ ಇಂಟರ್​ನೆಟ್ ಸಂಪರ್ಕ ನಿಲ್ಲಿಸಲಾಗಿದೆ ಎಂದು ಅಕ್ಸೆಸ್ ನೌ ವರದಿ ಹೇಳಿದೆ. ಜತೆಗೆ, ಸತತ ಐದನೇ ವರ್ಷ ಭಾರತ ಟಾಪ್ ಸ್ಥಾನದಲ್ಲಿದೆ ಎಂದು ಜಾಗತಿಕವಾಗಿ ಇಂಟರ್​ನೆಟ್ ಸೇವೆಗಳ ಸ್ಥಗಿತ, ನಿರ್ಬಂಧ ಕುರಿತು ಪರಿಶೀಲಿಸುವ ಅಕ್ಸೆಸ್ ನೌ ತಿಳಿಸಿದೆ.

ಭಾರತದಲ್ಲಿ ಇಂಟರ್​ನೆಟ್ ಶಟ್​ಡೌನ್ ಅಧಿಕ ಯಾಕೆ?

ನ್ಯೂಯಾರ್ಕ್ ಮೂಲದ ಅಕ್ಸೆಸ್ ನೌ (Access Now), ಜಾಗತಿಕವಾಗಿ ಇಂಟರ್​ನೆಟ್ ಸಂಪರ್ಕ ಕಡಿತವಾದರೆ, ಸರ್ಕಾರ ಮತ್ತು ಇಲಾಖೆಗಳು ಅಧಿಕೃತವಾಗಿ ನಿರ್ಬಂಧ ವಿಧಿಸಿದರೆ ಅದನ್ನು ವರದಿ ಮಾಡುತ್ತದೆ. ಈ ಪೈಕಿ, ಭಾರತದಲ್ಲೇ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಉಂಟಾಗುವ ಗಲಭೆ ತಡೆಗಟ್ಟಲು ಸರ್ಕಾರ, ಹಲವು ಸಂದರ್ಭದಲ್ಲಿ ಇಂಟರ್​ನೆಟ್ ನಿರ್ಬಂಧ ವಿಧಿಸುತ್ತದೆ. ಹೀಗಾಗಿ ಭಾರತ, ಜಾಗತಿಕವಾಗಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿದೆ ಉಕ್ರೇನ್

ಭದ್ರತಾ ಕಾರಣಗಳಿಗೋಸ್ಕರ ಇಂಟರ್​ನೆಟ್ ನಿರ್ಬಂಧ ವಿಧಿಸಲಾಗಿದೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ. ಭಾರತ ಹೊರತುಪಡಿಸಿದರೆ, ಉಕ್ರೇನ್ ಎರಡನೇ ಸ್ಥಾನದಲ್ಲಿದೆ. ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಅಲ್ಲಿ ಕಳೆದ ವರ್ಷ ಕನಿಷ್ಠ 22 ಬಾರಿ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೂರನೇ ಸ್ಥಾನದಲ್ಲಿ ಇರಾನ್ ಇದ್ದು, ಅಲ್ಲಿ 18 ಬಾರಿ ಇಂಟರ್​ನೆಟ್ ಶಟ್​ಡೌನ್ ಮಾಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ