AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Technology Day: ಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ: ಇದರ ಇತಿಹಾಸ, ಮಹತ್ವವೇನು?

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಏನು ಈ ದಿನದ ಮಹತ್ವ, ಇತಿಹಾಸ ಹಾಗೂ ಈ ವರ್ಷದ ಘೋಷವಾಕ್ಯ ಏನು ಎಂಬುದರ ಮಾಹಿತಿ ಇಲ್ಲಿದೆ.

National Technology Day: ಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ: ಇದರ ಇತಿಹಾಸ, ಮಹತ್ವವೇನು?
National Technology Day
Follow us
Vinay Bhat
|

Updated on: May 11, 2023 | 6:51 AM

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನ (National Technology Day) ಆಚರಿಸಲಾಗುತ್ತದೆ. ಎಂಜಿನಿಯರ್​​ಗಳು, ವಿಜ್ಞಾನಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸುವ ಸಲುವಾಗಿ ಈ ದಿನ ಮೀಸಲಾಗಿದೆ. 2021ರ ಮೇ 11ನೇ ತಾರೀಕಿನಂದು 30ನೇ ರಾಷ್ಟ್ರೀಯ ತಂತ್ರಜ್ಞಾನ (Technology) ದಿನಾಚರಣೆ. ಭಾರತದ (India) ತಾಂತ್ರಿಕ ಸಾಧನೆಗಳನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವಂಥ ದಿನ ಇದಾಗಿದೆ.

1998ನೇ ಇಸವಿಯ ಇದೇ ಮೇ 11ನೇ ತಾರೀಕು ಭಾರತದ ಪಾಲಿಗೆ ಮಹತ್ತರವಾದ ದಿನ. ರಾಜಸ್ಥಾನದ ಪೋಖ್ರಾನ್​ನಲ್ಲಿ ಶಕ್ತಿ-1 ಅಣ್ವಸ್ತ್ರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಆ ಕಾರ್ಯಾಚರಣೆಯನ್ನು ಮುನ್ನಡೆಸಿದವರು ಮಾಜಿ ರಾಷ್ಟ್ರಪತಿ, ದಿವಂಗತರಾದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ. ಆ ನಂತರ ದೇಶದಲ್ಲಿ ಇನ್ನಷ್ಟು ಅಣ್ವಸ್ತ್ರ ಪರೀಕ್ಷೆಗಳು ಯಶಸ್ವಿಯಾಗಿ ನಡೆದವು. ಇವೆಲ್ಲ ಆದ ನಂತರ ಆಗಿನ ಪ್ರಧಾನಿಗಳಾಗಿದ್ದ ಅಟಲ್​ ಬಿಹಾರಿ ವಾಜಪೇಯಿ ಅವರು ಭಾರತವನ್ನು ಅಣ್ವಸ್ತ್ರ ರಾಷ್ಟ್ರ ಎಂದು ಘೋಷಣೆ ಮಾಡಿದರು. ಆ ಮೂಲಕ ಅಣ್ವಸ್ತ್ರ ಹೊಂದಿದ ದೇಶಗಳ ಸಾಲಿನಲ್ಲಿ ಆರನೆಯದಾಗಿ ಭಾರತ ಕೂಡ ಸೇರ್ಪಡೆಯಾಯಿತು.

Tech Tips: ಸೋಲಾರ್ ಚಾರ್ಜರ್​ನಿಂದ ನಿಮ್ಮ ಮೊಬೈಲ್ ಬ್ಯಾಟರಿ ಫುಲ್ ಮಾಡಬಹುದು: ಹೇಗೆ ಗೊತ್ತೇ?

ಇದನ್ನೂ ಓದಿ
Image
Pixel 6a: ಪಿಕ್ಸೆಲ್ 7a ಬಿಡುಗಡೆಗೆ ಕ್ಷಣಗಣನೆ: ಪಿಕ್ಸೆಲ್ 6a ಫೋನ್ ಮೇಲೆ ಬಂಪರ್ ಆಫರ್ ಘೋಷಿಸಿದ ಫ್ಲಿಪ್​ಕಾರ್ಟ್
Image
Poco F5 5G: ಭಾರತದಲ್ಲಿ ಬಹುನಿರೀಕ್ಷಿತ ಪೋಕೋ F5 5G ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?
Image
Google I/O 2023: ಇಂದು ಗೂಗಲ್ ವಾರ್ಷಿಕ ಸಮ್ಮೇಳನ: ಪಿಕ್ಸೆಲ್ 7a, ಪಿಕ್ಸೆಲ್ ಫೋಲ್ಡ್ ಬಿಡುಗಡೆ ಸಾಧ್ಯತೆ: ಲೈವ್ ವೀಕ್ಷಿಸುವುದು ಹೇಗೆ?
Image
Google Pixel 7a: ಗೂಗಲ್‌ ಪಿಕ್ಸೆಲ್‌ 7a ಸ್ಮಾರ್ಟ್​ಫೋನ್​ನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ

ಅಣ್ವಸ್ತ್ರ ಪರೀಕ್ಷೆಯನ್ನು ಹೊರತುಪಡಿಸಿ, ಭಾರತವು ಅದೇ ದಿನ (ಮೇ 11) ಮೊದಲ ದೇಶೀಯ ವಿಮಾನವಾದ ಹಂಸ- 3 ಕೂಡ ಪರೀಕ್ಷಿಸಿತು. ಇದನ್ನು ರೂಪಿಸಿದ್ದು ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ. ಕರ್ನಾಟಕದ ಬೆಂಗಳೂರಿನಲ್ಲಿ ಈ ವಿಮಾನ ಸಿದ್ಧವಾಯಿತು. ಹಗುರವಾದ ಎರಡು ಆಸನದ ಈ ವಿಮಾನವನ್ನು ಸಿದ್ಧಪಡಿಸಿದ್ದು ಪೈಲಟ್ ತರಬೇತಿ, ಸರ್ವೇಲನ್ಸ್ ಮತ್ತು ಇತರ ಉದ್ದೇಶಗಳಿಗಾಗಿ.

ಇಂಥ ಪರೀಕ್ಷೆಗಳ ಸಾಲಿಗೆ ಡಿಫೆನ್ಸ್ ರೀಸರ್ಷ್ ಅಂಡ್ ಡೆವಲಪ್​ಮೆಂಟ್ ಆರ್ಗನೈಸೇಷನ್ (ಡಿಆರ್​ಡಿಒ) ಕೂಡ ಕೊಡುಗೆ ನೀಡಿದೆ. ಇದೇ ದಿನದಂದು ನೆಲದಿಂದ ಆಕಾಶಕ್ಕೆ ಚಿಮ್ಮುವಂಥ ತ್ರಿಶೂಲ್ ಕ್ಷಿಪಣಿಯ ಯಶಸ್ವಿ ಪ್ರಯೋಗ ಮಾಡಿತು. ಇದರ ಯಶಸ್ವಿ ಪ್ರಯೋಗದ ನಂತರ ಭಾರತೀಯ ಸೇನೆ ಮತ್ತು ವಾಯು ಸೇನೆಗೆ ಸೇರ್ಪಡೆ ಮಾಡಲಾಯಿತು. ಈ ಎಲ್ಲ ತಂತ್ರಜ್ಞಾನ ಸಾಧನೆಗಳೂ ಮೇ 11ನೇ ತಾರೀಕಿನಂದೇ ಆಗಿವೆ. ಭಾರತ ಸರ್ಕಾರ ಮೇ 11ನೇ ತಾರೀಕಿನ ದಿನವನ್ನು ಅಧಿಕೃತವಾಗಿ ತಂತ್ರಜ್ಞಾನ ದಿನ ಎಂದು ಘೋಷಣೆ ಮಾಡಿದೆ.

1999ರಿಂದ ಈಚೆಗೆ ಪ್ರತಿ ವರ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಟಿಡಿಬಿ)ಯಿಂದ ಈ ದಿನವನ್ನು ಆಚರಿಸಲಾಗುತ್ತದೆ. ವಿವಿಧ ಕಾರ್ಯಾಗಾರ, ಸೆಮಿನಾರ್​ಗಳನ್ನು ಆಯೋಜಿಸಲಾಗುತ್ತದೆ. ಜತೆಗೆ ಮಂಡಳಿಯಿಂದ ಬೆಂಬಲಿಸಿದ ಕಂಪೆನಿಗಳ ತಂತ್ರಜ್ಞಾನದ ಪ್ರದರ್ಶನ ಆಗುತ್ತದೆ. ಈ ವರ್ಷದ ರಾಷ್ಟ್ರೀಯ ತಂತ್ರಜ್ಞಾನ ದಿನದ ಘೋಷ ವಾಕ್ಯ: ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್