AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia G60 5G: ಮೊಟ್ಟ ಮೊದಲ ನೋಕಿಯಾ 5G ಫೋನ್ ಈಗ ಖರೀದಿಗೆ ಲಭ್ಯ: ಬೆಲೆ ಎಷ್ಟು?, ಏನು ಫೀಚರ್ಸ್?

Nokia 5G Smartphone: ಹೊಸ ಅವತಾರದೊಂದಿಗೆ ನೋಕಿಯಾ ಭಾರತದಲ್ಲಿ ಮತ್ತೆ ಧೂಳೆಬ್ಬಿಸುತ್ತಿದೆ. ನೋಕಿಯಾ ಕಂಪನಿ ಭಾರತದಲ್ಲಿ ತನ್ನ ಮೊಟ್ಟ ಮೊದಲ 5G ಫೋನ್‌ ಬಿಡುಗಡೆ ಮಾಡಿದೆ. ಮಧ್ಯಮ ಬೆಲೆ ಹೊಂದಿರುವ ಈ ಫೋನಿನ ಹೆಸರು ನೋಕಿಯಾ ಜಿ60 5ಜಿ (Nokia G60 5G).

Nokia G60 5G: ಮೊಟ್ಟ ಮೊದಲ ನೋಕಿಯಾ 5G ಫೋನ್ ಈಗ ಖರೀದಿಗೆ ಲಭ್ಯ: ಬೆಲೆ ಎಷ್ಟು?, ಏನು ಫೀಚರ್ಸ್?
Nokia G60 5G
TV9 Web
| Updated By: Vinay Bhat|

Updated on: Nov 09, 2022 | 6:12 AM

Share

ಭಾರತದಲ್ಲಿ 5ಜಿ ಯುಗ ಆರಂಭವಾಗಿದ್ದೇ ತಡ ಸ್ಮಾರ್ಟ್​ಫೋನ್ ಕಂಪನಿಗಳು ಒಂದರ ಹಿಂದೆ ಒಂದರಂತೆ ಆಕರ್ಷಕವಾದ 5ಜಿ (5G) ಫೋನ್​ಗಳನ್ನು ಬಿಡುಗಡೆ ಮಾಡುತ್ತಿವೆ. ಅದುಕೂಡ ಕಡಿಮೆ ಬೆಲೆಗೆ ಎಂಬುದು ವಿಶೇಷ. ಇದೀಗ ನೋಕಿಯಾ ಸರದಿ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳ ಹೆಸರಿಲ್ಲದಂತಾಗಿದೆ. ಚೀನೀ ಸ್ಮಾರ್ಟ್​ಫೋನ್ (Smartphone) ಬ್ರ್ಯಾಂಡ್​ಗಳ ಹೊಡೆತಕ್ಕೆ ಸಿಲುಕಿರುವ ನೋಕಿಯಾ ಭಾರತದಲ್ಲಿ ದೊಡ್ಟ ಮಟ್ಟದಲ್ಲಿ ಯಶಸ್ಸು ಸಾಧಿಸುತ್ತಿಲ್ಲ. ಆದರೆ, ಕಳೆದ ವಾರ ಹೊಸ ಅವತಾರದೊಂದಿಗೆ ನೋಕಿಯಾ ಭಾರತದಲ್ಲಿ ತನ್ನ ಮೊಟ್ಟ ಮೊದಲ 5G ಫೋನ್‌ ಬಿಡುಗಡೆ ಮಾಡಿತ್ತು. ಮಧ್ಯಮ ಬೆಲೆ ಹೊಂದಿರುವ ಈ ಫೋನಿನ ಹೆಸರು ನೋಕಿಯಾ ಜಿ60 5ಜಿ (Nokia G60 5G). ಇದೀಗ ಈ ಫೋನ್ ಖರೀದಿಗೆ ಸಿಗುತ್ತಿದೆ.

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಿ ಅನಾವರಣಗೊಂಡಿರುವ ಈ ಫೋನಿನ 6GB RAM, 128GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ನೋಕಿಯಾ ಭಾರತದ ಅಧಿಕೃತ ವೆಬ್​​ಸೈಟ್ ಮತ್ತು ಆಯ್ದ ರಿಟೇಲ್ ಸ್ಟೋರ್​ಗಳಲ್ಲಿ ಈ ಫೋನನ್ನು ಖರೀದಿಸಬಹುದು. ಇದರ ಜೊತೆಗೆ ಬಂಪರ್ ಆಫರ್ ಅನ್ನು ಘೋಷಣೆ ಮಾಡಿದ್ದು 3,599 ರೂ. ವಿನ ನೋಕಿಯಾ ಈಯರ್ ಬರ್ಡ್ಸ್ ಅನ್ನು ಉಚಿತವಾಗಿ ನಿಮ್ಮದಾಗಿಸಬಹುದು.

ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ನೋಕಿಯಾ G60 5G 1080*2400 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಹೊಂದಿದೆ. ಇದು 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಈ ಡಿಸ್ ಪ್ಲೇ ಕೂಡ ವಿಭಿನ್ನವಾಗಿದ್ದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಇದನ್ನೂ ಓದಿ
Image
Bengaluru Tech Summit 2022: ನ. 16ರಿಂದ 18ರವರೆಗೆ ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್-2022: ಪ್ರಧಾನಿ ಮೋದಿಯಿಂದ ಉದ್ಘಾಟನೆ
Image
YouTube: ಯೂಟ್ಯೂಬ್​ ಮೂಲಕ ಹಣ ಸಂಪಾದಿಸುವುದು ಹೇಗೆ?: ಇಲ್ಲಿದೆ ನೋಡಿ
Image
Twitter Blue Tick: ಟ್ವಿಟರ್ ಬ್ಲೂ ಟಿಕ್​ಗೆ ಶುಲ್ಕ; ತಿಂಗಳೊಳಗೆ ಭಾರತದಲ್ಲೂ ಜಾರಿ ಎಂದ ಮಸ್ಕ್
Image
Twitter: ಉದ್ಯೋಗ ಕಡಿತ ಆಯ್ತು, ಇದೀಗ ಕೆಲವರನ್ನು ಟ್ವಿಟರ್​ಗೆ ಮತ್ತೆ ಬನ್ನಿ ಎನ್ನುತ್ತಿರುವ ಎಲಾನ್ ಮಸ್ಕ್!

ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗದೊಂದಿಗೆ ಕಾರ್ಯನಿರ್ವಹಿಸಲಿದ್ದು ಆಂಡ್ರಾಯ್ಡ್‌ 12 OS ಅಳವಡಿಸಲಾಗಿದೆ. ಇದು 3 ವರ್ಷಗಳ ಆಂಡ್ರಾಯ್ಡ್‌ ಒಎಸ್‌ ಅಪ್‌ಗ್ರೇಡ್‌ ಮತ್ತು ಮಾಸಿಕ ಸೆಕ್ಯುರ್‌ ಅಪ್ಡೇಟ್‌ ನೀಡಲಿದೆ. ಈ ಫೋನಿನ ಹಿಂಭಾಗ ಮತ್ತು ಮುಂಭಾಗದ ಡಿಸೈನ್ ಅತ್ಯುತ್ತಮವಾಗಿದ್ದು ಯುವಕ-ಯುವತಿಯರನ್ನು ಆಕರ್ಷಿಸುವ ರೀತಿಯಲ್ಲಿದೆ.

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡರೆ, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಹೊಂದಿದೆ. ಇವುಗಳ ಜೊತೆಗೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.

ದೊಡ್ಡ ಮಟ್ಟದ ಬ್ಯಾಟರಿ ನೀಡಲಾಗಿಲ್ಲ. ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದಕ್ಕೆ ತಕ್ಕಂತೆ 20W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಫೋನಿನ ಬೆಲೆಗೆ ಹೋಲಿಸಿದರೆ ಇದು ಕಡಿಮೆ ವೇಗದ ಚಾರ್ಜಿಂಗ್ ಸಪೋರ್ಟ್ ಆಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಐಫೋನ್ ನೂತನ ಸರಣಿಯಲ್ಲಿ ಇರುವಂತೆ eSIM ಆಯ್ಕೆ ಇರಲಿದೆ. ಉಳಿದಂತೆ ವೈಫೈ 6, ಬ್ಲೂಟೂತ್ 5.1, GPS, USB ಟೈಪ್-ಸಿ ಪೋರ್ಟ್ ಬೆಂಬಲ ಪಡೆದುಕೊಂಡಿದೆ.

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್