AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G13: 50 MP ಭರ್ಜರಿ ಕ್ಯಾಮೆರಾ, 5,000mAh ಬ್ಯಾಟರಿಯ ಮೋಟೊ ಸ್ಮಾರ್ಟ್​ಫೋನ್

ಮೋಟೊರೊಲಾ, ಭಾರತದ ಮಾರುಕಟ್ಟೆಗೆ ಜಿ ಸರಣಿಯಲ್ಲಿ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದೆ. ನೂತನ ಫೋನ್​ನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ, ಬಜೆಟ್ ದರ ಮತ್ತು 5,000mAh ಬ್ಯಾಟರಿ ವಿಶೇಷವಾಗಿದೆ. ಮೋಟೊರೊಲಾ ಲೆನೊವೊ ತೆಕ್ಕೆಗೆ ಹೋದ ಬಳಿಕ, ಹಲವು ಮಾದರಿಗಳನ್ನು ಭಾರತದಲ್ಲಿನ ಆ್ಯಂಡ್ರಾಯ್ಡ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

Moto G13: 50 MP ಭರ್ಜರಿ ಕ್ಯಾಮೆರಾ, 5,000mAh ಬ್ಯಾಟರಿಯ ಮೋಟೊ ಸ್ಮಾರ್ಟ್​ಫೋನ್
Moto G13 ಸ್ಮಾರ್ಟ್​ಫೋನ್
ಕಿರಣ್​ ಐಜಿ
|

Updated on: Mar 29, 2023 | 6:46 PM

Share

ಲೆನೊವೊ ಒಡೆತನದ ಮೋಟೊರೊಲಾ ಕಂಪನಿ, ಭಾರತದ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದೆ. ಹೆಚ್ಚಿನ ಬಳಕೆದಾರರು ಬಯಸುವ ಗರಿಷ್ಠ ಬ್ಯಾಟರಿ ಮತ್ತು ಹೆಚ್ಚಿನ ಕ್ಯಾಮೆರಾ ವೈಶಿಷ್ಟ್ಯವನ್ನು ಮೋಟೊ ಹೊಸ Moto G13 ಸ್ಮಾರ್ಟ್​ಫೋನ್ ಹೊಂದಿದೆ. ನೂತನ ಫೋನ್, ಬಜೆಟ್ ಸ್ಮಾರ್ಟ್​ಫೋನ್ ವಿಭಾಗದಲ್ಲಿ ಬಿಡುಗಡೆಯಾಗಿದ್ದು, ಆಕರ್ಷಕ ಪ್ರೀಮಿಯಂ ವಿನ್ಯಾಸ ಹೊಂದಿದೆ. ನೂತನ ಫೋನ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ಮೋಟೊರೊಲಾ ಹೊಸ Moto G13

ಮೋಟೊರೊಲಾ ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಹೊಸ Moto G13 ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದೆ. ನೂತನ ಸ್ಮಾರ್ಟ್​ಫೋನ್​ನಲ್ಲಿ 6.5 ಇಂಚಿನ HD+ LCD ಡಿಸ್​ಪ್ಲೇ ಇದೆ. MediaTek Helio G85 SoC ಪ್ರೊಸೆಸರ್ Arm Mali-G52 MC2 GPU ಬೆಂಬಲ ಹೊಂದಿದೆ. ಜತೆಗೆ, ಭಾರತದ ಮಾರುಕಟ್ಟೆಗೆ ಅನುಗುಣವಾಗಿ ಬಜೆಟ್ ದರದಲ್ಲಿ ನೂತನ ಸ್ಮಾರ್ಟ್​ಫೋನ್ ಅನ್ನು ಮೋಟೊ ಪರಿಚಯಿಸಿದೆ.

ಹೊಸ Moto G13 ವೈಶಿಷ್ಟ್ಯಗಳು

ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸಹಿತ ತ್ರಿವಳಿ ಕ್ಯಾಮೆರಾವನ್ನು ಹೊಸ Moto G13 ಸ್ಮಾರ್ಟ್​ಫೋನ್ ಹೊಂದಿದೆ. ಅಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಜತೆಗೆ 5,000mAh ಬ್ಯಾಟರಿ ಹಾಗೂ 10W c ಫಾಸ್ಟ್ ಚಾರ್ಜಿಂಗ್ ಬೆಂಬಲವಿದೆ. ಮೋಟೊ ಹೊಸ Moto G13 ಸ್ಮಾರ್ಟ್​ಫೋನ್​ನಲ್ಲಿದೆ Android 13 ಕಾರ್ಯಾಚರಣೆ ವ್ಯವಸ್ಥೆ ಇದೆ.

ಮೋಟೊರೊಲಾ Moto G13 ಬೆಲೆ ಮತ್ತು ಲಭ್ಯತೆ

ನೂತನ Moto G13 ಸ್ಮಾರ್ಟ್​ಫೋನ್ 4GB RAM ಮತ್ತು 64GB ಮಾದರಿಗೆ ₹9,999 ದರವಿದೆ. ಏಪ್ರಿಲ್ 5ರಿಂದ ರಿಟೇಲ್ ಸ್ಟೋರ್ ಹಾಗೂ ಫ್ಲಿಪ್​ಕಾರ್ಟ್​ನಲ್ಲಿ ಲಭ್ಯವಾಗುತ್ತದೆ. ಲ್ಯಾವೆಂಡರ್ ಬ್ಲೂ ಮತ್ತು ಮ್ಯಾಟ್ ಚಾರ್​ಕೋಲ್ ಬಣ್ಣದಲ್ಲಿ ಹೊಸ ಮೋಟೊ ಫೋನ್ ದೊರೆಯುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು