Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ

ಸದ್ದಿಲ್ಲದೆ ನೋಕಿಯಾ ಸಿ02 (Nokia C02) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಫೋನಾಗಿದ್ದು ಫೀಚರ್​ಗೆ ತಕ್ಕಂತೆ ಬೆಲೆ ನಿಗದಿ ಪಡಿಸಲಾಗಿದೆ.

Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
Nokia C02
Follow us
Vinay Bhat
|

Updated on:Feb 25, 2023 | 10:23 AM

ಪ್ರಸಿದ್ಧ ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳು ಇಂದು ಮಾರುಕಟ್ಟೆಯಲ್ಲಿ ದೊಡ್ಟ ಮಟ್ಟದ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಇತರೆ ಬ್ರ್ಯಾಂಡ್​ಗಳ ಹೊಡೆತಕ್ಕೆ ಸಿಲುಕಿ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ಕಂಪನಿ ಆಗಾಗ ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸದ್ದಿಲ್ಲದೆ ನೋಕಿಯಾ ಸಿ02 (Nokia C02) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಫೋನಾಗಿದ್ದು ಫೀಚರ್​ಗೆ ತಕ್ಕಂತೆ ಬೆಲೆ ನಿಗದಿ ಪಡಿಸಲಾಗಿದೆ.

ಏನಿದೆ ಫೀಚರ್ಸ್:

ನೋಕಿಯಾ C02 ಸ್ಮಾರ್ಟ್‌ಫೋನ್‌ FWVGA+ ರೆಸಲ್ಯೂಶನ್‌ ಸಾಮರ್ಥ್ಯದ 5.45 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 18:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ನೀಡಲಾಗಿದೆ. ಕ್ವಾಡ್‌ ಕೋರ್‌ SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಆದರೆ, ಇದು ಯಾವುದು ಎಂಬುದು ಬಹಿರಂಗವಾಗಿಲ್ಲ. ಆಂಡ್ರಾಯ್ಡ್‌ 12 (Go ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತಿದ್ದು 2GB RAM +32GB ಇಂಟರ್‌ ಸ್ಟೋರೇಜ್‌ ಆಯ್ಕಯನ್ನು ಒಳಗೊಂಡಿದೆ. ಮೈಕ್ರೊ SD ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದದು ಕಂಪನಿ ಹೇಳಿದೆ.

ಇದನ್ನೂ ಓದಿ
Image
Tech Tips: ಸ್ಮಾರ್ಟ್​ಫೋನ್ ಡಿಸ್ ಪ್ಲೇ ಮೇಲೆ ಸ್ಕ್ರಾಚ್​ಗಳಿದ್ದರೆ ಸುಲಭವಾಗಿ ಹೇಗೆ ತೆಗೆಯುವುದು?
Image
Tech Tips: ಮೊಬೈಲ್ ಚಾರ್ಜರ್​ಗಳ ಬಣ್ಣ ಕಪ್ಪು ಮತ್ತು ಬಿಳಿ ಮಾತ್ರ ಇರುತ್ತದೆ ಯಾಕೆ ಗೊತ್ತೇ?; ಇಲ್ಲಿದೆ ಸೀಕ್ರೆಟ್
Image
Smule App: ಸ್ಮ್ಯೂಲ್ ಕರೋಕೆ ಆ್ಯಪ್​ಗೆ ಹವ್ಯಾಸಿ ಹಾಡುಗಾರರು ಫಿದಾ: ಇದನ್ನು ಹೇಗೆ ಬಳಸುವುದು?
Image
UPI LITE: ಪೇಟಿಎಂ ಆ್ಯಪ್ ಬಳಸುವವರಿಗೆ ಬಂಪರ್ ಸುದ್ದಿ: ಬಿಡುಗಡೆ ಆಗಿದೆ ಹೊಸ ಆ್ಯಪ್

ಈ ಸ್ಮಾರ್ಟ್‌ಫೋನ್​ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಬ್ಯೂಟಿಫಿಕೇಶನ್ ಸಪೋರ್ಟ್ ಮತ್ತು ಎಲ್‌ಇಡಿ ಫ್ಲ್ಯಾಷ್ ಸೇರಿದಂತೆ ಕೆಲ ವಿಶೇಷ ಫೀಚರ್​ಗಳಿವೆ.

WhatsApp Edit Message: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಹೇಗೆ ಗೊತ್ತೇ?

3,000mAh ಸಾಮರ್ಥ್ಯದ ರಿಮೂವಬಲ್‌ ಬ್ಯಾಟರಿ ನೀಡಲಾಗಿದ್ದು, ಇದಕ್ಕೆ ತಕ್ಕಂತೆ 5W ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಇದು 5Q ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಮೈಕ್ರೋ-ಯುಎಸ್‌ಬಿ ಪೋರ್ಟ್ ಮತ್ತು 3.5 ಎಂಎಂ ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚಿನ ಆಯ್ಕೆ ನೀಡಲಾಗಿದೆ. ಇದು ನೀವು ಮಾಸ್ಕ್‌ ಹಾಕಿದ್ದರೂ ಫೇಸ್ ಅನ್‌ಲಾಕಿಂಗ್ ಅನ್ನು ಬೆಂಬಲಿಸುತ್ತದಂತೆ. ನೋಕಿಯಾ C02 ಸ್ಮಾರ್ಟ್‌ಫೋನಿನ ಬೆಲೆ ಮತ್ತು ಲಭ್ಯತೆ ಕಂಪನಿ ಬಹಿರಂಗ ಪಡಿಸಿಲ್ಲ.

ನೋಕಿಯಾ ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಎಕ್ಸ್ ಸರಣಿಯಲ್ಲಿ ಹೊಸದಾಗಿ ನೋಕಿಯಾ X30 5G ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಿತ್ತು. ಇದು 6.43 ಇಂಚಿನ ಫುಲ್​ ಎಚ್​ಡಿ+ ಡಿಸ್​ಪ್ಲೇ ಹೊಂದಿದ್ದು, ಕ್ವಾಲ್ಕಂ ಸ್ನ್ಯಾಪ್​​ಡ್ರ್ಯಾಗನ್ 695 5G ಪ್ರೊಸೆಸರ್​ನಿಂದ ಆವೃತ್ತವಾಗಿದೆ. ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮರಾ ಜತೆಗೆ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸರ್, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದರ ವಿಶೇಷತೆ. 8 GB RAM ಆಯ್ಕೆ ಇದೆ. 4,200mAh ಬ್ಯಾಟರಿ ಜತೆಗೆ 33W ಫಾಸ್ಟ್ ಚಾರ್ಜಿಂಗ್ ಬೆಂಬಲವಿದೆ ಎಂದು ಕಂಪನಿ ಹೇಳಿದೆ. ನೋಕಿಯಾ X30 5G ಸ್ಮಾರ್ಟ್​ಫೋನ್​ಗೆ ಮೂರು ವರ್ಷಗಳವರೆಗೆ ಆ್ಯಂಡ್ರಾಯ್ಡ್ ಮತ್ತು ಭದ್ರತಾ ಅಪ್​ಡೇಟ್ ಲಭ್ಯವಾಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 am, Sat, 25 February 23

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ