AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ

Best Recharge plans: ದೀರ್ಘಾವಧಿಯ ಯೋಜನೆಗಳು ಅನಿಯಮಿತ ಕರೆ, ಡೇಟಾ ಪ್ರಯೋಜನಗಳು, ಉಚಿತ ಎಸ್​ಎಮ್​ಎಸ್ ಸೇರಿದಂತೆ ಬಳಕೆದಾರ ಮನೋರಂಜನೆಗಾಗಿ OTT ಕೊಡುಗೆಗಳನ್ನು ಕೂಡ ನೀಡುತ್ತಿದೆ. ಜಿಯೋ, ಏರ್ಟೆಲ್​ನ ವಾರ್ಷಿಕ ಯೋಜನೆ ನೋಡೋಣ.

JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ
Airtel and JIO
Follow us
Vinay Bhat
|

Updated on: May 02, 2023 | 6:53 AM

ಟೆಲಿಕಾಂ (Telecom) ಕ್ಷೇತ್ರದಲ್ಲಿ ಇಂದು ಕಡಿಮೆ ವ್ಯಾಲಿಡಿಯ ಬಹುತೇಕ ಎಲ್ಲ ಯೋಜನೆಗಳು ದುಬಾರಿ ಬೆಲೆಯಿಂದಲೇ ಕೂಡಿದೆ. ಹೀಗಾಗಿ ಕೆಲ ಬಳಕೆದಾರರು ತಿಂಗಳ ರೀಚಾರ್ಜ್ ಮಾಡುವ ಬದಲು ವಾರ್ಷಿಕ ಯೋಜನೆಯತ್ತ ಮುಖ ಮಾಡುತ್ತಿದ್ದಾರೆ. ಅತ್ತ ಟೆಲಿಕಾಂ ಆಪರೇಟರ್‌ಗಳು ಕೂಡ 365 ದಿನಗಳ ಆಕರ್ಷಕ ವಾರ್ಷಿಕ ರೀಚಾರ್ಜ್ ಯೋಜನೆಗಳನ್ನು ನೀಡಿದೆ. ಈ ಮೂಲಕ ಬಳಕೆದಾರರು ಇಡೀ ವರ್ಷ ರೀಚಾರ್ಜ್ ಮಾಡುವ ತಲೆಬಿಸಿ ಇರುವುದಿಲ್ಲ. ಈ ದೀರ್ಘಾವಧಿಯ ಯೋಜನೆಗಳು ಅನಿಯಮಿತ ಕರೆ, ಡೇಟಾ ಪ್ರಯೋಜನಗಳು, ಉಚಿತ ಎಸ್​ಎಮ್​ಎಸ್ ಸೇರಿದಂತೆ ಬಳಕೆದಾರ ಮನೋರಂಜನೆಗಾಗಿ OTT ಕೊಡುಗೆಗಳನ್ನು ಕೂಡ ನೀಡುತ್ತಿದೆ. ಹಾಗಾದರೆ ಜಿಯೋ (Jio), ಏರ್ಟೆಲ್​ನ (Airtel) ಅತ್ಯುತ್ತಮ ವಾರ್ಷಿಕ ಯೋಜನೆಗಳ ಪಟ್ಟಿ ನೋಡೋಣ.

ಜಿಯೋ:

ಜಿಯೋದ 2879 ರೂ. ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಒಟ್ಟಾರೆಯಾಗಿ 730GB ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ದೊರೆಯುತ್ತದೆ. ಜಿಯೋ ಆ್ಯಪ್ಸ್ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ ಹಾಗೂ ಜಿಯೋ ಕ್ಲೌಡ್ ಚಂದಾದಾರಿಕೆ ಸಿಗಲಿದೆ.

2545 ರೂ. ಪ್ಲಾನ್ ಕೂಡ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಇದನ್ನೂ ಓದಿ
Image
TRAI Spam Filter: ಟ್ರಾಯ್ ಹೊಸ ನಿಯಮ ಇಂದಿನಿಂದ ಜಾರಿ: ಸ್ಪ್ಯಾಮ್ ಕರೆ, ಎಸ್​ಎಮ್​ಎಸ್​ ಬ್ಯಾನ್
Image
ಪಾಕಿಸ್ತಾನದಲ್ಲಿರುವ ತಮ್ಮ ನಾಯಕರಿಗೆ ರಹಸ್ಯ ಸಂದೇಶ ಕಳುಹಿಸಲು ಉಗ್ರರು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್​ಗಳನ್ನು ನಿಷೇಧಿಸಿದ ಭಾರತ ಸರ್ಕಾರ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಒಡೆದು ಹೋಗಿದ್ದರೆ ಸರಿಪಡಿಸಲು ಈ ಟ್ರಿಕ್ ಫಾಲೋ ಮಾಡಿ
Image
Flipkart Big Saving Days sale: ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ ಸೇಲ್​ಗೆ ಕ್ಷಣಗಣನೆ: ಈ ಬಾರಿ ಬಂಪರ್ ಆಫರ್ಸ್

Poco F5 Pro 5G: ಭಾರತೀಯ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಹೊಸ ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌: ಫೀಚರ್ಸ್ ಏನಿದೆ ನೋಡಿ

2999 ರೂ. ಪ್ಲಾನ್ ವಿಶೇಷ ಯೋಜನೆ ಆಗಿದ್ದು, ಇದು 365+ 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಜಿಯೋ ಆ್ಯಪ್ ಚಂದಾದಾರಿಕೆ ಲಭ್ಯವಿದೆ.

ಏರ್ಟೆಲ್:

ಏರ್ಟೆಲ್​ನ 3359 ರೂ. ಪ್ರಿಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಬಳಕೆದಾರರು ಒಂದು ವರ್ಷದ ಅಮೆಜಾನ್ ಪ್ರೈಮ್ ಮೊಬೈಲ್ ಎಡಿಷನ್ ಚಂದಾದಾರಿಕೆ ಮತ್ತು ಡಿಸ್ನಿ+ ಹಾಟ್ ಸ್ಟಾರ್ ಮೊಬೈಲ್ ಚಂದಾದಾರಿಕೆ ಪಡೆಯುತ್ತಾರೆ. ವಿಂಕ್ ಮ್ಯೂಸಿಕ್, ಉಚಿತ ಹಲೋ ಟ್ಯೂನ್ ಜೊತೆಗೆ ಫಾಸ್ಟ್ ಟ್ಯಾಗ್ ರಿಚಾರ್ಜ್ ಮಾಡಿದರೆ 100 ರೂ. ಕ್ಯಾಶ್​ಬ್ಯಾಕ್ ಸಿಗಲಿದೆ.

ಏರ್ಟೆಲ್​ನ 2999 ರೂ. ಪ್ರಿಪೇಯ್ಡ್‌ ಪ್ಲಾನ್ 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ವಿಂಕ್ ಮ್ಯೂಸಿಕ್, ಉಚಿತ ಹಲೋ ಟ್ಯೂನ್ ಜೊತೆಗೆ ಫಾಸ್ಟ್ ಟ್ಯಾಗ್ ರಿಚಾರ್ಜ್ ಮಾಡಿದರೆ 100 ರೂ. ಕ್ಯಾಶ್​ಬ್ಯಾಕ್ ಸಿಗಲಿದೆ.

1799 ರೂ. ವಿನ ಪ್ಲಾನ್ ಕೂಡ ಇದ್ದು, ಇದುಕೂಡ 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ವರ್ಷಕ್ಕೆ 3600 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ