AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಒಟ್ಟು 9 ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ.

ISRO: ಇಸ್ರೋದಿಂದ ಓಷನ್​ಸ್ಯಾಟ್- 3 ಸೇರಿದಂತೆ 9 ಉಪಗ್ರಹ ಉಡಾವಣೆ
ISRO launch 9 satellites Including Oceansat from Sriharikota PSLV's XL version
TV9 Web
| Edited By: |

Updated on:Nov 26, 2022 | 12:23 PM

Share

ಶ್ರೀಹರಿಕೋಟ: ‘ಓಷನ್​ಸ್ಯಾಟ್ 3’(Oceansat-3) ಸೇರಿದಂತೆ 9 ಉಪಗ್ರಹಗಳನ್ನು ಒಳಗೊಂಡ ‘ಪಿಎಸ್​ಎಲ್​ವಿ-ಸಿ 54 (PSLV C 54)’ ರಾಕೆಟ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಿದೆ. ಉಪಗ್ರಹಗಳ ಉಡಾವಣೆಗೆ ಶುಕ್ರವಾರವೇ ಆರಂಭವಾಗಿತ್ತು. ಶನಿವಾರ ಬೆಳಿಗ್ಗೆ 11.56ಕ್ಕೆ  ಯಶಸ್ವಿಯಾಗಿ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಪಿಎಸ್​ಎಲ್​ವಿ ಎಕ್ಸ್​ಎಲ್​ ವರ್ಷನ್​ನ ರಾಕೆಟ್​ ಉಡಾವಣೆಯಾದ 2 ಗಂಟೆ 20 ನಿಮಿಗಳಲ್ಲಿ ಉಪಗ್ರಹಗಳನ್ನು ಸನ್-ಸಿಂಕ್ರೋನಸ್ ಧ್ರುವೀಯ ಕಕ್ಷೆಯಲ್ಲಿ ನೆಲೆಗೊಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಓಷನ್‌ಸ್ಯಾಟ್‌ 3 ಹಾಗೂ ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳು ಕಕ್ಷೆ ಸೇರಲಿವೆ. ಈ ಪೈಕಿ ಪಿಕ್ಸ್‌ಕ್ಷೆಲ್‌ನ ಭೂತಾನ್‌ಸ್ಯಾಟ್‌, ಅಮೆರಿಕದ ಸ್ಪೇಸ್‌ಫ್ಲೈಟ್‌ನ ನಾಲ್ಕು ಆ್ಯಸ್ಟ್ರೋಕಾಸ್ಟ್‌ ಉಪಗ್ರಹಗಳು ಕೂಡ ಸೇರಿವೆ. ಸಾಗರ ವೀಕ್ಷಣೆ, ಭೂ ವೀಕ್ಷಣೆ, ಇಂಡೊ-ಫ್ರೆಂಚ್ ಸಹಭಾಗಿತ್ವ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಉಪಗ್ರಹಗಳೂ ಇದರಲ್ಲಿ ಸೇರಿವೆ ಎಂದು ಇಸ್ರೋದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆನಂದ್ ನ್ಯಾನೊ ಉಪಗ್ರಹ ಭೂಮಿಯ ಕೆಳ ಕಕ್ಷೆಯಲ್ಲಿ ಮೈಕ್ರೋಸ್ಯಾಟಲೈಟ್ ಬಳಸಿಕೊಂಡು ಭೂಮಿಯ ವೀಕ್ಷಣೆ ನಡೆಸಲಿದೆ. ಥೈಬೋಲ್ಟ್ ಉಪಗ್ರಹವು ಸಂವಹನಕ್ಕೆ ಸಂಬಂಧಿಸಿದ್ದಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 26 November 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ