AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​ ನಂತರ ಫೇಸ್​ಬುಕ್​ನಿಂದಲೂ ಉದ್ಯೋಗಿಗಳ ಕೆಲಸ ಕಸಿಯಲು ಸಿದ್ಧತೆ: ದೊಡ್ಡಮಟ್ಟದಲ್ಲಿ ಸಿಬ್ಬಂದಿ ವಜಾ ಪಟ್ಟಿ ಸಿದ್ಧಪಡಿಸಿದ ಮೆಟಾ

ಮೈಕ್ರೊಸಾಫ್ಟ್, ಸ್ನ್ಯಾಪ್​, ಟ್ವಿಟರ್ ಸೇರಿದಂತೆ ಹಲವು ಕಂಪನಿಗಳು ಜಾಗತಿಕ ಆರ್ಥಿಕ ಹಿಂಜರಿತದ ಕಾರಣ ಮುಂದಿಟ್ಟು ಉದ್ಯೋಗಿಗಳನ್ನು ವಜಾ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿವೆ.

ಟ್ವಿಟರ್​ ನಂತರ ಫೇಸ್​ಬುಕ್​ನಿಂದಲೂ ಉದ್ಯೋಗಿಗಳ ಕೆಲಸ ಕಸಿಯಲು ಸಿದ್ಧತೆ: ದೊಡ್ಡಮಟ್ಟದಲ್ಲಿ ಸಿಬ್ಬಂದಿ ವಜಾ ಪಟ್ಟಿ ಸಿದ್ಧಪಡಿಸಿದ ಮೆಟಾ
ಫೇಸ್​ಬುಕ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 07, 2022 | 8:14 AM

Share

ಜನಪ್ರಿಯ ಸಾಮಾಜಿಕ ಮಾಧ್ಯಮಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಮ್ ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್​ಆ್ಯಪ್ ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ ಕಂಪೆನಿಯು ದೊಡ್ಡಮಟ್ಟದಲ್ಲಿ ಉದ್ಯೋಗಿಗಳು ವಜಾ ಮಾಡಲು ಸಿದ್ಧತೆ ನಡೆಸುತ್ತಿದೆ. ತೆಗೆಯಬೇಕಾದ ಉದ್ಯೋಗಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಬುಧವಾರದಿಂದಲೇ (ನ 9) ವಜಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ‘ವಾಲ್​ಸ್ಟ್ರೀಟ್​ ಜರ್ನಲ್’ ಪತ್ರಿಕೆಯು ವರದಿ ಮಾಡಿದೆ. ಇತ್ತೀಚೆಗಷ್ಟೇ ಟ್ವಿಟರ್​ ಸಹ ದೊಡ್ಡಮಟ್ಟದಲ್ಲಿ ಉದ್ಯೋಗಿಗಳನ್ನು ವಜಾ ಮಾಡಿತ್ತು. ಈ ಘಟನೆಯ ಬೆನ್ನಿಗೇ ಮತ್ತೊಂದು ಕಂಪನಿಯು ಉದ್ಯೋಗಿಗಳ ವಜಾಕ್ಕೆ ಮುಂದಾಗಿರುವುದು ಆರ್ಥಿಕ ಹಿಂಜರಿತದ ಪರಿಣಾಮಗಳ ಕುರಿತ ಭೀತಿಯನ್ನು ಹೆಚ್ಚಿಸಿದೆ. ಈ ನಡುವೆ ‘ಮೆಟಾ’ ಕಂಪನಿಯು ‘ವಾಲ್​ಸ್ಟ್ರೀಟ್ ಜರ್ನಲ್’ ಪತ್ರಿಕೆಯ ವರದಿಯನ್ನು ನಿರಾಕರಿಸಿದೆ.

ಕಳೆದ ತಿಂಗಳು (ಅಕ್ಟೋಬರ್) ಮೆಟಾ ಕಂಪನಿಯು ತ್ರೈಮಾಸಿಕ ಆದಾಯದಲ್ಲಿ ಕುಂಠಿತವಾಗಬಹುದಾದ ಅಪಾಯ ಇರುವ ಬಗ್ಗೆ ಒತ್ತಿ ಹೇಳಿತ್ತು. ಈ ಹೇಳಿಕೆ ಹೊರಬಿದ್ದ ನಂತರ ಸತತ ಕುಸಿತ ಕಂಡಿದ್ದ ಮೆಟಾ ಕಂಪನಿಯ ಷೇರುಗಳು 67 ಶತಕೋಟಿ ಡಾಲರ್​ನಷ್ಟು ಮೌಲ್ಯ ಕಳೆದುಕೊಂಡಿತ್ತು. ಈ ವರ್ಷದಲ್ಲಿ ಮೆಟಾ ಕಳೆದುಕೊಂಡಿರುವ ಬಂಡವಾಳ ಮೌಲ್ಯವು ಸುಮಾರು 50,000 ಕೋಟಿ ಡಾಲರ್​ನಷ್ಟು.

ಜಾಗತಿಕ ಆರ್ಥಿಕ ಪ್ರಗತಿ ಕುಂಠಿತಗೊಂಡಿರುವುದು ಹಾಗೂ ಮುಂದಿನ ದಿನಗಳಲ್ಲಿ ಹಿಂಜರಿತ ಕಾಣಿಸಿಕೊಳ್ಳಬಹುದು ಎಂಬ ಭೀತಿ ವ್ಯಕ್ತವಾಗಿರುವುದು ಮೆಟಾ ಲಾಭದ ಮೇಲೆ ನೇರ ಪರಿಣಾಮ ಬೀರಿದೆ. ಇದರ ಜೊತೆಗೆ ಟಿಕ್​ಟಾಕ್​ ಒಡ್ಡುತ್ತಿರುವ ಪ್ರಬಲ ಸ್ಪರ್ಧೆ, ಖಾಸಗಿ ಬದುಕು ಹಾಗೂ ಗೌಪ್ಯದ ವಿಚಾರದಲ್ಲಿ (ಪ್ರೈವೆಸಿ) ಆ್ಯಪಲ್​ ತನ್ನ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಮೆಟಾವರ್ಸ್​ಗಾಗಿ ಹೆಚ್ಚಿನ ವೆಚ್ಚ ಮಾಡಬೇಕಾಗುತ್ತದೆ ಎನ್ನುವ ಲೆಕ್ಕಾಚಾರ ಹಾಗೂ ನಿಯಮಗಳಲ್ಲಿ ಯಾವ ಬೇಕಾದರೂ ಬದಲಾವಣೆಗಳು ಬರಬಹುದು ಎಂಬ ಭೀತಿಯು ಮೆಟಾ ಕಂಪನಿಯ ಆದಾಯ ಗಳಿಕೆ ಸಾಧ್ಯತೆಯ ಮೇಲೆ ಕಾರ್ಮೋಡ ಕವಿಯುವಂತೆ ಮಾಡಿತು.

ಮೆಟಾ ಕಂಪನಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮಾರ್ಕ್ ಝುಕರ್​ಬರ್ಗ್ ಮೆಟಾವರ್ಸ್​ನ ಹೂಡಿಕೆಗಳು ಫಲ ನೀಡಲು ಸುಮಾರು 10 ವರ್ಷ ಬೇಕಾಗಬಹುದು ಎಂದು ಹೇಳಿದ್ದರು. ಇದಾದ ನಂತರ ಝುಕರ್​ಬರ್ಗ್​ ನೇಮಕಾತಿಗಳನ್ನು ಸ್ಥಗಿತಗೊಳಿಸಿದ್ದರು, ಹಲವು ಪ್ರಾಜೆಕ್ಟ್​ಗಳನ್ನು ಕೈಬಿಟ್ಟರು, ಅದರ ಜೊತೆಗೆ ವೆಚ್ಚ ಕಡಿತಕ್ಕೆ ಹಲವು ಕ್ರಮಗಳನ್ನೂ ಘೋಷಿಸಿದ್ದರು. ‘2023ರಲ್ಲಿ ನಾವು ನಮ್ಮ ಹೂಡಿಕೆಗಳನ್ನು ಕಡಿಮೆ ಸಂಖ್ಯೆಯ ಆದರೆ ಹೆಚ್ಚು ಬೆಳವಣಿಗೆ ಸಾಧ್ಯತೆಯಿರುವ ಕ್ಷೇತ್ರಗಳತ್ತ ಗಮನ ಕೊಡುತ್ತೇವೆ. ಹೀಗಾಗಿ ಕೆಲ ತಂಡಗಳು ಅರ್ಥಪೂರ್ಣವಾಗಿ ಬೆಳೆಯುತ್ತವೆ. ಆದರೆ ಬಹುತೇಕ ಇತರ ತಂಡಗಳು ಪ್ರಗತಿ ಕಾಣುವುದಿಲ್ಲ. ಅಷ್ಟೇ ಅಲ್ಲ, ತಂಡದ ಸದಸ್ಯರೂ ಕಡಿಮೆಯಾಗಲಿದ್ದಾರೆ. 2023ರ ಅಂತ್ಯದ ಹೊತ್ತಿಗೆ ನಮ್ಮ ತಂಡವು ಹೆಚ್ಚು ಕಡಿಮೆ ಇಷ್ಟೇ ಸಂಖ್ಯೆಯಲ್ಲಿರುತ್ತದೆ ಅಥವಾ ಸ್ವಲ್ಪ ಕಡಿಮೆಯಾಗಬಹುದು’ ಎಂದು ಮಾರ್ಕ್ ಝುಕರ್​ಬರ್ಗ್​ ಕಳೆದ ಅಕ್ಟೋಬರ್​ನಲ್ಲಿ ಹೇಳಿದ್ದರು.

ಎಂಜಿನಿಯರ್​ಗಳ ನೇಮಕಾತಿ ಪ್ರಮಾಣವನ್ನು ಶೇ 30ರಷ್ಟು ಕಡಿಮೆ ಮಾಡುವುದಾಗಿ ಮಾರ್ಕ್ ಝುಕರ್​ಬರ್ಗ್​ ಹೇಳಿದ್ದರು. ಆರ್ಥಿಕ ಕುಸಿತವನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಝುಕರ್​ಬರ್ಗ್​ ಉದ್ಯೋಗಿಗಳಿಗೆ ಎಚ್ಚರಿಸಿದ್ದರು. ಮೆಟಾ ಕಂಪನಿಯ ಹೂಡಿಕೆದಾರ ಕಂಪನಿ ‘ಅಲ್ಟಿಮೀಟರ್ ಕ್ಯಾಪಿಟಲ್ ಮ್ಯಾನೇಜ್​ಮೆಂಟ್’ ಮಾರ್ಕ್ ಝುಕರ್​ಬರ್ಗ್​ಗೆ ಬಹಿರಂಗ ಪತ್ರ ಬರೆದು, ‘ಕಂಪನಿಯು ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿತಗೊಳಿಸಬೇಕು ಮತ್ತು ವೆಚ್ಚ ಕಡಿಮೆ ಮಾಡಲು ಗಮನ ಹರಿಸಬೇಕು’ ಎಂದು ತಾಕೀತು ಮಾಡಿತ್ತು. ಮೆಟಾವರ್ಸ್​ನಲ್ಲಿ ಹೂಡಿಕೆದಾರರ ವಿಶ್ವಾಸ ಕಡಿಮೆಯಾಗುತ್ತಿದೆ ಎಂಬ ಸಂಗತಿಯನ್ನು ಈ ಪತ್ರವು ಸಾರಿ ಹೇಳಿತ್ತು.

ಮೈಕ್ರೊಸಾಫ್ಟ್, ಸ್ನ್ಯಾಪ್​, ಟ್ವಿಟರ್ ಸೇರಿದಂತೆ ಹಲವು ಕಂಪನಿಗಳು ಜಾಗತಿಕ ಆರ್ಥಿಕ ಹಿಂಜರಿತದ ಕಾರಣ ಮುಂದಿಟ್ಟು ಉದ್ಯೋಗಿಗಳನ್ನು ವಜಾ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಹಲವು ಕಂಪನಿಗಳು ಹೊಸ ನೇಮಕಾತಿಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿವೆ. ಹೆಚ್ಚುತ್ತಿರುವ ಬಡ್ಡಿ ದರ, ಹಣದುಬ್ಬರ ಮತ್ತು ಯೂರೋಪ್​ನಲ್ಲಿ ಇಂಧನ ಬಿಕ್ಕಟ್ಟಿನಿಂದಾಗಿ ಆರ್ಥಿಕ ಕುಸಿತದ ಆತಂಕ ಜಗತ್ತನ್ನು ಕಾಡುತ್ತಿದೆ.

Published On - 8:07 am, Mon, 7 November 22

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್