AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Internet Day 2024: ವಿಶ್ವದ ಈ ದೇಶಗಳಲ್ಲಿ ಇಂಟರ್ನೆಟ್ ಬಳಕೆ ನಿಷಿದ್ಧ, ಇಲ್ಲಿದೆ ಕುತೂಹಲಕಾರಿ ಮಾಹಿತಿ

ಇತ್ತೀಚೆಗಿನ ದಿನಗಳಲ್ಲಿ ಇಂಟರ್ನೆಟ್ ಎಲ್ಲರ ಬದುಕಿನಲ್ಲಿ ಅವಿಭಾಜ್ಯ ಅಂಗವಾಗಿದೆ. ಇಡೀ ಜಗತ್ತನ್ನು ಸಂಪರ್ಕಿಸುವ ಸುಧಾರಿತ ತಂತ್ರಜ್ಞಾನದ ಕೊಡುಗೆಯನ್ನು ಗುರುತಿಸುವುದು ಹಾಗೂ ಗೌರವಿಸುವ ಉದ್ದೇಶವನ್ನು ರಾಷ್ಟ್ರೀಯ ಇಂಟರ್ನೆಟ್ ದಿನ ಹೊಂದಿದೆ. ಇಂದು ವಿಶ್ವದ ಜನಸಂಖ್ಯೆಯ ಶೇ.63ರಷ್ಟು ಜನರು ಇಂಟರ್ನೆಟ್ ಸಂಪೂರ್ಣವಾಗಿ ಅವಲಂಬಿಸಿದ್ದಾರೆ, ಇದರಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ. ಹಾಗಾದ್ರೆ ಈ ದಿನದ ಆಚರಣೆಯೂ ಹುಟ್ಟಿಕೊಂಡದ್ದು ಹೇಗೆ? ಈ ದಿನದ ಮಹತ್ವದ ಕುರಿತಾದ ಮಾಹಿತಿ ಇಲ್ಲಿದೆ.

National Internet Day 2024: ವಿಶ್ವದ ಈ ದೇಶಗಳಲ್ಲಿ ಇಂಟರ್ನೆಟ್ ಬಳಕೆ ನಿಷಿದ್ಧ, ಇಲ್ಲಿದೆ ಕುತೂಹಲಕಾರಿ ಮಾಹಿತಿ
ಸಾ.ದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 29, 2024 | 10:04 AM

Share

ಆಧುನಿಕ ಜಗತ್ತಿಗೆ ಒಗ್ಗಿಕೊಂಡಿರುವ ನಾವುಗಳು ಎಲ್ಲದರಲ್ಲಿ ಹೊಸತನವನ್ನು ಬಯಸುತ್ತಿದ್ದೇವೆ. ಅಭಿವೃದ್ಧಿ ಹೊಂದುತ್ತಿದ್ದಂತೆ ಅಂತರ್ಜಾಲವು ಜನರ ಜೀವನದ ಬಹುಮುಖ್ಯ ಅಂಗವಾಗಿದೆ. ಕುಳಿತಲ್ಲಿಂದಲೇ ವಿವಿಧ ದೇಶದ ಜನರ ಜೊತೆಗೆ ಸಂಪರ್ಕ ಸಾಧಿಸುವ ಮಟ್ಟಿಗೆ ಅಭಿವೃದ್ಧಿ ಹೊಂದಿದ್ದೇವೆ. ಪ್ರಸ್ತುತ ಇಂಟರ್ನೆಟ್ ಇಲ್ಲದ ಜಗತ್ತನ್ನು ಅರಿತುಕೊಳ್ಳುವುದು ಕಷ್ಟ. ಇಂಟರ್ನೆಟ್ ನಿಂದ ಜ್ಞಾನವನ್ನು ಪಡೆಯುವುದರ ಜೊತೆಗೆ ಮನರಂಜನೆಯೂ ಸಿಗುತ್ತದೆ. ಮನೆಯಲ್ಲೇ ಕುಳಿತು ಕಚೇರಿ ಕೆಲಸ ಕಾರ್ಯಗಳು, ವಿವಿಧ ರೀತಿಯ ಬ್ಯಾಂಕಿಂಗ್ ಮತ್ತು ಶಾಪಿಂಗ್ ಗಳನ್ನು ನಡೆಸಬಹುದು. ಹೀಗೆ ಹತ್ತು ಹಲವು ಪ್ರಯೋಜನಗಳನ್ನು ಹೊಂದಿರುವ ಇಂಟರ್ನೆಟ್ ನಿಂದ ದುಷ್ಪರಿಣಾಮಗಳು ಇದೆ. ಅದಲ್ಲದೇ ವಿಶ್ವದಲ್ಲಿರುವ ಚೀನಾ, ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾದಂತಹ ಕೆಲವು ದೇಶಗಳಲ್ಲಿನ ಸರ್ಕಾರವು ಇಂಟರ್ನೆಟ್ ಬಳಕೆಗೆ ನಿಷೇಧ ಹೇರಿವೆ. ಹೀಗಾಗಿ ಇವತ್ತಿಗೂ ಈ ಕೆಲವು ದೇಶಗಳ ನಾಗರಿಕರಿಗೆ ಇಂಟರ್ನೆಟ್ ಬಳಸುವಂತಿಲ್ಲ.

ಇಂಟರ್ನೆಟ್ ದಿನದ ಇತಿಹಾಸ

ಮೊದಲ ಇಂಟರ್ನೆಟ್ ಸಂಪರ್ಕವನ್ನು 1969ರ ಅಕ್ಟೋಬರ್ 29 ರಂದು ಮಾಡಲಾಯಿತು. ಇದು ನೀಲ್ ಆರ್ಮ್‌ಸ್ಟ್ರಾಂಗ್ ಚಂದ್ರನ ಮೇಲೆ ಇಳಿದ ಕೇವಲ ಎರಡು ತಿಂಗಳ ನಂತರ. ಇದಾಗಿ ಕೆಲವು ವರ್ಷಗಳು ಉರುಳುತ್ತಿದ್ದಂತೆ ಹೈಪರ್‌ಟೆಕ್ಸ್ಟ್ ಟ್ರಾನ್ಸ್‌ಫರ್ ಪ್ರೋಟೋಕಾಲ್, ಹೈಪರ್‌ಟೆಕ್ಸ್ಟ್ ಮಾರ್ಕ್‌ಅಪ್ ಭಾಷೆ ಅನ್ನು ಅಭಿವೃದ್ಧಿಗೊಂಡಿತು. WWW, HTTP, HTML ಮತ್ತು URL ಗಳ ಅಭಿವೃದ್ಧಿಯು 1989 ಮತ್ತು 1991 ರ ನಡುವೆ ನಡೆಯಿತು. ಈ ಎಲ್ಲದರ ಸ್ಮರಣಾರ್ಥವಾಗಿ 2005ರ ಅಕ್ಟೋಬರ್ 29 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಇಂಟರ್ನೆಟ್ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಅಕ್ಟೋಬರ್ 29 ರಂದು ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಅನಿಮೇಷನ್ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಇಂಟರ್ನೆಟ್ ದಿನದ ಮಹತ್ವ

ಇಂಟರ್ನೆಟ್ ಒಂದು ತಂತಿಯಾಗಿದ್ದು, ಎರಡು ಕಂಪ್ಯೂಟರ್‌ಗಳು ಪರಸ್ಪರ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಸರ್ವರ್ ಎನ್ನುವುದು ನಿರ್ದಿಷ್ಟ ಕಂಪ್ಯೂಟರ್ ಆಗಿದ್ದು ಅದು ನೇರವಾಗಿ ಇಂಟರ್ನೆಟ್‌ಗೆ ಸಂಪರ್ಕವನ್ನು ಬೆಸೆದುಕೊಂಡಿದೆ. ಇಡೀ ಜಗತ್ತನ್ನೇ ಬೆಸೆಯುತ್ತಿರುವ ಸುಧಾರಿತ ಇಂಟರ್‌ನೆಟ್‌ ಸೃಷ್ಟಿಕರ್ತರ ಕೊಡುಗೆಗಳನ್ನು ನೆನಪಿಸುವುದು ಹಾಗೂ ಅವರಿಗೆ ಗೌರವ ಸೂಚಿಸಲು ಈ ದಿನವನ್ನು ಮೀಸಲಿಡಿಸಲಾಗಿದ್ದು, ಹೀಗಾಗಿ ಈ ದಿನದ ಆಚರಣೆಯೂ ಮಹತ್ವದ್ದಾಗಿದೆ. ಪ್ರತಿನಿತ್ಯ ನಾವು ಬಳಸುವ ಇಂಟರ್‌ನೆಟ್‌ ಅನ್ನು ಸದಾ ಅತ್ಯುತ್ತಮವಾಗಿಸಲು ಶ್ರಮಿಸುತ್ತಿರುವ ಕೈಗಳಿಗೆ ಈ ದಿನವನ್ನು ಮೀಸಲಿಡಲಾಗಿದೆ. ಇಂಟರ್ನೆಟ್ ಸೇವೆಯಿಂದಾಗಿ ಜನರು ವಿಡಿಯೋ ಕಾನ್ಫರೆನ್ಸ್, ಮನರಂಜನೆಗೆ ಹಾಗೂ ಮಾಹಿತಿಯನ್ನು ಪಡೆಯಲು ಅನುಕೂಲಕರವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ