Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ

ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
ಇಂಟರ್​ನೆಟ್ ಸಂಪರ್ಕ ಸ್ಥಗಿತ
Follow us
|

Updated on: Mar 01, 2023 | 3:56 PM

ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ (Internet Connection) ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು ಕಾಶ್ಮೀರದಲ್ಲೇ ಅತ್ಯಧಿಕ ಬಾರಿ ಅಂದರೆ, 49 ಸಂದರ್ಭದಲ್ಲಿ ಇಂಟರ್​ನೆಟ್ ಸಂಪರ್ಕ ನಿಲ್ಲಿಸಲಾಗಿದೆ ಎಂದು ಅಕ್ಸೆಸ್ ನೌ ವರದಿ ಹೇಳಿದೆ. ಜತೆಗೆ, ಸತತ ಐದನೇ ವರ್ಷ ಭಾರತ ಟಾಪ್ ಸ್ಥಾನದಲ್ಲಿದೆ ಎಂದು ಜಾಗತಿಕವಾಗಿ ಇಂಟರ್​ನೆಟ್ ಸೇವೆಗಳ ಸ್ಥಗಿತ, ನಿರ್ಬಂಧ ಕುರಿತು ಪರಿಶೀಲಿಸುವ ಅಕ್ಸೆಸ್ ನೌ ತಿಳಿಸಿದೆ.

ಭಾರತದಲ್ಲಿ ಇಂಟರ್​ನೆಟ್ ಶಟ್​ಡೌನ್ ಅಧಿಕ ಯಾಕೆ?

ನ್ಯೂಯಾರ್ಕ್ ಮೂಲದ ಅಕ್ಸೆಸ್ ನೌ (Access Now), ಜಾಗತಿಕವಾಗಿ ಇಂಟರ್​ನೆಟ್ ಸಂಪರ್ಕ ಕಡಿತವಾದರೆ, ಸರ್ಕಾರ ಮತ್ತು ಇಲಾಖೆಗಳು ಅಧಿಕೃತವಾಗಿ ನಿರ್ಬಂಧ ವಿಧಿಸಿದರೆ ಅದನ್ನು ವರದಿ ಮಾಡುತ್ತದೆ. ಈ ಪೈಕಿ, ಭಾರತದಲ್ಲೇ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಉಂಟಾಗುವ ಗಲಭೆ ತಡೆಗಟ್ಟಲು ಸರ್ಕಾರ, ಹಲವು ಸಂದರ್ಭದಲ್ಲಿ ಇಂಟರ್​ನೆಟ್ ನಿರ್ಬಂಧ ವಿಧಿಸುತ್ತದೆ. ಹೀಗಾಗಿ ಭಾರತ, ಜಾಗತಿಕವಾಗಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿದೆ ಉಕ್ರೇನ್

ಭದ್ರತಾ ಕಾರಣಗಳಿಗೋಸ್ಕರ ಇಂಟರ್​ನೆಟ್ ನಿರ್ಬಂಧ ವಿಧಿಸಲಾಗಿದೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ. ಭಾರತ ಹೊರತುಪಡಿಸಿದರೆ, ಉಕ್ರೇನ್ ಎರಡನೇ ಸ್ಥಾನದಲ್ಲಿದೆ. ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಅಲ್ಲಿ ಕಳೆದ ವರ್ಷ ಕನಿಷ್ಠ 22 ಬಾರಿ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೂರನೇ ಸ್ಥಾನದಲ್ಲಿ ಇರಾನ್ ಇದ್ದು, ಅಲ್ಲಿ 18 ಬಾರಿ ಇಂಟರ್​ನೆಟ್ ಶಟ್​ಡೌನ್ ಮಾಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು