AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒನ್​ಪ್ಲಸ್​ನ ಬಹುನಿರೀಕ್ಷಿತ ಏಸ್ 2 ಪ್ರೊ ​ಫೋನ್ ಬಿಡುಗಡೆ: ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ

OnePlus Ace 2 Pro Launched: ಒನ್​ಪ್ಲಸ್ ಏಸ್ 2 ಪ್ರೊ ಸ್ಮಾರ್ಟ್​ಫೋನ್ ಸದ್ಯಕ್ಕೆ ಚೀನಾದಲ್ಲಿ ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಕ್ವಾಲ್‌ಕಾಮ್‌ನ ಟಾಪ್-ಆಫ್-ದಿ-ಲೈನ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಅಳವಡಿಸಲಾಗಿದೆ. ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ.

ಒನ್​ಪ್ಲಸ್​ನ ಬಹುನಿರೀಕ್ಷಿತ ಏಸ್ 2 ಪ್ರೊ ​ಫೋನ್ ಬಿಡುಗಡೆ: ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ
OnePlus Ace 2 Pro
Follow us
Vinay Bhat
|

Updated on: Aug 17, 2023 | 10:19 AM

ಒನ್​ಪ್ಲಸ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗೀಗ ತಿಂಗಳಿಗೆ ಒಂದರಿಂದ ಎರಡು ಮೊಬೈಲ್​ಗಳನ್ನು ಅನಾವರಣ ಮಾಡುತ್ತಿರುವ ಒನ್​ಪ್ಲಸ್ ಇದೀಗ ತನ್ನ ಹೊಸ ಏಸ್ 2 ಪ್ರೊ (OnePlus Ace 2 Pro) ಫೋನನ್ನು ರಿಲೀಸ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಕ್ವಾಲ್‌ಕಾಮ್‌ನ ಟಾಪ್-ಆಫ್-ದಿ-ಲೈನ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಅಳವಡಿಸಲಾಗಿದೆ. ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಒನ್​ಪ್ಲಸ್ ಏಸ್ 2 ಪ್ರೊ ಬೆಲೆ, ಲಭ್ಯತೆ:

ಒನ್​ಪ್ಲಸ್ ಏಸ್ 2 ಪ್ರೊ ಸ್ಮಾರ್ಟ್​ಫೋನ್ ಸದ್ಯಕ್ಕೆ ಚೀನಾದಲ್ಲಿ ಮೂರು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 12GB RAM ಮತ್ತು 256GB ಸಂಗ್ರಹಣೆಗೆ CNY 2,999, ಭಾರತದಲ್ಲಿ ಇದರ ಬೆಲೆ ಸುಮಾರು 34,600 ರೂ. ಅಂತೆಯೆ 16GB + 512GB ಮತ್ತು 24GB + 1TB RAMಗೆ ಕ್ರಮವಾಗಿ CNY 3,399 (ಸರಿಸುಮಾರು ರೂ. 39,200) ಮತ್ತು CNY 3,999 (ಸುಮಾರು ರೂ. 46,100) ಬೆಲೆ ನಿಗದಿ ಮಾಡಲಾಗಿದೆ. ಇದು ಔರಾ ಗ್ರೀನ್ ಮತ್ತು ಟೈಟಾನಿಯಂ ಆ್ಯಶ್ ಗ್ರೇ ಬಣ್ಣಗಳಲ್ಲಿ ಲಭ್ಯವಿದೆ. ಆಗಸ್ಟ್ 23 ರಿಂದ ಒನ್​ಪ್ಲಸ್​ನ ಆನ್‌ಲೈನ್ ಸ್ಟೋರ್ ಮೂಲಕ ಚೀನಾದಲ್ಲಿ ಖರೀದಿಸಬಹುದು.

Google Pixel 7 Pro: ಪ್ರೊ ಕ್ಯಾಮೆರಾ ರೇಂಜ್​ನ ಗೂಗಲ್‌ ಪಿಕ್ಸೆಲ್‌ ಸ್ಮಾರ್ಟ್​ಫೋನ್

ಇದನ್ನೂ ಓದಿ
Image
ನೀವು ಪವರ್ ಬ್ಯಾಂಕ್ ಮೂಲಕ ಮೊಬೈಲ್ ಚಾರ್ಜ್ ಮಾಡ್ತೀರಾ?: ಹಾಗಿದ್ರೆ ಒಮ್ಮೆ ಇಲ್ಲಿ ಗಮನಿಸಿ
Image
ಮಾರುಕಟ್ಟೆಗೆ ಎಂಟ್ರಿಕೊಟ್ಟ ರೆಡ್ಮಿ K60 ಆಲ್ಟ್ರಾ ಸ್ಮಾರ್ಟ್​ಫೋನ್: ಬೆಲೆ ಎಷ್ಟು?, ಏನಿದೆ ಫೀಚರ್ಸ್?
Image
ಶವೋಮಿಯ ಹೊಸ ಫೋಲ್ಡೆಬಲ್ ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಕೇಳಿ ದಂಗಾದ ಜನರು
Image
ಕೇವಲ 99 ರೂ. ರಿಚಾರ್ಜ್ ಮಾಡಿದ್ರೆ ಅನ್ಲಿಮಿಟೆಡ್ 5G ಡೇಟಾ: ಏರ್ಟೆಲ್ ಆಫರ್​ಗೆ ದಂಗಾದ ಜಿಯೋ

ಒನ್​ಪ್ಲಸ್ ಏಸ್ 2 ಪ್ರೊ ಫೀಚರ್ಸ್:

ಹೊಸ ಒನ್​ಪ್ಲಸ್ ಏಸ್ 2 ಪ್ರೊ ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 13 ನ ColorOS 13.1 ನಲ್ಲಿ ಕಾರ್ಯನಿರ್ವಹಿಸುತ್ತದೆ. 120Hz ರಿಫ್ರೆಶ್ ದರದೊಂದಿಗೆ 6.74-ಇಂಚಿನ ಪೂರ್ಣ-HD+ (1,240×2,772 ಪಿಕ್ಸೆಲ್‌ಗಳು) AMOLED ಡಿಸ್‌ಪ್ಲೇಯನ್ನು ಹೊಂದಿದೆ. ಮತ್ತು 450ppi ಪಿಕ್ಸೆಲ್ ಸಾಂದ್ರತೆ ಇದೆ. ಈ ಫೋನ್ ರೈನ್ ವಾಟರ್ ಟಚ್ ತಂತ್ರಜ್ಞಾನದ ಜೊತೆ ಇನ್-ಹೌಸ್ ಟಚ್ ಅಲ್ಗಾರಿದಮ್ ಮತ್ತು ಫುಲ್-ಲಿಂಕ್ ಟಚ್ ಆಪ್ಟಿಮೈಸೇಶನ್‌ಗಳ ಮೇಲೆ ಅವಲಂಬಿತವಾಗಿದೆ. ಈ ಫೋನಿನ ಮೇಲೆ ಮಳೆ ನೀರು ಬಿದ್ದಾಗಲೂ ಕೆಲಸ ಮಾಡಲು ಅನುಮತಿಸುತ್ತದೆ. ಇದು 4nm ಸ್ನಾಪ್‌ಡ್ರಾಗನ್ 8 Gen 2 SoC ಮೂಲಕ 24GB ವರೆಗಿನ LPDDR5X RAM ನೊಂದಿಗೆ ಜೋಡಿಸಲ್ಪಟ್ಟಿದೆ.

ಫೋಟೋಗಳು ಮತ್ತು ವಿಡಿಯೋಗಳಿಗಾಗಿ, ಈ ಫೋನ್ ಮೂರು ಹಿಂಬದಿಯ ಕ್ಯಾಮೆರಾಗಳನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾ ಸೋನಿ IMX890 ಸಂವೇದಕ ಮತ್ತು f/1.8 ದ್ಯುತಿರಂಧ್ರದೊಂದಿಗೆ 50-ಮೆಗಾಪಿಕ್ಸೆಲ್​ನದ್ದಾಗಿದೆ. f/2.2 ಅಪರ್ಚರ್ ಹೊಂದಿರುವ IMX355 ಸಂವೇದಕದೊಂದಿಗೆ 8-ಮೆಗಾಪಿಕ್ಸೆಲ್ ಕ್ಯಾಮೆರಾ, ಮತ್ತು 2 f/2.4 ದ್ಯುತಿರಂಧ್ರದೊಂದಿಗೆ -ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅಳವಡಿಸಲಾಗಿದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ ಮುಂಭಾಗ 16-ಮೆಗಾಪಿಕ್ಸೆಲ್​ನ ಸ್ಯಾಮ್​ಸಂಗ್ S5K3P9 ಸಂವೇದಕದೊಂದಿಗೆ f/2.4 ದ್ಯುತಿರಂಧ್ರದ ಕ್ಯಾಮೆರಾವನ್ನು ನೀಡಲಾಗಿದೆ.

ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, ಬ್ಲೂಟೂತ್ 5.3, ಡ್ಯುಯಲ್ ಬ್ಯಾಂಡ್ GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಂಡರ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದು 150W SuperVOOC ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,000mAh ಬ್ಯಾಟರಿಯಿಂದ ಆವೃತ್ತವಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್