Mobile Blast: ಮನಕಲಕುವ ಘಟನೆ: ರೆಡ್ಮಿ ಸ್ಮಾರ್ಟ್​ಫೋನ್​ ಸ್ಪೋಟಗೊಂಡು 8 ವರ್ಷದ ಬಾಲಕಿ ದುರ್ಮರಣ: ಎಚ್ಚರ ವಹಿಸಿ

91ಮೊಬೈಲ್ಸ್‌ ಮಾಡಿರುವ ವರದಿಯ ಪ್ರಕಾರ, ಈ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಇಲ್ಲಿನ ಪಟ್ಟಿಪರಂಬು ಮೂಲದ ಆದಿತ್ಯ ಶ್ರೀ ಎಂಬ ಬಾಲಕಿ ಮೊಬೈಲ್‌ನಲ್ಲಿ ವಿಡಿಯೋ ನೋಡುತ್ತಿರುವಾಗ ಮೊಬೈಲ್ ಫೋನ್ ಕೈಯಲ್ಲಿ ಸ್ಫೋಟಗೊಂಡಿದೆ.

Mobile Blast: ಮನಕಲಕುವ ಘಟನೆ: ರೆಡ್ಮಿ ಸ್ಮಾರ್ಟ್​ಫೋನ್​ ಸ್ಪೋಟಗೊಂಡು 8 ವರ್ಷದ ಬಾಲಕಿ ದುರ್ಮರಣ: ಎಚ್ಚರ ವಹಿಸಿ
ಸಾಂದರ್ಭಿಕ ಚಿತ್ರ
Follow us
|

Updated on:Apr 27, 2023 | 1:34 PM

ಇಂದು ಸ್ಮಾರ್ಟ್​ಫೋನ್​ಗಳನ್ನು ಬಳಕೆ ಮಾಡದೆ ಇರುವವರ ಸಂಖ್ಯೆ ತೀರಾ ಕಡಿಮೆ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳು ಸಿಗುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ಮೊಬೈಲ್​ಗಳು ಎಗ್ಗಿಲ್ಲದೆ ಸೇಲ್ ಆಗುತ್ತದೆ. ಇದರ ಜೊತೆಗೆ ಕಳೆದ ಕೆಲವು ವರ್ಷಗಳಿಂದ ಸ್ಮಾರ್ಟ್​ಫೋನ್‌ಗಳು ಸ್ಫೋಟಗೊಳ್ಳುವ (Mobile Blast) ಸಂಗತಿಗಳು ಕೂಡ ಹೆಚ್ಚುತ್ತಿದೆ. ಮೊಬೈಲ್ ಸ್ಪೋಟಗೊಂಡ ಸುದ್ದಿ ಇತ್ತೀಚಿನ ದಿನಗಳಲ್ಲಿ ವರದಿ ಆಗುತ್ತಲೇ ಇದೆ. ಇದರಿಂದ ಜೀವ ಹಾನಿ ಸಂಭವಿಸಿದ್ದೂ ಇದೆ. ಇತ್ತೀಚೆಗಷ್ಟೆ ಸ್ಯಾಮ್​ಸಂಗ್ (Samsung), ಒನ್​ಪ್ಲಸ್ ನಾರ್ಡ್, ಶವೋಮಿ 11 ಲೈಟ್ NE 5G ಸ್ಮಾರ್ಟ್​ಫೋನ್​ಗಳು ಸ್ಪೋಟಗೊಂಡಿದ್ದು ಬಳಕೆದಾರರಲ್ಲಿ ಭಯ ಹುಟ್ಟಿಸಿತ್ತು. ಇದೀಗ ಶವೋಮಿ ಕಂಪನಿಯ ಸಬ್​ಬ್ರ್ಯಾಂಡ್ ರೆಡ್ಮಿ (Redmi) ಸ್ಮಾರ್ಟ್​ಫೋನ್ ಸ್ಪೋಟಗೊಂಡು ಎಂಟು ವರ್ಷದ ಬಾಲಕಿ ಮೃತ ಪಟ್ಟಿರುವ ಘಟನೆ ನಡೆದಿದೆ.

91ಮೊಬೈಲ್ಸ್‌ ಮಾಡಿರುವ ವರದಿಯ ಪ್ರಕಾರ, ಈ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಇಲ್ಲಿನ ಪಟ್ಟಿಪರಂಬು ಮೂಲದ ಆದಿತ್ಯ ಶ್ರೀ ಎಂಬ ಬಾಲಕಿ ಮೊಬೈಲ್‌ನಲ್ಲಿ ವಿಡಿಯೋ ನೋಡುತ್ತಿರುವಾಗ ಮೊಬೈಲ್ ಫೋನ್ ಕೈಯಲ್ಲಿ ಸ್ಫೋಟಗೊಂಡಿದೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಉಳಿಸಿಕೊಳ್ಳುವುದಕ್ಕೆ ಸಾದ್ಯವಾಗಿಲ್ಲ. ಮೊಬೈಲ್‌ ಚಾರ್ಜ್‌ ಆಗುತ್ತಿರುವಾಗ ವಿಡಿಯೋ ನೋಡಿರುವುದು ಈ ಸ್ಪೋಟಕ್ಕೆ ಕಾರಣ ಎಂದು ಹೇಳಲಾಗಿದೆ. ಬಾಲಕಿ ಮನೆಯಲ್ಲಿ ಮೊಬೈಲ್‌ ಅನ್ನು ಚಾರ್ಜ್‌ಗೆ ಹಾಕಿರುವಾಗಲೇ ವಿಡಿಯೋ ವೀಕ್ಷಣೆ ಮಾಡಿದ್ದಾರೆ. ಆಗ ಫೋನ್​ನ ತೀವ್ರತೆ ಹೆಚ್ಚಾದಂತೆ ಬಿಸಿಯಾಗಿ ಚಾರ್ಜಿಂಗ್‌ನಲ್ಲಿದ್ದ ಕಾರಣ ಸ್ಪೋಟವಾಗಿದೆ ಎಂದು ವರದಿಯಾಗಿದೆ.

Tech Tips: ನಿಮ್ಮ ಆಧಾರ್ ಕಾರ್ಡ್ ಮೂಲಕ ಯಾರಾದರು ಸಿಮ್ ಖರೀದಿಸಿದ್ದಾರ?: ಹೇಗೆ ಕಂಡುಹಿಡಿಯುವುದು?

ಇದನ್ನೂ ಓದಿ
Image
Vivo X90 Pro: 120W ಫಾಸ್ಟ್ ಚಾರ್ಜರ್, ಅದ್ಭುತ ಕ್ಯಾಮೆರಾ: ಸದ್ದಿಲ್ಲದೆ ವಿವೋದಿಂದ ಎರಡು ಹೊಸ ಸ್ಮಾರ್ಟ್​ಫೋನ್ ಬಿಡುಗಡೆ
Image
Vivo Y78+ 5G: ಮಾರುಕಟ್ಟೆಗೆ ಎಂಟ್ರಿಕೊಟ್ಟ ವಿವೊ Y78+ 5G ಸ್ಮಾರ್ಟ್‌ಫೋನ್‌: ಏನು ವಿಶೇಷತೆ?, ಬೆಲೆ ಎಷ್ಟು?
Image
WhatsApp New Feature: ಇನ್ನು ಒಂದೇ ವಾಟ್ಸ್​ಆ್ಯಪ್ ಖಾತೆ ನಾಲ್ಕು ಫೋನ್​ಗಳಲ್ಲಿ ಬಳಸಬಹುದು!
Image
Google Pixel 6a: ಕೇವಲ 749 ರೂ. ಗೆ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಖರೀದಿಸಿ: ಈ ಬಂಪರ್ ಆಫರ್ ಮಿಸ್ ಮಾಡ್ಬೇಡಿ

ಈ ಬಗ್ಗೆ ಪಜಯನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ. ಈ ಫೋನ್‌ ಅನ್ನು ಮೂರು ವರ್ಷಗಳ ಹಿಂದೆ ಖರೀದಿಸಲಾಗಿದೆ. ಅಲ್ಲದೆ ಈ ಫೋನ್‌ನ ಬ್ಯಾಟರಿಯನ್ನು ಕಳೆದ ವರ್ಷ ಬದಲಾಯಿಸಲಾಗಿತ್ತಂತೆ. ಫೋನ್ ಸ್ಪೋಟಗೊಂಡಾಗ ಬಾಲಕಿಯ ಮುಖ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ. ಗಾಯದ ಪ್ರಮಾಣ ತೀವ್ರವಾಗಿದ್ದ ಕಾರಣ ಬದುಕಿಸಿಕೊಳ್ಳಲು ಸಾದ್ಯವಾಗಿಲ್ಲ ಎಂದು ಹೇಳಲಾಗಿದೆ.

ಸ್ಮಾರ್ಟ್‌ಫೋನ್ ಬ್ಲಾಸ್ಟ್ ಆಗದಂತೆ ಹೇಗೆ ಎಚ್ಚರ ವಹಿಸಬೇಕು?:

  • ನಿಮ್ಮ ಫೋನ್‌ನ ಬ್ಯಾಟರಿ ಬೇಗನೆ ಬಿಸಿಯಾಗುತ್ತಿದ್ದರೆ, ಅಥವಾ ನಿಮ್ಮ ಫೋನ್ ಹಿಂಬಾಗದಲ್ಲಿ ಬ್ಯಾಟರಿ ಊದಿಕೊಂಡಂತೆ ಕಾಣಿಸಿದರೆ ಅಂತಹ ಬ್ಯಾಟರಿಯನ್ನು ಕೂಡಲೇ ಬದಲಾಯಿಸಿಬಿಡಿ. ಏಕೆಂದರೆ, ಬ್ಯಾಟರಿ ಒಳಗಿನ ಸೆಲ್ಟ್ ತೀರ್ವತೆಯಿಂದ ಅದು ಯಾವಾಗ ಬೇಕಾದರು ಸ್ಪೋಟಗೊಳ್ಳಬಹುದು. ಹೆಚ್ಚಿನ ಮೊಬೈಲ್ ಸ್ಪೋಟಗೊಳ್ಳಲು ಮುಖ್ಯ ಕಾರಣ ಇದುವೇ ಆಗಿರುತ್ತದೆ.
  • ನಿಮ್ಮ ಫೋನ್‌ನಲ್ಲಿ ನೀಡಿರುವ ಚಾರ್ಜರ್ ಬಿಟ್ಟು ಇತರೆ ಚಾರ್ಜರ್ ಬಳಕೆ ಮಾಡಿದರೆ ಸ್ಮಾರ್ಟ್‌ಪೋನ್‌ಗಳು ಸ್ಪೋಟಗೊಳ್ಳುವ ಅವಕಾಶಗಳೇ ಹೆಚ್ಚು. ಒಂದು ಫೋನ್‌ಗೂ ಮತ್ತು ಇನ್ನೊಂದು ಫೋನ್‌ ಚಾರ್ಜಿಂಗ್ ಸ್ಟ್ರೆಂತ್ ಬದಲಾಗಿರುತ್ತದೆ. ಹೆಚ್ಚು ಚಾರ್ಜ್ ಪ್ರವಹಿಸುವ ಚಾರ್ಜರ್‌ನಿಂದ ಫೋನ್ ಸ್ಪೋಟಗೊಳ್ಳುವ ಸಾಧ್ಯತೆಯಿರುತ್ತದೆ.
  • ಈಗಂತು 200W ವರೆಗಿನ ಚಾರ್ಜರ್ ಮಾರುಕಟ್ಟೆಯಲ್ಲಿದೆ. ಇದು ನಿಮ್ಮ ಮೊಬೈಲ್​ಗೆ ಸಪೋರ್ಟ್ ಮಾಡುತ್ತದೆ ನಿಜ. ಆದರೆ, ಆ ವೇಗವನ್ನು ತಡೆದುಕೊಳ್ಳುವ ಶಕ್ತಿ ನಿಮ್ಮ ಮೊಬೈಲ್ ಬ್ಯಾಟರಿಗೆ ಇದೆಯೇ ಎಂಬುದನ್ನು ಪರಿಶೀಲಿಸಿ.
  • ನೇರವಾಗಿ ಸೂರ್ಯನ ಕಿರಣಗಳು ಬೀಳುವ ಜಾಗದಲ್ಲಿ ಫೋನನ್ನು ಇಟ್ಟು, ಚಾರ್ಜ್ ಮಾಡಬೇಡಿ. ಅಥವಾ ಬಿಸಿಯಾಗಿರುವ ಜಾಗಗಳು ಉದಾಹರಣೆಗೆ ಕಾರಿನ ಡ್ಯಾಶ್ ಬೋರ್ಡ್ ಬಳಿ ಇಟ್ಟು ಹೆಚ್ಚು ಘಂಟೆಗಳ ಕಾಲ ಮೊಬೈಲ್ ಚಾರ್ಜ್ ಮಾಡಬೇಡಿ. ಹೆಚ್ಚು ಬಿಸಿ ಇರುವ ಜಾಗದಲ್ಲಿ ಮೊಬೈಲ್ ಇಡುವುದು ಕೂಡ ಅಪಾಯ.
  • ಮೊಬೈಲ್ ಫೋನುಗಳು ಸಾಮಾನ್ಯವಾಗಿ ಸಹಿಸಿಕೊಳ್ಳುವುದು ಕೇವಲ 0 ಯಿಂದ 45 ಡಿಗ್ರಿ ಸೆಂಟಿಗ್ರೇಡ್ ನ ತಾಪವನ್ನು ಮಾತ್ರ. ಜಾಗರೂಕತೆ ಮಾರ್ಗಗಳಲ್ಲಿ ಪ್ರಮುಖವಾದ ವಿಚಾರವೆಂದರೆ ಪವರ್ ಸ್ಟ್ರಿಪ್ ಗಳನ್ನು ಬಳಸಿ ಅಥವಾ ಎಕ್ಸ್ ಟೆಷನ್ ಕಾರ್ಡ್ ಗಳನ್ನುಬಳಸಿ ಮೊಬೈಲ್ ಚಾರ್ಜ್ ಮಾಡಬೇಡಿ.

ಹೆಚ್ಚಿನ ಟೆಕ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:34 pm, Thu, 27 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ