AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ: ಕರ್ನಾಟಕ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ

KSP Application: ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆ್ಯಪ್( KSP Application ) ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ: ಕರ್ನಾಟಕ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ
mobile thief
Follow us
Vinay Bhat
|

Updated on: Sep 21, 2023 | 3:02 PM

ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್​ಫೋನ್ (Smartphone) ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.

ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆ್ಯಪ್( KSP Application ) ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಇದನ್ನೂ ಓದಿ
Image
ಭಾರತದಲ್ಲಿ ಬಹುನಿರೀಕ್ಷಿತ ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ ಬಿಡುಗಡೆ
Image
15,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು
Image
ಶೀಘ್ರದಲ್ಲೇ ಫ್ಲಿಪ್​ಕಾರ್ಟ್​ನಲ್ಲಿ ಶುರುವಾಗಲಿದೆ ಹೊಸ ಮೇಳ
Image
ರೋಚಕತೆ ಸೃಷ್ಟಿಸಿರುವ ಮೋಟೋ ಎಡ್ಜ್ 40 ನಿಯೋ ಇಂದು ದೇಶದಲ್ಲಿ ಬಿಡುಗಡೆ

Jio Airfiber Plans: ಬೆಂಗಳೂರು ಸೇರಿ 8 ನಗರಗಳಲ್ಲಿ ಜಿಯೋ ಏರ್​ಫೈಬರ್ ಚಾಲನೆ; ಇಲ್ಲಿದೆ ಅದರ ವಿವಿಧ ಪ್ಲಾನ್​ಗಳ ಬೆಲೆ

ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

  • ಮೊದಲಿಗೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಗೂಗಲ್‌ ಪ್ಲೇ ಸ್ಟೋರ್‌ನಿಂದ KSP Application ಡೌನ್​ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಕೊಳ್ಳಬೇಕು.
  • ಮೊಬೈಲ್‌ ದೂರನ್ನು E-Lost ನಲ್ಲಿ ವರದಿ ಮಾಡಲು KSP Application ಅನ್ನು ಓಪನ್‌ ಮಾಡಿಕೊಳ್ಳಿ. ಅಲ್ಲಿಂದ E-Lost ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ.
  • ಈಗ E-Lost ವರದಿಯನ್ನು ನೊಂದಾಯಿಸಿಕೊಂಡು ಈ ಆಪ್ಶನ್‌ ಅನ್ನು ಆಯ್ಕೆ ಮಾಡಿರಿ.
  • ಬಳಿಕ ನಿಮ್ಮ ಹೆಸರು, ವಿಳಾಸ, ಜಿಲ್ಲೆ, ಮೊಬೈಲ್‌ ನಂಬರ್‌ ಹಾಗೂ ಇ-ಮೇಲ್‌ ಐಡಿ ನೊಂದಾಯಿಸಿರಿ. ನಂತರ ಮುಂದಿನ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ.
  • ನಿಮ್ಮ ಮೊಬೈಲ್‌ನ ಬಿಲ್‌ ಇದ್ದರೆ ಅದನ್ನು ಅಪ್‌ಲೋಡ್‌ ಮಾಡಿ ನಂತರ ನೆಕ್ಸ್ಟ್ ಒತ್ತಿರಿ
  • ಇದಾದ ಬಳಿಕ ಮೊಬೈಲ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ
  • ಮೊಬೈಲ್‌ ಮಾಹಿತಿಯನ್ನು ನೋಂದಾಯಿಸಿ. ಬಳಿಕ ಆಡ್‌ ಆಪ್ಶನ್‌ ಅನ್ನು ಆಯ್ಕೆ ಮಾಡಿಕೊಳ್ಳಿರಿ
  • ಕೊನೆಯಲ್ಲಿ ಮೊಬೈಲ್‌ ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಮಾಹಿತಿಯನ್ನು ನೀಡಿ ಸಬ್ಮಿಟ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ. ನಿಮಗೆ ಅದರಲ್ಲಿಯೇ ರಶೀದಿಯೂ ಸಿಗಲಿದೆ. ಅದನ್ನು ಡೌನ್‌ ಲೋನ್‌ ಮಾಡಿ ಇಟ್ಟುಕೊಳ್ಳಿರಿ.

ಸಂಚಾರ್ ಸಾಥಿ ಪೋರ್ಟಲ್

ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ