AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JIO Down: ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ, ಮೆಸೇಜ್ ಸೆಂಡ್ ಆಗ್ತಿಲ್ಲ

ದೇಶದಲ್ಲಿ ಅನೇಕ ಜಿಯೋ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದು ಕರೆ ಮಾಡಲು, ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ. ಟ್ವಿಟರ್​ನಲ್ಲಿ 'ಜಿಯೋ ಡೌನ್' (Jio Down) ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ.

JIO Down: ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ, ಮೆಸೇಜ್ ಸೆಂಡ್ ಆಗ್ತಿಲ್ಲ
JIO Down
Follow us
TV9 Web
| Updated By: Vinay Bhat

Updated on:Nov 29, 2022 | 11:56 AM

ಭಾರತದ ನಂಬರ್ ಒನ್ ಟೆಲಿಕಾಂ ಕಂಪನಿ ರಿಲಯನ್ಸ್ (Reliance) ಒಡೆತನದ ಜಿಯೋ ನೆಟ್​ವರ್ಕ್ ಡೌನ್ ಆಗಿದೆ. ದೇಶದಲ್ಲಿ ಅನೇಕ ಜಿಯೋ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದು ಕರೆ ಮಾಡಲು, ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ. ಟ್ವಿಟರ್​ನಲ್ಲಿ ‘ಜಿಯೋ ಡೌನ್’ (Jio Down) ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ. ಇಂದು ಮುಂಜಾನೆಯಿಂದ ಬಳಕೆದಾರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಮೊಬೈಲ್ ಡೇಟಾ ಎಂದಿನಂತೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರೆ ಮತ್ತು ಎಸ್​ಎಮ್​ಎಸ್ ಕಳುಹಿಸಲು ಮಾತ್ರ ಜನರು ಪರದಾಡುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಡೌನ್​ಡಿಟೆಕ್ಟನ್, ಬೆಳಗ್ಗೆ 6 ಗಂಟೆಯಿಂದ 9 ಗಂಟೆ ವರೆಗೆ ಜಿಯೋ ಬಳಕೆದಾರರು ಈ ಸಮಸ್ಯೆ ಎದುರಿಸಿದ್ದಾರಂತೆ. ಈ ಸಮಯದಲ್ಲಿ ಶೇ. 37 ರಷ್ಟು ಜನರಿಗೆ ಜಿಯೋ ಸಿಗ್ನಲ್ ಕಾಣಿಸುತ್ತಿರಲಿಲ್ಲ. ಶೇ. 26 ರಷ್ಟು ಮಂದಿಗೆ ಮೆಸೇಜ್ (Message) ಕಳುಹಿಸುವಾಗ ಎರಾರ್ ಬಂದಿದೆ. ದೆಹಲಿ, ಅಹ್ಮದಾಬಾದ್, ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾದಲ್ಲಿ ಈ ಸಮಸ್ಯೆ ಕಂಡುಬಂದಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಒಬ್ಬರು ಟ್ವೀಟ್ ಮಾಡಿದ್ದು, ಬೆಳಗ್ಗಿನಿಂದ ವೋಲ್ಟ್ ಸಿಗ್ನಲ್ ಕಾಣಿಸುತ್ತಿಲ್ಲ, ಕರೆ ಮಾಡಲು ಆಗುತ್ತಿಲ್ಲ. ಹೀಗಿರುವಾಗ ನೀವು 5G ಸೇವೆಯನ್ನು ಹೇಗೆ ನೀಡುತ್ತೀರಿ ಎಂದು ಬರೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಟ್ವಿಟರ್ ರಿಯಾಕ್ಷನ್.

ಇದನ್ನೂ ಓದಿ
Image
YouTube Ambient Mode: ಏನಿದು ಯೂಟ್ಯೂಬ್ ಆಂಬಿಯೆಂಟ್ ಮೋಡ್?: ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
Image
Tech Tips: ಗೂಗಲ್​ನಲ್ಲಿ ನಿಮ್ಮ ಫೋಟೋ ಕಾಣಿಸಬೇಕೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ
Image
Fact Check ಸ್ನಾಪ್​​ಚಾಟ್​​ ಖರೀದಿಸಲು ಎಲಾನ್​​ ಮಸ್ಕ್​​​ ಚಿಂತನೆ ಎಂಬ ವೈರಲ್ ಸ್ಕ್ರೀನ್​​ಶಾಟ್ ಫೇಕ್
Image
Flipkart Black Friday Sale: 20,000 ರೂ. ಒಳಗೆ ಸಿಗುತ್ತಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್​ಗಳು

ಆದರೆ, ಜಿಯೋ ಮಾತ್ರ ಈ ಸಮಸ್ಯೆ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಈ ವರ್ಷದಲ್ಲಿ ಜಿಯೋ ಅನೇಕ ಬಾರಿ ಇಂಥಹ ಸಮಸ್ಯೆ ಎದುರಿಸಿದೆ. ಕಳೆದ ಫೆಬ್ರವರಿ, ಜೂನ್ ಮತ್ತು ಅಕ್ಟೋಬರ್​ನಲ್ಲೂ ಜಿಯೋ ಬಳಕೆದಾರರು ನೆಟ್​ವರ್ಕ್​ ಸಮಸ್ಯೆಗೆ ತುತ್ತಾಗಿದ್ದರು.

WhatsApp New Features: ಡೆಸ್ಕ್​ಟಾಪ್ ಬಳಕೆದಾರರಿಗೆ ಎರಡು ಹೊಸ ಫೀಚರ್: ವಾಟ್ಸ್​ಆ್ಯಪ್​ನಿಂದ ವಿಭಿನ್ನ ಪ್ರಯತ್ನ

ಜಿಯೋದಿಂದ ವೆಲ್​ಕಮ್ ಆಫರ್ ಘೋಷಣೆ:

ಜಿಯೋ ಟ್ರೂ 5G ಅನ್ನು ಉಚಿತವಾಗಿ ಸಂಪರ್ಕಿಸಲು ಮತ್ತು ಆನಂದಿಸಲು ಗ್ರಾಹಕರಿಗೆ ವೆಲ್‌ಕಮ್ ಆಫರ್ ಅನ್ನು ಘೋಷಿಸಿದೆ. ಆದರೆ, ಈ ವೆಲ್‌ಕಮ್‌ ಆಫರ್ ಆಯ್ದ ಜಿಯೋ 5G ಬಳಕೆದಾರರಿಗೆ ಮಾತ್ರವಷ್ಟೆ ಲಭ್ಯವಾಗುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಜಿಯೋ ಗ್ರಾಹಕರು ಕೆಲ ಅರ್ಹತೆಯನ್ನು ಪಡೆದುಕೊಂಡಿರಬೇಕು ಎಂದು ರಿಲಯನ್ಸ್ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಜಿಯೋ 5G ವೆಲ್‌ಕಮ್‌ ಆಫರ್ ಸದ್ಯ ದೆಹಲಿ – NCR, ಮುಂಬೈ, ಬೆಂಗಳೂರು, ಹೈದರಾಬಾದ್ ಮತ್ತು ಇತರ 5 ನಗರಗಳು ಸೇರಿದಂತೆ ಅರ್ಹ ನಗರಗಳಲ್ಲಿ ಮಾತ್ರ ಲಭ್ಯವಿದೆ. ಅಂದಹಾಗೆ ಈ 5G ಕೊಡುಗೆಯಲ್ಲಿ ಜಿಯೋ ತನ್ನ ಗ್ರಾಹಕರಿಗೆ 1gbps ವೇಗದೊಂದಿಗೆ ಅನಿಯಮಿತ 5G ಡೇಟಾವನ್ನು ಒದಗಿಸುತ್ತಿದೆ. ಅಂತೆಯೆ 5G ನೆಟ್‌ವರ್ಕ್‌ಗೆ ಸಂಪರ್ಕಿಸಲು ಹೊಸ 5G ಸಿಮ್ ಖರೀದಿಸಬೇಕಾಗಿಲ್ಲ ಎಂದು ಜಿಯೋ ಈ ಹಿಂದೆ ತನ್ನ ಬಳಕೆದಾರರಿಗೆ ಭರವಸೆ ನೀಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Tue, 29 November 22

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್