AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Microsoft Teams Down: ಮೈಕ್ರೋಸಾಫ್ಟ್ ಸರ್ವರ್ ಡೌನ್; ಭಾರತದ ಬಳಕೆದಾರರಿಗೆ ತೊಂದರೆ

ಸಮಸ್ಯೆ ಇರುವುದನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ. ಮೈಕ್ರೋಸಾಫ್ಟ್​​ 365ನ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕಂಪನಿ ಟ್ವೀಟ್ ಮಾಡಿದೆ.

Microsoft Teams Down: ಮೈಕ್ರೋಸಾಫ್ಟ್ ಸರ್ವರ್ ಡೌನ್; ಭಾರತದ ಬಳಕೆದಾರರಿಗೆ ತೊಂದರೆ
ಮೈಕ್ರೋಸಾಫ್ಟ್Image Credit source: AFP
ಗಣಪತಿ ಶರ್ಮಾ
|

Updated on:Jan 25, 2023 | 3:10 PM

Share

ನವದೆಹಲಿ: ಮೈಕ್ರೋಸಾಫ್ಟ್ (Microsoft) ಸೇವೆಗಳಾದ ಎಂಎಸ್ ಟೀಮ್ಸ್, ಔಟ್​​ಲುಕ್, ಅಜೂರ್ ಹಾಗೂ ಮೈಕ್ರೋಸಾಫ್ಟ್ 365 ಸರ್ವರ್​ ಡೌನ್ ಆಗಿದ್ದು, ಭಾರತದ ಬಳಕೆದಾರರಿಗೆ ತೊಂದರೆಯಾಗಿದೆ. ಟೀಮ್ಸ್​ ಸರ್ವರ್ ಡೌನ್ ಆಗಿರುವ ಬಗ್ಗೆ ಡೌನ್​ಡಿಟೆಕ್ಟರ್ (Downdetector) ತಾಣದಲ್ಲಿ ಸುಮಾರು 3,500ರಷ್ಟು ಮಂದಿ ವರದಿ ಮಾಡಿದ್ದಾರೆ. ಲಿಂಕ್ಡ್​ಇನ್ ಸರ್ವರ್ ಕೂಡ ಡೌನ್ ಆಗಿದೆ ಎಂದು ವರದಿಯಾಗಿದೆ. ಭಾರತದಲ್ಲಿನ ಸುಮಾರು 3,000 ಮಂದಿ ಔಟ್​ಲುಕ್ ಬಳಕೆದಾರರೂ ಸರ್ವರ್ ಡೌನ್ ಬಗ್ಗೆ ರಿಪೋರ್ಟ್ ಮಾಡಿದ್ದಾರೆ. ಸಮಸ್ಯೆ ಇರುವುದನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ. ಮೈಕ್ರೋಸಾಫ್ಟ್​​ 365ನ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕಂಪನಿ ಟ್ವೀಟ್ ಮಾಡಿದೆ. ಮೈಕ್ರೋಸಾಫ್ಟ್ ಅಜೂರ್​ ಪಬ್ಲಿಕ್ ಕ್ಲೌಡ್ ಪ್ಲಾಟ್​ಫಾರ್ಮ್​ ಸರ್ವರ್ ಕೂಡ ಡೌನ್ ಆಗಿದೆ. ಮೈಕ್ರೋಸಾಫ್ಟ್​ನ ಅನೇಕ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನಿಗದಿಯಾಗಿರುವ ಕರೆಗಳನ್ನು ಸ್ವೀಕರಿಸಲೂ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಈ ಮಧ್ಯೆ, ಮೈಕ್ರೋಸಾಫ್ಟ್ ಸೇವೆಗಳು ಡೌನ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಸಂದೇಶಗಳು ಹರಿದಾಡುತ್ತಿವೆ. ಮೈಕ್ರೋಸಾಫ್ಟ್ ಅನ್ನು ಹಾಸ್ಯ ಮಾಡಿರುವ ಸಂದೇಶಗಳೂ ಟ್ವಿಟರ್​​ನಲ್ಲಿ ಪ್ರಕಟಗೊಂಡಿವೆ. ಮೈಕ್ರೋಸಾಫ್ಟ್ ತಪ್ಪಾಗಿ ಉದ್ಯೋಗಿಗಳನ್ನು ವಜಾಗೊಳಿಸಿದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ‘ಮೈಕ್ರೋಸಾಫ್ಟ್ ಡೌನ್ ಆಗಿದೆ. ನನ್ನ ಕೆಲವು ಸಹೋದ್ಯೋಗಿಗಳು ಕೆಲಸದಿಂದ ವಜಾಗೊಂಡೆವೇ’ ಎಂದು ಭಾವಿಸಿದರು ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದಾರೆ. ‘ರಾಷ್ಟ್ರಮಟ್ಟದ ರಜಾ ದಿನದ ಹಿಂದಿನ ದಿನವೇ ಮೈಕ್ರೋಸಾಫ್ಟ್ ಡೌನ್ ಆಗಿದೆ. ಇದು ಬೇಗನೇ ಲಾಗೌಟ್ ಆಗಿ ಎಂದು ದೇವರು ನೀಡಿರುವ ಸಂದೇಶವೇ’ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಎಲ್ಲೆಲ್ಲಿ ಮೈಕ್ರೋಸಾಫ್ಟ್ ಸರ್ವರ್ ಡೌನ್?

ಭಾರತ ಮಾತ್ರವಲ್ಲದೆ ಇತರ ಕೆಲವು ದೇಶಗಳಲ್ಲಿಯೂ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದೆ. ಜಪಾನ್​ನಲ್ಲಿ ಸುಮಾರು 900 ಮಂದಿ ಸರ್ವರ್ ಡೌನ್ ಆಗಿರುವ ಬಗ್ಗೆ ರಿಪೋರ್ಟ್ ಮಾಡಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾ, ಬ್ರಿಟನ್, ಯುಎಇಯಲ್ಲಿ ಕೂಡ ಮೈಕ್ರೋಸಾಫ್ಟ್ ಸರ್ವರ್ ಡೌನ್ ಆಗಿದೆ ಎಂದು ವರದಿಯಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Wed, 25 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ