AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಒಟ್ಟು 9 ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ.

ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ
ISRO launch 9 satellites Including Oceansat from Sriharikota PSLV's XL version
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 26, 2022 | 12:23 PM

ಶ್ರೀಹರಿಕೋಟ: ‘ಓಷನ್​ಸ್ಯಾಟ್ 3’(Oceansat-3) ಸೇರಿದಂತೆ 9 ಉಪಗ್ರಹಗಳನ್ನು ಒಳಗೊಂಡ ‘ಪಿಎಸ್​ಎಲ್​ವಿ-ಸಿ 54 (PSLV C 54)’ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಿದೆ. ಉಪಗ್ರಹಗಳ ಉಡಾವಣೆಗೆ ಶುಕ್ರವಾರವೇ ಆರಂಭವಾಗಿತ್ತು. ಶನಿವಾರ ಬೆಳಿಗ್ಗೆ 11.56ಕ್ಕೆ  ಯಶಸ್ವಿಯಾಗಿ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಪಿಎಸ್​ಎಲ್​ವಿ ಎಕ್ಸ್​ಎಲ್​ ವರ್ಷನ್​ನ ರಾಕೆಟ್​ ಉಡಾವಣೆಯಾದ 2 ಗಂಟೆ 20 ನಿಮಿಗಳಲ್ಲಿ ಉಪಗ್ರಹಗಳನ್ನು ಸನ್-ಸಿಂಕ್ರೋನಸ್ ಧ್ರುವೀಯ ಕಕ್ಷೆಯಲ್ಲಿ ನೆಲೆಗೊಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ. ಸಾಗರ ವೀಕ್ಷಣೆ, ಭೂ ವೀಕ್ಷಣೆ, ಇಂಡೊ-ಫ್ರೆಂಚ್ ಸಹಭಾಗಿತ್ವ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಉಪಗ್ರಹಗಳೂ ಇದರಲ್ಲಿ ಸೇರಿವೆ ಎಂದು ಇಸ್ರೋದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆನಂದ್ ನ್ಯಾನೊ ಉಪಗ್ರಹ ಭೂಮಿಯ ಕೆಳ ಕಕ್ಷೆಯಲ್ಲಿ ಮೈಕ್ರೋಸ್ಯಾಟಲೈಟ್ ಬಳಸಿಕೊಂಡು ಭೂಮಿಯ ವೀಕ್ಷಣೆ ನಡೆಸಲಿದೆ. ಥೈಬೋಲ್ಟ್ ಉಪಗ್ರಹವು ಸಂವಹನಕ್ಕೆ ಸಂಬಂಧಿಸಿದ್ದಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 26 November 22

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್