AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JIO Down: ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ, ಮೆಸೇಜ್ ಸೆಂಡ್ ಆಗ್ತಿಲ್ಲ

ದೇಶದಲ್ಲಿ ಅನೇಕ ಜಿಯೋ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದು ಕರೆ ಮಾಡಲು, ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ. ಟ್ವಿಟರ್​ನಲ್ಲಿ 'ಜಿಯೋ ಡೌನ್' (Jio Down) ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ.

JIO Down: ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ, ಮೆಸೇಜ್ ಸೆಂಡ್ ಆಗ್ತಿಲ್ಲ
JIO Down
TV9 Web
| Edited By: |

Updated on:Nov 29, 2022 | 11:56 AM

Share

ಭಾರತದ ನಂಬರ್ ಒನ್ ಟೆಲಿಕಾಂ ಕಂಪನಿ ರಿಲಯನ್ಸ್ (Reliance) ಒಡೆತನದ ಜಿಯೋ ನೆಟ್​ವರ್ಕ್ ಡೌನ್ ಆಗಿದೆ. ದೇಶದಲ್ಲಿ ಅನೇಕ ಜಿಯೋ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದು ಕರೆ ಮಾಡಲು, ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ. ಟ್ವಿಟರ್​ನಲ್ಲಿ ‘ಜಿಯೋ ಡೌನ್’ (Jio Down) ಟ್ರೆಂಡ್ ಆಗಿದ್ದು ಅನೇಕರು ಟ್ವೀಟ್ ಮಾಡುತ್ತಿದ್ದಾರೆ. ಇಂದು ಮುಂಜಾನೆಯಿಂದ ಬಳಕೆದಾರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಮೊಬೈಲ್ ಡೇಟಾ ಎಂದಿನಂತೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರೆ ಮತ್ತು ಎಸ್​ಎಮ್​ಎಸ್ ಕಳುಹಿಸಲು ಮಾತ್ರ ಜನರು ಪರದಾಡುತ್ತಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಡೌನ್​ಡಿಟೆಕ್ಟನ್, ಬೆಳಗ್ಗೆ 6 ಗಂಟೆಯಿಂದ 9 ಗಂಟೆ ವರೆಗೆ ಜಿಯೋ ಬಳಕೆದಾರರು ಈ ಸಮಸ್ಯೆ ಎದುರಿಸಿದ್ದಾರಂತೆ. ಈ ಸಮಯದಲ್ಲಿ ಶೇ. 37 ರಷ್ಟು ಜನರಿಗೆ ಜಿಯೋ ಸಿಗ್ನಲ್ ಕಾಣಿಸುತ್ತಿರಲಿಲ್ಲ. ಶೇ. 26 ರಷ್ಟು ಮಂದಿಗೆ ಮೆಸೇಜ್ (Message) ಕಳುಹಿಸುವಾಗ ಎರಾರ್ ಬಂದಿದೆ. ದೆಹಲಿ, ಅಹ್ಮದಾಬಾದ್, ಮುಂಬೈ, ಚೆನ್ನೈ, ಬೆಂಗಳೂರು ಹಾಗೂ ಕೋಲ್ಕತ್ತಾದಲ್ಲಿ ಈ ಸಮಸ್ಯೆ ಕಂಡುಬಂದಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಒಬ್ಬರು ಟ್ವೀಟ್ ಮಾಡಿದ್ದು, ಬೆಳಗ್ಗಿನಿಂದ ವೋಲ್ಟ್ ಸಿಗ್ನಲ್ ಕಾಣಿಸುತ್ತಿಲ್ಲ, ಕರೆ ಮಾಡಲು ಆಗುತ್ತಿಲ್ಲ. ಹೀಗಿರುವಾಗ ನೀವು 5G ಸೇವೆಯನ್ನು ಹೇಗೆ ನೀಡುತ್ತೀರಿ ಎಂದು ಬರೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಟ್ವಿಟರ್ ರಿಯಾಕ್ಷನ್.

ಇದನ್ನೂ ಓದಿ
Image
YouTube Ambient Mode: ಏನಿದು ಯೂಟ್ಯೂಬ್ ಆಂಬಿಯೆಂಟ್ ಮೋಡ್?: ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
Image
Tech Tips: ಗೂಗಲ್​ನಲ್ಲಿ ನಿಮ್ಮ ಫೋಟೋ ಕಾಣಿಸಬೇಕೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ
Image
Fact Check ಸ್ನಾಪ್​​ಚಾಟ್​​ ಖರೀದಿಸಲು ಎಲಾನ್​​ ಮಸ್ಕ್​​​ ಚಿಂತನೆ ಎಂಬ ವೈರಲ್ ಸ್ಕ್ರೀನ್​​ಶಾಟ್ ಫೇಕ್
Image
Flipkart Black Friday Sale: 20,000 ರೂ. ಒಳಗೆ ಸಿಗುತ್ತಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್​ಗಳು

ಆದರೆ, ಜಿಯೋ ಮಾತ್ರ ಈ ಸಮಸ್ಯೆ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಈ ವರ್ಷದಲ್ಲಿ ಜಿಯೋ ಅನೇಕ ಬಾರಿ ಇಂಥಹ ಸಮಸ್ಯೆ ಎದುರಿಸಿದೆ. ಕಳೆದ ಫೆಬ್ರವರಿ, ಜೂನ್ ಮತ್ತು ಅಕ್ಟೋಬರ್​ನಲ್ಲೂ ಜಿಯೋ ಬಳಕೆದಾರರು ನೆಟ್​ವರ್ಕ್​ ಸಮಸ್ಯೆಗೆ ತುತ್ತಾಗಿದ್ದರು.

WhatsApp New Features: ಡೆಸ್ಕ್​ಟಾಪ್ ಬಳಕೆದಾರರಿಗೆ ಎರಡು ಹೊಸ ಫೀಚರ್: ವಾಟ್ಸ್​ಆ್ಯಪ್​ನಿಂದ ವಿಭಿನ್ನ ಪ್ರಯತ್ನ

ಜಿಯೋದಿಂದ ವೆಲ್​ಕಮ್ ಆಫರ್ ಘೋಷಣೆ:

ಜಿಯೋ ಟ್ರೂ 5G ಅನ್ನು ಉಚಿತವಾಗಿ ಸಂಪರ್ಕಿಸಲು ಮತ್ತು ಆನಂದಿಸಲು ಗ್ರಾಹಕರಿಗೆ ವೆಲ್‌ಕಮ್ ಆಫರ್ ಅನ್ನು ಘೋಷಿಸಿದೆ. ಆದರೆ, ಈ ವೆಲ್‌ಕಮ್‌ ಆಫರ್ ಆಯ್ದ ಜಿಯೋ 5G ಬಳಕೆದಾರರಿಗೆ ಮಾತ್ರವಷ್ಟೆ ಲಭ್ಯವಾಗುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಜಿಯೋ ಗ್ರಾಹಕರು ಕೆಲ ಅರ್ಹತೆಯನ್ನು ಪಡೆದುಕೊಂಡಿರಬೇಕು ಎಂದು ರಿಲಯನ್ಸ್ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಜಿಯೋ 5G ವೆಲ್‌ಕಮ್‌ ಆಫರ್ ಸದ್ಯ ದೆಹಲಿ – NCR, ಮುಂಬೈ, ಬೆಂಗಳೂರು, ಹೈದರಾಬಾದ್ ಮತ್ತು ಇತರ 5 ನಗರಗಳು ಸೇರಿದಂತೆ ಅರ್ಹ ನಗರಗಳಲ್ಲಿ ಮಾತ್ರ ಲಭ್ಯವಿದೆ. ಅಂದಹಾಗೆ ಈ 5G ಕೊಡುಗೆಯಲ್ಲಿ ಜಿಯೋ ತನ್ನ ಗ್ರಾಹಕರಿಗೆ 1gbps ವೇಗದೊಂದಿಗೆ ಅನಿಯಮಿತ 5G ಡೇಟಾವನ್ನು ಒದಗಿಸುತ್ತಿದೆ. ಅಂತೆಯೆ 5G ನೆಟ್‌ವರ್ಕ್‌ಗೆ ಸಂಪರ್ಕಿಸಲು ಹೊಸ 5G ಸಿಮ್ ಖರೀದಿಸಬೇಕಾಗಿಲ್ಲ ಎಂದು ಜಿಯೋ ಈ ಹಿಂದೆ ತನ್ನ ಬಳಕೆದಾರರಿಗೆ ಭರವಸೆ ನೀಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Tue, 29 November 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ