AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್

WhatsApp Banned Indian Accounts: 500 ಮಿಲಿಯನ್​ಗೂ ಅಧಿಕ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆ್ಯಪ್ ಇದೀಗ ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ. ದರಂತೆ 71,11,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.

WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್
WhatsApp
Vinay Bhat
|

Updated on: Nov 03, 2023 | 2:42 PM

Share

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ (WhatsApp) ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸೆಪ್ಟೆಂಬರ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 71,11,000 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ 74ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು. ವಾಟ್ಸ್​ಆ್ಯಪ್​ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. 500 ಮಿಲಿಯನ್​ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ. ಈ ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್​ಆ್ಯಪ್​ ಖಾತೆಯನ್ನು ಬ್ಯಾನ್ ಮಾಡಿದೆ.

Flipkart Diwali sale 2023: 14,900 ರೂ.: ಫ್ಲಿಪ್‌ಕಾರ್ಟ್ ದೀಪಾವಳಿ ಸೇಲ್​ನಲ್ಲಿ ಐಫೋನ್ 14 ಗೆ ಬಂಪರ್ ಡಿಸ್ಕೌಂಟ್

ಇದನ್ನೂ ಓದಿ
Image
ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ ಬರೋಬ್ಬರಿ 11 ಸ್ಮಾರ್ಟ್​ಫೋನ್​ಗಳು
Image
ಸ್ಮಾರ್ಟ್‌ಫೋನ್‌ನ ಬ್ಯಾಕ್ ಕ್ಯಾಮೆರಾ ಪಕ್ಕದಲ್ಲಿ ಈ ಸಣ್ಣ ಹೋಲ್ ಯಾಕಿದೆ?
Image
ನಥಿಂಗ್ ಫೋನ್ 2 ಮೇಲೆ ಧಮಾಕ ಆಫರ್:ದೀಪಾವಳಿ ಡಿಸ್ಕೌಂಟ್​ನಲ್ಲಿ ಇಂದೇ ಖರೀದಿಸಿ
Image
108MP ಕ್ಯಾಮೆರಾದ ಹೊಸ ಹುವೈ ನೋವಾ 11 SE ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ