Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2021: ಭಾರತೀಯ ಮಾರುಕಟ್ಟೆಗೆ 2022 ರಲ್ಲಿ ಅಪ್ಪಳಿಸಲಿದೆ ಈ ಬಹುನಿರೀಕ್ಷಿತ ಸ್ಮಾರ್ಟ್​ಫೋನ್​ಗಳು

2022ನೇ ವರ್ಷದಲ್ಲಿ ಮಾರುಕಟ್ಟೆಗೆ ಯಾವೆಲ್ಲಾ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳು (Smartphone) ಎಂಟ್ರಿ ನೀಡಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Year Ender 2021: ಭಾರತೀಯ ಮಾರುಕಟ್ಟೆಗೆ 2022 ರಲ್ಲಿ ಅಪ್ಪಳಿಸಲಿದೆ ಈ ಬಹುನಿರೀಕ್ಷಿತ ಸ್ಮಾರ್ಟ್​ಫೋನ್​ಗಳು
Smartphone 2022
Follow us
TV9 Web
| Updated By: Vinay Bhat

Updated on: Dec 31, 2021 | 12:46 PM

ಹೊಸ ವರ್ಷ (New Year 2022) ಬಂದೆ ಬಿಟ್ಟಿತು. 2021 ರಲ್ಲಿ ಮಾರುಕಟ್ಟೆಗೆ ಅನೇಕ  ಸ್ಮಾರ್ಟ್​ಫೋನ್​ಗಳು ಲಗ್ಗೆಯಿಟ್ಟಿವೆ. ಇದರಲ್ಲಿ ಕೆಲವು ಕೆಲವಷ್ಟು ಯಶಸ್ಸು ಕಂಡವು. 2022ನೇ ವರ್ಷದಲ್ಲಿ ಕೂಡ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ. ಈಗಾಗಲೇ ಅನೇಕ ಫೋನ್‌ಗಳು ಬಿಡುಗಡೆ ದಿನಾಂಕವನ್ನು ಘೊಷಣೆ ಮಾಡಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಕುತೂಹಲವನ್ನು ಕೆರಳಿಸಿವೆ. ಹೊಸ ಮಾದರಿಯ ಪ್ರೊಸೆಸರ್‌, ಕ್ಯಾಮೆರಾ ವಿನ್ಯಾಸ ಸೇರಿದಂತೆ ಅಧಿಕ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆ ಇದೆ. ಇವು ಮೊಬೈಲ್ (Mobile) ಮಾರುಕಟ್ಟೆಯಲ್ಲಿ ಧೂಳೆಬ್ಬಿಸುವುದು ಖಚಿತ. ಅದರಲ್ಲೂ ಇತ್ತೀಚಿಗೆ ಬಿಡುಗಡೆಯಾದ ಹೊಸ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಮುಂದಿನ ವರ್ಷವೇ ಅಪ್ಪಳಿಸಲಿದೆ. ಹಾಗಾದ್ರೆ 2022ನೇ ವರ್ಷದಲ್ಲಿ ಮಾರುಕಟ್ಟೆಗೆ ಯಾವೆಲ್ಲಾ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳು (Smartphone) ಎಂಟ್ರಿ ನೀಡಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ 10 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ. ಈ ಫೋನ್ ಕೂಡ ಸ್ನಾಪ್‌ಡ್ರಾಗನ್ 8 ಜನ್ 1 ಚಿಪ್ ಹೊಂದಿರುವ ಸಾದ್ಯತೆ ಇದೆ. ಇನ್ನು ಈ ಫೋನ್‌ OnePlus ನ OxygenOS ಸ್ಕಿನ್‌ಗಳನ್ನು ಏಕೀಕರಿಸುವ ಮೊದಲ ಫೋನ್ ಎಂದು ಹೊಂದಿಸಲಾಗಿದೆ. ಹೊಸ ಸ್ಕಿನ್ ನಂತರ ಇನ್ನೂ ಅಪ್‌ಡೇಟ್ ವೇಳಾಪಟ್ಟಿಯಲ್ಲಿರುವ ಎಲ್ಲಾ ಇತರ OnePlus ಫೋನ್‌ಗಳಿಗೆ ಬರುತ್ತದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ S ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈಗಾಗಲೇ S21 ಸರಣಿ ಪರಿಚಯಿಸಿ ಯಶಸ್ಸು ಕಂಡಿರುವ ಸ್ಯಾಮ್‌ಸಂಗ್‌ 2022ರಲ್ಲಿ ಗ್ಯಾಲಕ್ಸಿ S22 ಸರಣಿ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸರಣಿಯು 2022ರ ಫೆಬ್ರವರಿ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೊಸ ಆಂಡ್ರಾಯ್ಡ್ 12-ಆಧಾರಿತ One UI 4.0 ಸಾಫ್ಟ್‌ವೇರ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್ ಕೂಡ 2022ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. S22 ಸರಣಿಯಲ್ಲಿ ಹೆಚ್ಚು ಖರ್ಚು ಮಾಡಲು ಬಯಸದ ಖರೀದಿದಾರರಿಗೆ ಬಜೆಟ್ ಬೆಲೆಯ ಸ್ನಾರ್ಟ್‌ಫೋನ್‌ ಖರೀದಿಸಲು ಇದು ಸೂಕ್ತವಾಗಿದೆ. ಗ್ಯಾಲಕ್ಸಿ S21 FE ಸ್ಮಾರ್ಟ್‌ಫೋನ್‌ಗಿಂತ ಕೆಲವು ಹೊಸ ವಿಶೇಷಣಗಳು ಮತ್ತು ಅದರ ಪೂರ್ವವರ್ತಿಗೆ ಹೋಲಿಸಿದರೆ ಹೊಸ ವಿನ್ಯಾಸವನ್ನು ನೀಡುವ ನಿರೀಕ್ಷೆಯಿದೆ.

ಶವೋಮಿ ಕಂಪನಿ 2022 ರಲ್ಲಿ ಶವೋಮಿ 12 ಸರಣಿಯ ಫೋನನ್ನು ಬಿಡುಗಡೆ ಮಾಡಲಿದೆ. ಇದು ಈಗಾಗಲೇ ಚೀನಾದಲ್ಲಿ ರಿಲೀಸ್ ಆಗಿದೆ. ಹೊಸ ಸ್ನಾಪ್‌ಡ್ರಾಗನ್‌ 8 Gen 1 ಪ್ರೊಸೆಸರ್‌ ಹೊಂದಿರುವ ಮೊದಲ ಫೋನ್‌ಗಳಲ್ಲಿ ಒಂದಾಗಿದೆ. ಈ ಸರಣಿಯು ಬಹು ಶೇಖರಣಾ ರೂಪಾಂತರಗಳನ್ನು ಒಳಗೊಂಡಿರುತ್ತದೆ. ಇದು ಬಿಗ್‌ ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 100W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಈ ಫೋನ್‌ ಕ್ವಾಡ್-ರಿಯರ್ ಕ್ಯಾಮೆರಾ ಮತ್ತು ಅಂಡರ್-ಡಿಸ್ಪ್ಲೇ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ ವರ್ಷ ಬಿಡುಗಡೆ ಆಗುವ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ iQOO 9 ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್‌ ಸರಣಿಯು ಉನ್ನತ-ಮಟ್ಟದ ಪ್ರೊ ರೂಪಾಂತರವನ್ನು ಒಳಗೊಂಡಂತೆ ಎರಡು ರೂಪಾಂತರಗಳಲ್ಲಿ ಬರಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್‌ ರೇಟ್‌ ಸಾಮರ್ಥ್ಯದ ಡಿಸ್‌ಪ್ಲೇ, ಹೊಸ ಶಾಖ ಪ್ರಸರಣ ವ್ಯವಸ್ಥೆ, ಮೈಕ್ರೋ-ಹೆಡ್ ಗಿಂಬಲ್ ಸ್ಟೆಬಿಲೈಸೇಶನ್ ಸಿಸ್ಟಮ್ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಡ್ಯುಯಲ್ ಸ್ಪೀಕರ್‌ಗಳು ಮತ್ತು ಸ್ಪರ್ಧಾತ್ಮಕ ಗೇಮಿಂಗ್‌ಗಾಗಿ ಪ್ರೆಶರ್ ಸೆನ್ಸಿಟಿವ್ ಶೋಲ್ಡರ್ ಬಟನ್‌ಗಳನ್ನು ಕೂಡ ಹೊಂದಿರುವ ಸಾದ್ಯತೆ ಇದೆ.

ಆ್ಯಪಲ್​ ಕಂಪೆನಿ ಈಗಾಗಲೇ ತನ್ನ ಹೊಸ ಐಫೋನ್ 14 ಸರಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆ್ಯಪಲ್​ ಹೊಸ ಸಿಲಿಕಾನ್‌ನೊಂದಿಗೆ ಫೋನ್ ಅನ್ನು ಅಪ್‌ಗ್ರೇಡ್ ಮಾಡುವ ಸಾಧ್ಯತೆಯಿದೆ. ಐಫೋನ್ SE 3 ಮುಂದಿನ ವರ್ಷ ಬಿಡುಗಡೆ ಆಗುವ ಸಾಧ್ಯತೆ ಇದೆ. ಇದು SE-ಸರಣಿಯಲ್ಲಿ ಮೊದಲನೆಯದಾದ 5G ಸಂಪರ್ಕದೊಂದಿಗೆ Apple A15 ಚಿಪ್‌ ಹೊಂದಿರುವ ಫೋನ್‌ ಆಗಿರಲಿದೆ ಎಂದು ಹೇಳಲಾಗಿದೆ.

2022ರಲ್ಲಿ ಗೂಗಲ್‌ ಪಿಕ್ಸೆಲ್ 6ಎ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಹೊಸ ಟೆನ್ಸರ್ ಚಿಪ್ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ. ಗೂಗಲ್‌ ಪಿಕ್ಸೆಲ್‌ 6A ಹೆಚ್ಚು ಕೈಗೆಟುಕುವ ಮತ್ತು ಹೆಚ್ಚು ಖರೀದಿದಾರರಿಗೆ ಪ್ರವೇಶಿಸಬಹುದಾದ ಟೋನ್-ಡೌನ್ ಅನುಭವವನ್ನು ನೀಡುತ್ತದೆ ಎನ್ನಲಾಗಿದೆ.

Oppo A16K: ಮುಂದಿನ ತಿಂಗಳು ಭಾರತಕ್ಕೆ ಎಂಟ್ರಿ ಕೊಡಲಿದೆ ಅತಿ ಕಡಿಮೆ ಬೆಲೆಯ ಈ ಒಪ್ಪೋ ಸ್ಮಾರ್ಟ್​ಫೋನ್

(iPhone 14 Xiaomi 12 OnePlus 10 Galaxy S22 Galaxy S21 FE and more Best Smartphone Coming In 2022)

ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು