AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ

ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ.

Internet Shutdown: ಜಗತ್ತಿನಲ್ಲೇ ಅತ್ಯಧಿಕ ಇಂಟರ್​ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ- ಇಲ್ಲಿದೆ ವಿವರ
ಇಂಟರ್​ನೆಟ್ ಸಂಪರ್ಕ ಸ್ಥಗಿತ
ಕಿರಣ್​ ಐಜಿ
ಕಿರಣ್​ ಐಜಿ|

Updated on: Mar 01, 2023 | 3:56 PM

Share

ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ (Internet Connection) ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು ಕಾಶ್ಮೀರದಲ್ಲೇ ಅತ್ಯಧಿಕ ಬಾರಿ ಅಂದರೆ, 49 ಸಂದರ್ಭದಲ್ಲಿ ಇಂಟರ್​ನೆಟ್ ಸಂಪರ್ಕ ನಿಲ್ಲಿಸಲಾಗಿದೆ ಎಂದು ಅಕ್ಸೆಸ್ ನೌ ವರದಿ ಹೇಳಿದೆ. ಜತೆಗೆ, ಸತತ ಐದನೇ ವರ್ಷ ಭಾರತ ಟಾಪ್ ಸ್ಥಾನದಲ್ಲಿದೆ ಎಂದು ಜಾಗತಿಕವಾಗಿ ಇಂಟರ್​ನೆಟ್ ಸೇವೆಗಳ ಸ್ಥಗಿತ, ನಿರ್ಬಂಧ ಕುರಿತು ಪರಿಶೀಲಿಸುವ ಅಕ್ಸೆಸ್ ನೌ ತಿಳಿಸಿದೆ.

ಭಾರತದಲ್ಲಿ ಇಂಟರ್​ನೆಟ್ ಶಟ್​ಡೌನ್ ಅಧಿಕ ಯಾಕೆ?

ನ್ಯೂಯಾರ್ಕ್ ಮೂಲದ ಅಕ್ಸೆಸ್ ನೌ (Access Now), ಜಾಗತಿಕವಾಗಿ ಇಂಟರ್​ನೆಟ್ ಸಂಪರ್ಕ ಕಡಿತವಾದರೆ, ಸರ್ಕಾರ ಮತ್ತು ಇಲಾಖೆಗಳು ಅಧಿಕೃತವಾಗಿ ನಿರ್ಬಂಧ ವಿಧಿಸಿದರೆ ಅದನ್ನು ವರದಿ ಮಾಡುತ್ತದೆ. ಈ ಪೈಕಿ, ಭಾರತದಲ್ಲೇ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಉಂಟಾಗುವ ಗಲಭೆ ತಡೆಗಟ್ಟಲು ಸರ್ಕಾರ, ಹಲವು ಸಂದರ್ಭದಲ್ಲಿ ಇಂಟರ್​ನೆಟ್ ನಿರ್ಬಂಧ ವಿಧಿಸುತ್ತದೆ. ಹೀಗಾಗಿ ಭಾರತ, ಜಾಗತಿಕವಾಗಿ ಮೊದಲ ಸ್ಥಾನದಲ್ಲಿದೆ.

ಎರಡನೇ ಸ್ಥಾನದಲ್ಲಿದೆ ಉಕ್ರೇನ್

ಭದ್ರತಾ ಕಾರಣಗಳಿಗೋಸ್ಕರ ಇಂಟರ್​ನೆಟ್ ನಿರ್ಬಂಧ ವಿಧಿಸಲಾಗಿದೆ ಎಂದು ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ. ಭಾರತ ಹೊರತುಪಡಿಸಿದರೆ, ಉಕ್ರೇನ್ ಎರಡನೇ ಸ್ಥಾನದಲ್ಲಿದೆ. ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಅಲ್ಲಿ ಕಳೆದ ವರ್ಷ ಕನಿಷ್ಠ 22 ಬಾರಿ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ. ಮೂರನೇ ಸ್ಥಾನದಲ್ಲಿ ಇರಾನ್ ಇದ್ದು, ಅಲ್ಲಿ 18 ಬಾರಿ ಇಂಟರ್​ನೆಟ್ ಶಟ್​ಡೌನ್ ಮಾಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ