AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಮ್ ತಡೆಗಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ ಮೋದಿ ಸರ್ಕಾರ: ವಂಚಕರಿಗೆ ಟೆನ್ಶನ್

Cyber Crime: ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಸುಮಾರು 5000 ದೂರುಗಳು ಪ್ರತಿದಿನ ದಾಖಲಾಗುತ್ತವೆ ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ವಂಚಕರು ಇದುವರೆಗೆ 9 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಶು ಮಾಡಿದ್ದಾರೆ. ಇದೀಗ ಸೈಬರ್ ಅಪರಾಧ ತಡೆಗಟ್ಟಲು ಕೇಂದ್ರ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೈಬರ್ ಕ್ರೈಮ್ ತಡೆಗಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ ಮೋದಿ ಸರ್ಕಾರ: ವಂಚಕರಿಗೆ ಟೆನ್ಶನ್
Cyber Crime
Vinay Bhat
|

Updated on: Jan 16, 2024 | 12:16 PM

Share

ಅಮಾಯಕರು ವಂಚನೆಗೆ ಒಳಗಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ, ಸೈಬರ್ ಅಪರಾಧವನ್ನು (Cyber Crime) ತಡೆಗಟ್ಟಲು ಕೇಂದ್ರ ಸರ್ಕಾರವು ಈಗ ಬ್ಯಾಂಕ್‌ಗಳು ಮತ್ತು ಟೆಲಿಕಾಂ ಕಂಪನಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ಗೃಹ ಸಚಿವಾಲಯದ ನಿರ್ದೇಶನದ ಪ್ರಕಾರ, ಬ್ಯಾಂಕ್‌ಗಳು ಮತ್ತು ಟೆಲಿಕಾಂ ಕಂಪನಿಗಳು ಸೈಬರ್ ಸೆಲ್ ಪ್ರಧಾನ ಕಚೇರಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕಾಗುತ್ತದೆ. ಸರ್ಕಾರದ ಈ ಕ್ರಮವು ಎರಡು ಪ್ರಮುಖ ಪ್ರಯೋಜನಗಳನ್ನು ಹೊಂದಿದೆ.

ಮೊದಲ ಪ್ರಯೋಜನವೆಂದರೆ, ಇದರಿಂದ ಸೈಬರ್ ಅಪರಾಧದಲ್ಲಿ ಭಾಗಿಯಾಗಿರುವ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬಹುದು. ಮತ್ತೊಂದು ಪ್ರಯೋಜನವೆಂದರೆ ಮೊಬೈಲ್ ಸಂಖ್ಯೆಯ ಮೇಲೆ ಕ್ರಮ ಕೈಗೊಳ್ಳುವುದು ಮೊದಲಿಗಿಂತ ಸುಲಭವಾಗುತ್ತದೆ. ಜನರನ್ನು ವಂಚಿಸುವ ಘಟನೆಗಳು ಹೆಚ್ಚಾದ ನಂತರ ಸೈಬರ್ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಹಳ ಮುಖ್ಯವಾಗಿದೆ. ಸೈಬರ್ ಅಪರಾಧದಂತಹ ಘಟನೆಗಳಲ್ಲಿ ಸಮಯ ವ್ಯರ್ಥ ಮಾಡದೆ ಕ್ರಮ ಕೈಗೊಳ್ಳಲು ಸೈಬರ್ ಸೆಲ್ ಪ್ರಧಾನ ಕಛೇರಿಯಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ಸರ್ಕಾರದ ಈ ಹೊಸ ಕ್ರಮವು ದೊಡ್ಡ ಪ್ರಯೋಜನೆವಾಗಲಿದೆ.

ಸೇಲ್ ಅಲರ್ಟ್: ಭಾರತದಲ್ಲಿ ಪೋಕೋ X6-ಪೋಕೋ X6 ಪ್ರೊ ಮಾರಾಟ ಇಂದಿನಿಂದ ಆರಂಭ

ಇದನ್ನೂ ಓದಿ
Image
ರಿಪಬ್ಲಿಕ್ ಡೇ ಸೇಲ್: ಒನ್‌ಪ್ಲಸ್-ರೆಡ್ಮಿ ಫೋನುಗಳು ಅತಿ ಕಡಿಮೆ ಬೆಲೆಗೆ ಲಭ್ಯ
Image
ರಾತ್ರಿ ಪೂರ್ತಿ ಫೋನ್ ಚಾರ್ಜ್​ಗೆ ಹಾಕಬಹುದು: ಆದರೆ, ಈ ವಿಚಾರ ನೆನಪಿರಲಿ
Image
ಪಾಸ್​ಪೋರ್ಟ್ ಸೈಜ್ ಫೋಟೋ ಬೇಕಿದ್ದರೆ ನಿಮಿಷದಲ್ಲಿ ಪಡೆಯಿರಿ: ಹೇಗೆ ಗೊತ್ತೇ?
Image
ಸ್ಮಾರ್ಟ್​ಫೋನ್ ಡಿಸ್​ಪ್ಲೇ ಬಗ್ಗೆ ಇವೆಲ್ಲಾ ನೀವು ತಿಳಿದಿರಬೇಕು!

ಪ್ರತಿದಿನ ಸಾವಿರಾರು ದೂರು

ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಸುಮಾರು 5000 ದೂರುಗಳು ಪ್ರತಿದಿನ ದಾಖಲಾಗುತ್ತವೆ ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ವಂಚಕರು ಇದುವರೆಗೆ 9 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಶು ಮಾಡಿದ್ದಾರೆ. ಈ ಪೈಕಿ ಶೇ 10ರಷ್ಟು ಪ್ರಕರಣಗಳಲ್ಲಿ ಮಾತ್ರ ಫಲಿತಾಂಶ ಕಂಡುಬಂದಿದೆ.

ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ

ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಯಾವುದೇ ಘಟನೆಯು ಯಾರಿಗಾದರೂ ಸಂಭವಿಸಿದರೆ, ಅಂತಹ ವ್ಯಕ್ತಿಯು ತಡಮಾಡದೆ ತಕ್ಷಣವೇ ಸರ್ಕಾರದ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಬೇಕು. ಕರೆ ಮಾಡಿದ ನಂತರ, ನಿಮಗೆ ಸಂಭವಿಸಿದ ಘಟನೆಯ ಬಗ್ಗೆ ತಿಳಿಸುವ ಮೂಲಕ ದೂರು ನೀಡಿ.

ಸಹಾಯವಾಣಿ ಸಂಖ್ಯೆಯನ್ನು ಹೊರತುಪಡಿಸಿ ನೀವು ದೂರು ನೀಡಲು ಇನ್ನೊಂದು ಆಯ್ಕೆಯನ್ನು ಸಹ ಆಯ್ಕೆ ಮಾಡಬಹುದು. https://cybercrime.gov.in/ ಗೆ ಭೇಟಿ ನೀಡುವ ಮೂಲಕ ನೀವು ಆನ್‌ಲೈನ್‌ನಲ್ಲಿ ದೂರು ಸಲ್ಲಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು