AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandan Nilekani: ವಾಟ್ಸಾಪ್​ ಬೇರೆ ಸೋಷಿಯಲ್ ಮೀಡಿಯಾ ಆ್ಯಪ್​ ಬಳಸದ ನಂದನ್​ ನಿಲೇಕಣಿ ಬಗ್ಗೆ ಇಂಟರೆಸ್ಟಿಂಗ್ ಡೀಟೇಲ್ಸ್

ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರು ತಮ್ಮ ಮೊಬೈಲ್​ ಫೋನ್​ನಲ್ಲಿ ಬಳಸುವ ಸಾಮಾಜಿಕ ಮಾಧ್ಯಮ ಆ್ಯಪ್​ಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Feb 16, 2022 | 2:01 PM

Share
ನಿಮ್ಮ ಫೋನ್​ನ ಹೋಮ್​ ಸ್ಕ್ರೀನ್​ನಲ್ಲಿ ಏನೇನಿದೆ, ಅಂದರೆ ಯಾವ್ಯಾವ ಆ್ಯಪ್​ಗಳಿವೆ? ನಾವೇನಾದರೂ ಈ ಪ್ರಶ್ನೆಯನ್ನು ಕೇಳಿದರೆ ಇವರಿಗ್ಯಾಕೆ ಇಲ್ಲದ ಉಸಾಬರಿ ಅಂದುಕೊಳ್ತೀರಿ ಅಲ್ಲವಾ? ಇನ್ಫೋಸಿಸ್​ನ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ನಂದನ್​ ನಿಲೇಕಣಿ ಮಂಗಳವಾರ ತಮ್ಮ ಫೋನ್​ನ ಹೋಮ್​ ಸ್ಕ್ರೀನ್​ನಲ್ಲಿ ಏನೇನಿದೆ ಎಂಬುದನ್ನು ಹಂಚಿಕೊಂಡಿದ್ದಾರೆ. ಮತ್ತು ಅದರಲ್ಲಿ ವಾಟ್ಸಾಪ್​ ಅಥವಾ ಇನ್ಯಾವುದೇ ಸಾಮಾಜಿಕ ಮಾಧ್ಯಮ ಆ್ಯಪ್​ಗಳಿಲ್ಲ. iSPIRT ಫೌಂಡೇಷನ್​ನ ತನುಜ್​ ಭೋಜ್​ವಾನಿ ಜತೆಗೂಡಿ ದ ಆರ್ಟ್​ ಆಫ್ ಬಿಟ್​ಫುಲ್​ನೆಸ್​ ಎಂಬ ಪುಸ್ತಕದ ಸಹ ಲೇಖಕರಾಗಿದ್ದಾರೆ ನಿಲೇಕಣಿ. ಪದೇಪದೇ "ತಂತ್ರಜ್ಞಾನದ ಜತೆಗಿನ ನಂಜಿನ ಸಂಬಂಧ"ದ ಬಗ್ಗೆ ಮಾತನಾಡಿದ್ದಾರೆ.

ನಿಮ್ಮ ಫೋನ್​ನ ಹೋಮ್​ ಸ್ಕ್ರೀನ್​ನಲ್ಲಿ ಏನೇನಿದೆ, ಅಂದರೆ ಯಾವ್ಯಾವ ಆ್ಯಪ್​ಗಳಿವೆ? ನಾವೇನಾದರೂ ಈ ಪ್ರಶ್ನೆಯನ್ನು ಕೇಳಿದರೆ ಇವರಿಗ್ಯಾಕೆ ಇಲ್ಲದ ಉಸಾಬರಿ ಅಂದುಕೊಳ್ತೀರಿ ಅಲ್ಲವಾ? ಇನ್ಫೋಸಿಸ್​ನ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ನಂದನ್​ ನಿಲೇಕಣಿ ಮಂಗಳವಾರ ತಮ್ಮ ಫೋನ್​ನ ಹೋಮ್​ ಸ್ಕ್ರೀನ್​ನಲ್ಲಿ ಏನೇನಿದೆ ಎಂಬುದನ್ನು ಹಂಚಿಕೊಂಡಿದ್ದಾರೆ. ಮತ್ತು ಅದರಲ್ಲಿ ವಾಟ್ಸಾಪ್​ ಅಥವಾ ಇನ್ಯಾವುದೇ ಸಾಮಾಜಿಕ ಮಾಧ್ಯಮ ಆ್ಯಪ್​ಗಳಿಲ್ಲ. iSPIRT ಫೌಂಡೇಷನ್​ನ ತನುಜ್​ ಭೋಜ್​ವಾನಿ ಜತೆಗೂಡಿ ದ ಆರ್ಟ್​ ಆಫ್ ಬಿಟ್​ಫುಲ್​ನೆಸ್​ ಎಂಬ ಪುಸ್ತಕದ ಸಹ ಲೇಖಕರಾಗಿದ್ದಾರೆ ನಿಲೇಕಣಿ. ಪದೇಪದೇ "ತಂತ್ರಜ್ಞಾನದ ಜತೆಗಿನ ನಂಜಿನ ಸಂಬಂಧ"ದ ಬಗ್ಗೆ ಮಾತನಾಡಿದ್ದಾರೆ.

1 / 5
ಆಧಾರ್​ನ ಯಶಸ್ವಿಯಾಗಿ ಜಾರಿಗೊಳಿಸುವಲ್ಲಿ ತಂತ್ರಜ್ಞಾನ ಪರವಾಗಿ ನಂದನ್ ನಿಲೇಕಣಿ ಅವರ ಆಲೋಚನೆಯದು ದೊಡ್ಡ ಪಾಲಿದೆ. ಮಂಗಳವಾರದಂದು ಟ್ವಿಟರ್​ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ತಮ್ಮ ಡಿಜಿಟಲ್​ ಜೀವನವನ್ನು ವಿವಿಧ ಸಾಧನಗಳು (ಡಿವೈಸ್​ಗಳ) ಮೂಲಕ ನಿರ್ವಹಿಸಲು ಬಯಸುವುದಾಗಿ ಹೇಳಿದ್ದಾರೆ. "ವಾಟ್ಸಾಪ್ ಇಲ್ಲ. ನೋಟಿಫಿಕೇಷನ್ ಬ್ಯಾಡ್ಜಸ್ ಇಲ್ಲ. ಕೇವಲ ಅಗತ್ಯ ಅಪ್ಲಿಕೇಷನ್​ಗಳು ಮಾತ್ರ," ಎಂದು ಟ್ವೀಟ್ ಮಾಡಿದ್ದಾರೆ.

ಆಧಾರ್​ನ ಯಶಸ್ವಿಯಾಗಿ ಜಾರಿಗೊಳಿಸುವಲ್ಲಿ ತಂತ್ರಜ್ಞಾನ ಪರವಾಗಿ ನಂದನ್ ನಿಲೇಕಣಿ ಅವರ ಆಲೋಚನೆಯದು ದೊಡ್ಡ ಪಾಲಿದೆ. ಮಂಗಳವಾರದಂದು ಟ್ವಿಟರ್​ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, ತಮ್ಮ ಡಿಜಿಟಲ್​ ಜೀವನವನ್ನು ವಿವಿಧ ಸಾಧನಗಳು (ಡಿವೈಸ್​ಗಳ) ಮೂಲಕ ನಿರ್ವಹಿಸಲು ಬಯಸುವುದಾಗಿ ಹೇಳಿದ್ದಾರೆ. "ವಾಟ್ಸಾಪ್ ಇಲ್ಲ. ನೋಟಿಫಿಕೇಷನ್ ಬ್ಯಾಡ್ಜಸ್ ಇಲ್ಲ. ಕೇವಲ ಅಗತ್ಯ ಅಪ್ಲಿಕೇಷನ್​ಗಳು ಮಾತ್ರ," ಎಂದು ಟ್ವೀಟ್ ಮಾಡಿದ್ದಾರೆ.

2 / 5
ಉಬರ್, ಆಪಲ್​ಟಿವಿ ಮತ್ತು ಇನ್ಫೋಸಿಸ್ ಲೆಕ್ಸ್

ನಂದನ್ ನಿಲೇಕಣಿ ಅವರು ಬಳಸುವ ಅಗತ್ಯ ಆ್ಯಪ್​ಗಳು ಅಂದರೆ ಅದರಲ್ಲಿ ಉಬರ್, ಆಪಲ್​ಟಿವಿ ಮತ್ತು ಇನ್ಫೋಸಿಸ್ ಲೆಕ್ಸ್ ಇವೆ. ಇನ್ನು ನೀವು ಸಹ ಹೋಮ್​ ಸ್ಕ್ರೀನ್ ಷೇರ್​ ಮಾಡಿ ಎಂದು ನಂದನ್ ನೀಡಿರುವ ಆಹ್ವಾನಕ್ಕೆ ಅವರ ಟ್ವಿಟರ್​ ಖಾತೆಯ ಫಾಲೋವರ್​ಗಳ ದೊಡ್ಡ ಮಟ್ಟದಲ್ಲೇ ಪ್ರತಿಕ್ರಿಯಿಸಿದ್ದಾರೆ. ತಾವು ಕೂಡ ನೋಟಿಫಿಕೇಷನ್​ ಬ್ಯಾಡ್ಜ್​ಗಳನ್ನು ಮತ್ತು ಸಾಮಾಜಿಕ ಮಾಧ್ಯಮ ಬಳಕೆಯನ್ನು ಮಿತಿಗೊಳಿಸುವುದಕ್ಕೆ ಯತ್ನಿಸುವುದಾಗಿ ಹೇಳಿದ್ದಾರೆ. ಭೋಜ್​ವಾನಿ ಕೂಡ ತಮ್ಮ ಫೋನ್​ನ ಹೋಮ್​ ಸ್ಕ್ರೀನ್​ನ ಹಂಚಿಕೊಂಡಿದ್ದು, ನಿಲೇಕಣಿ ಅವರಿಗಿಂತ ಹೆಚ್ಚು "ಕ್ರೂರ"ವಾಗಿ ತಾವೇ ನಡೆದುಕೊಂಡಿರುವುದಾಗಿ ಹೇಳಿದ್ದಾರೆ.

3 / 5
ಒಂದೊಂದು ಉದ್ದೇಶಕ್ಕೆ ಒಂದೊಂದು ಡಿವೈಸ್

ನಂದನ್​ ನಿಲೇಕಣಿ ಅವರು ಜನವರಿಯಲ್ಲಿ ಮನಿಕಂಟ್ರೋಲ್ ಜತೆ ಮಾತನಾಡುತ್ತಾ ಹೇಳಿದ್ದರು, ವಿವಿಧ ಸಾಧನಗಳನ್ನು ಬಳಸಿ ಹೇಗೆ ತಮ್ಮ ಡಿಜಿಟಲ್​ ಜೀವನ ಹತೋಟಿ ಮಾಡುವುದಾಗಿ ತಿಳಿಸಿದ್ದರು. "ನನ್ನ ಲ್ಯಾಪ್​ಟಾಪ್​ ಉದ್ಯೋಗಕ್ಕಾಗಿ. ನನ್ನ ಫೋನ್ ಸಂವಹನಕ್ಕೆ. ನನ್ನ ಐಪ್ಯಾಡ್ ಕ್ಯುರೇಟೇಡ್ ಕಂಟೆಂಟ್ ಮತ್ತು ಮನರಂಜನೆಗಾಗಿ," ಎಂದಿದ್ದರು.

4 / 5
ವಾಯ್ಸ್​ಕಾಲ್ ಮತ್ತು ಎಸ್ಸೆಮ್ಮೆಸ್​ಗಷ್ಟೇ ಸೀಮಿತ

ತಂತ್ರಜ್ಞಾನ ಜತೆಗೆ ಆರೋಗ್ಯಕರ ಸಂಬಂಧ ಕುರಿತು ಮಾತನಾಡಿರುವ ನಂದನ್ ನಿಲೇಕಣಿ, ನಾನು ವಾಯ್ಸ್​ ಕಾಲ್​ ಮತ್ತು ಎಸ್ಸೆಮ್ಮೆಸ್​ಗಷ್ಟೇ ಸೀಮಿತವಾಗಬೇಕು ಅಂದುಕೊಂಡಿದ್ದೆ. ಟ್ವಿಟರ್​ವೊಂದನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾಜಿಕ ಮಾಧ್ಯಮ ಬಳಸುವುದಿಲ್ಲ. ಏಕೆಂದರೆ ನಾನು ಅದನ್ನು ಫಾಲೋವರ್​ಗಳ ಪ್ರಚಾರದ ಸಾಧನವಾಗಿ ಬಳಸುತ್ತೇನೆ. ಜತೆಗೆ ಝೀರೋ ಇನ್​ಬಾಕ್ಸ್ ನೀತಿ ಅನುಸರಿಸುತ್ತೇನೆ.

5 / 5

Published On - 2:00 pm, Wed, 16 February 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!