OnePlus Nord 2T: ವಿದೇಶದಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್​​ಫೋನ್ ಜುಲೈ 1ಕ್ಕೆ ಭಾರತದಲ್ಲಿ ರಿಲೀಸ್

ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಅಥವಾ 5000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಈ ಫೋನ್ 65W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

OnePlus Nord 2T: ವಿದೇಶದಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್​​ಫೋನ್ ಜುಲೈ 1ಕ್ಕೆ ಭಾರತದಲ್ಲಿ ರಿಲೀಸ್
OnePlus Nord 2T
Follow us
| Edited By: Vinay Bhat

Updated on: Jun 23, 2022 | 12:33 PM

ಕಳೆದ ಎರಡು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಭರ್ಜರಿ ಸುದ್ದಿಯಲ್ಲಿರುವ ಪ್ರಸಿದ್ಧ ಒನ್​ಪ್ಲಸ್ (OnePlus) ಕಂಪನಿ ಉತ್ತುಂಗದತ್ತ ಸಾಗುತ್ತಿದೆ. ಭಿನ್ನ ಮಾದರಿಯ ಮೊಬೈಲ್​ಗಳನ್ನು ಪರಿಚಯಿಸಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಒನ್​ಪ್ಲಸ್ ಮತ್ತೊಂದು ಹೊಸ ಫೋನನ್ನು ಭಾರತೀಯ ಮಾರುಕಟ್ಟೆಯಲ್ಲಿ ರಿಲೀಸ್ ಮಾಡಲು ಮುಂದಾಗಿದೆ. ಅದುವೇ ಒನ್‌ಪ್ಲಸ್‌ ನಾರ್ಡ್ 2ಟಿ 5ಜಿ (OnePlus Nord 2T 5G) ಸ್ಮಾರ್ಟ್‌ಫೋನ್‌. ಈ ಫೋನ್ ತಿಂಗಳ ಹಿಂದೆಯಷ್ಟೆ ವಿದೇಶದಲ್ಲಿ ರಿಲೀಸ್ ಆಗಿತ್ತು. ಇದೀಗ ಜುಲೈ ರಂದು ಈ ಫೋನ್ ದೇಶಕ್ಕೆ ಕಾಲಿಡಲಿದೆ. ಬಂಪರ್ ಫೀಚರ್​ಗಳಿಂದ ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿರುವ ಈ ಫೋನ್​ನಲ್ಲಿ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಉಳಿದಂತೆ ಇದರ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ HD+ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್​ನಿಂದ ಕೂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 12.1 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ.

TCS: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಸಿಗಲಿದೆ ಚಿಪ್‌ ಆಧಾರಿತ ಇ- ಪಾಸ್​ಪೋರ್ಟ್

ಇದನ್ನೂ ಓದಿ
Image
Electric Bikes: 50,000 ಕ್ಕಿಂತ ಕಡಿಮೆ ಬೆಲೆಯ ಇಲೆಕ್ಟ್ರಿಕ್​​ ಬೈಕ್​ ಇಲ್ಲಿವೆ
Image
WhatsApp: ವಾಟ್ಸ್​​ಆ್ಯಪ್​​ನಲ್ಲಿರುವ ಮಲ್ಟಿಡಿವೈಸ್ ಆಯ್ಕೆಯನ್ನು ಅನ್​ಲಿಂಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ
Image
OnePlus Nord 2T: ಜೂ. 27ರಂದು ಭಾರತಕ್ಕೆ ಅಪ್ಪಳಿಸಲಿದೆ ಒನ್‌ಪ್ಲಸ್‌ ನಾರ್ಡ್ 2T: ಇದರ ಫೀಚರ್ಸ್​ ಕೇಳಿದ್ರೆ ದಂದಾಗ್ತೀರ
Image
OPPO A57: ಬಜೆಟ್ ಫೋನ್ ಅಂದ್ರೆ ಇದು: ಭಾರತದಲ್ಲಿ ಒಪ್ಪೋ A57 (2022) ಸ್ಮಾರ್ಟ್‌ಫೋನ್‌ ಬಿಡುಗಡೆ

ಆಕರ್ಷಕವಾದ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ವಿಶೇಷವಾಗಿ ಈ ಫೋನ್​ನಲ್ಲಿ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಅಥವಾ 5000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಈ ಫೋನ್ 65W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

ಒನ್‌ಪ್ಲಸ್‌ ನಾರ್ಡ್ 2T 5G ಒಟ್ಟು ಎರಡು ಮಾದರಿಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಇದರ ನಿಖರ ಬೆಲೆ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ 28,999 ರೂ. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ 31,999 ರೂ. ಇರಬಹುದು. ಈ ಫೊನ್ ಗ್ರೇ ಶ್ಯಾಡೋ ಮತ್ತು ಜೇಡ್ ಫಾಗ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಸದ್ಯಕ್ಕೆ ಯುರೋಪ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿರುವ ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್​​ಫೋನ್ ಕೆಲವೇ ದಿನಗಳಲ್ಲಿ ಭಾರತಕ್ಕೆ ಕಾಲಿಡಲಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ