AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI LITE: ಪೇಟಿಎಂ ಆ್ಯಪ್ ಬಳಸುವವರಿಗೆ ಬಂಪರ್ ಸುದ್ದಿ: ಬಿಡುಗಡೆ ಆಗಿದೆ ಹೊಸ ಆ್ಯಪ್

Paytm: ನೀವು ಪೇಟಿಎಂ ಆ್ಯಪ್ ಬಳಸುತ್ತಿದ್ದರೆ ಇನ್ಮುಂದೆ ನೀವು ಯುಪಿಐ ಲೈಟ್ (UPI LITE) ಸೇವೆಗಳನ್ನು ಸಹ ಬಳಸಲು ಸಾಧ್ಯವಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಪೇಟಿಎಂ ಸಹಯೋಗದಲ್ಲಿ ಪೇಟಿಎಂ ಅಪ್ಲಿಕೇಶನ್‌ನಲ್ಲಿ ನೂತನವಾಗಿ ಯುಪಿಐ ಲೈಟ್ ಸೇವೆಗಳನ್ನು ಆರಂಭಿಸಲಾಗಿದೆ.

UPI LITE: ಪೇಟಿಎಂ ಆ್ಯಪ್ ಬಳಸುವವರಿಗೆ ಬಂಪರ್ ಸುದ್ದಿ: ಬಿಡುಗಡೆ ಆಗಿದೆ ಹೊಸ ಆ್ಯಪ್
UPI LITE
Vinay Bhat
|

Updated on:Feb 24, 2023 | 11:35 AM

Share

ಇಂದಿನ ಸ್ಮಾರ್ಟ್​​ ಯುಗದಲ್ಲಿ ಹೆಚ್ಚಿನ ಜನರು ಸ್ಮಾರ್ಟ್​​ಫೋನ್ (Smartphon) ಮೂಲಕವೇ ಅರ್ಧ ಕೆಲಸ ಮುಗಿಸಿಬಿಡುತ್ತಾರೆ. ಅದರಲ್ಲೂ ಆನ್​ಲೈನ್ ಪೇಮೆಂಟ್ ವಿಚಾರಕ್ಕೆ ಬರುವುದಾದರೆ ಕ್ಯಾಶ್ ಕೊಟ್ಟು ಏನಾದರು ಖರೀದಿ ಮಾಡುವವರ ಸಂಖ್ಯೆ ತೀರಾ ಕಡಿಮೆ. ಬಹುತೇಕರು ಸ್ಮಾರ್ಟ್​​ಫೋನ್​ನಲ್ಲಿ ಫೋನ್ ಪೇ (PhonePe), ಗೂಗಲ್ ಪೇ, ಪೇಟಿಎಂ ನಂತರ ಯುಪಿಐ ಆ್ಯಪ್ ಇನ್​ಸ್ಟಾಲ್ ಮಾಡಿ ಅದರ ಮೂಲಕ ಹಣವನ್ನು ವರ್ಗಾವಣೆ ಮಾಡುತ್ತಾರೆ. ಇದರಲ್ಲಿ ನೀವು ಪೇಟಿಎಂ ಆ್ಯಪ್ ಬಳಸುತ್ತಿದ್ದರೆ ಇನ್ಮುಂದೆ ನೀವು ಯುಪಿಐ ಲೈಟ್ (UPI LITE) ಸೇವೆಗಳನ್ನು ಸಹ ಬಳಸಲು ಸಾಧ್ಯವಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಪೇಟಿಎಂ ಸಹಯೋಗದಲ್ಲಿ ಪೇಟಿಎಂ ಅಪ್ಲಿಕೇಶನ್‌ನಲ್ಲಿ ನೂತನವಾಗಿ ಯುಪಿಐ ಲೈಟ್ ಸೇವೆಗಳನ್ನು ಆರಂಭಿಸಲಾಗಿದೆ.

ಇದರ ಮೂಲಕ ಪೇಟಿಎಂ ಗ್ರಾಹಕರು ಸಣ್ಣ ಪಾವತಿಗಳು, ಇಂಟರ್‌ನೆಟ್ ಇಲ್ಲದೆ ಹಣ ಪಾವತಿ ಸೇರಿದಂತೆ ಹಲವಾರು ಹೊಸ ವೈಶಿಷ್ಟ್ಯಗಳನ್ನು ಪಡೆಯಬಹುದು. ಇದರೊಂದಿಗೆ ಈಗ ಪೇಟಿಎಮ್‌ ಯುಪಿಐ ಲೈಟ್‌ ಬಳಕೆದಾರರಿಗೆ ಪಿನ್‌ ನಮೂದಿಸಿ ಎಂದು ಕೇಳದೆ ಹಣ ಪಾವತಿಗೆ ಅನುಕೂಲ ಮಾಡಿಕೊಡುತ್ತಿದೆ. ಯುಪಿಐ ಲೈಟ್ ಅನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ವಿನ್ಯಾಸಗೊಳಿಸಿದ್ದು, ಸೆಪ್ಟೆಂಬರ್ 2022 ರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಲಾಂಚ್‌ ಮಾಡಲಾಗಿತ್ತು. ಅದರಂತೆ ಬ್ಯಾಂಕ್ ವಹಿವಾಟುಗಳ ಸಂಖ್ಯೆಯ ಬಗ್ಗೆ ಚಿಂತಿಸದೆ ಸಣ್ಣ ಮೌಲ್ಯದ ವಹಿವಾಟುಗಳನ್ನು ಇದು ಅನುಮತಿಸಲಿದ್ದು, ಈ ಫೀಚರ್ಸ್‌ ದೇಶಾದ್ಯಂತ ಡಿಜಿಟಲ್ ಪಾವತಿಗಳ ಇನ್ನಷ್ಟು ಬಳಕೆಗೆ ಅನುವು ಮಾಡಿಕೊಡಲಿದೆ.

IPL 2023: 4K ರೆಸಲ್ಯೂಶನ್​ನಲ್ಲಿ ಐಪಿಎಲ್ 2023 ವೀಕ್ಷಿಸಿ: ಜಿಯೋ ಬಳಕೆದಾರರಿಗೆ ಬಂಪರ್ ಸುದ್ದಿ

ಇದನ್ನೂ ಓದಿ
Image
ಹೊಸ ಸ್ಮಾರ್ಟ್​ಫೋನ್ ಖರೀದಿಸುವಾಗ ಎಲ್ಲರಂತೆ ನೀವು ಕೂಡ ಈ ತಪ್ಪು ಮಾಡಬೇಡಿ
Image
ವಾಟ್ಸ್​ಆ್ಯಪ್​ನಲ್ಲಿ ಕಳಿಸಿದ ಮೆಸೇಜ್ ಎಡಿಟ್ ಮಾಡಬಹುದು: ಹೇಗೆ ಗೊತ್ತೆ?
Image
Mobile Lost: ಮೊಬೈಲ್ ಕಳೆದುಹೋದರೆ ಸುಲಭದಲ್ಲಿ ನೀವೇ ಹುಡುಕುವುದು ಹೇಗೆ?
Image
Infinix Smart 7: 6000mAh ಬ್ಯಾಟರಿ: ಭಾರತದಲ್ಲಿ ಕೇವಲ 7,299 ರೂ. ಗೆ ರಿಲೀಸ್ ಆಗಿದೆ ಹೊಸ ಫೋನ್: ಯಾವುದು?

ಪಿನ್‌ ನಮೂದಿಸಬೇಕಾದ ಅವಶ್ಯಕತೆಯಿಲ್ಲ:

ವಿಶೇಷ ಎಂದರೆ ಇದರಲ್ಲಿ ನೀವು ಹಣ ಪಾವತಿ ಮಾಡುವಾಗ ಯುಪಿಐ ಪಿನ್‌ ನಮೂದಿಸಬೇಕಾದ ಅವಶ್ಯಕತೆಯಿಲ್ಲ, ಏಕೆಂದರೆ, ಇದು ನಿಮ್ಮ ಬ್ಯಾಂಕ್ ಖಾತೆಯನ್ನು ನೇರವಾಗಿ ಪ್ರವೇಶಿಸುವುದಿಲ್ಲ. ಬದಲಾಗಿ ನಿಮ್ಮ ಹಣವನ್ನು ವಾಲೆಟ್‌ನಲ್ಲಿ ಇಟ್ಟುಕೊಂಡು, ಹಣವನ್ನು ಕಳುಹಿಸುತ್ತದೆ ಅಥವಾ ಸ್ವೀಕರಿಸುತ್ತದೆ. ಆಂದರೆ, ಇದಕ್ಕಾಗಿ ನೀವು ಮೊದಲೇ ಹಣವನ್ನು ಸೇರಿಸಬೇಕು. ಈ ಫೀಚರ್ಸ್‌ ಮೂಲಕ ಬಳಕೆದಾರರು ಒಂದು ದಿನದಲ್ಲಿ 200 ರೂ. ಗಳನ್ನು ಪಾವತಿ ಮಾಡಬಹುದಾಗಿದೆ. ಪಾವತಿ ಪ್ರಕ್ರಿಯೆಯು ತ್ವರಿತ ಮತ್ತು ತಡೆರಹಿತ ವಹಿವಾಟಾಗಿದ್ದು, ಇದರೊಂದಿಗೆ ಬಳಕೆದಾರರು ತಮ್ಮ ಈ ಲೈಟ್ ವ್ಯಾಲೆಟ್‌ಗೆ ದಿನಕ್ಕೆ ಎರಡು ಬಾರಿ 2,000 ರೂ. ಗಳನ್ನು ಆಡ್‌ ಮಾಡಬಹುದಾಗಿದ್ದು, ಈ ಮೂಲಕ ದಿನವೂ 4,000 ರೂ. ಗಳ ವರೆಗೆ ಉಪಯೋಗಿಸಬಹುದು.

ಇದು ಥೇಟ್ ಯುಪಿಐ ಮಾದರಿಯಲ್ಲಿಯೇ ಕಾರ್ಯನಿರ್ವಹಿಸುತ್ತದೆ. ಆದರೆ, ಇದಕ್ಕಿಂತಲೂ ಸರಳವಾಗಿ ಸೇವೆಗಳನ್ನು ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್‌ ಪರಿಚಯಿಸಿರುವ ಹೊಸ ಪೇಮೆಂಟ್ ತಂತ್ರಜ್ಞಾನ ಇದಾಗಿದೆ. ಮುಖ್ಯವಾಗಿ ಇಂಟರ್‌ನೆಟ್‌ ಇಲ್ಲದಿದ್ದರೂ ಕೂಡ ವೇಗವಾಗಿ ಮತ್ತು ಸರಳವಾಗಿ ಹಣ ಪಾವತಿ ಮಾಡಬಹುದು ಎಂಬುದು ಪ್ಲಸ್ ಪಾಯಿಂಟ್. ಆನ್-ಡಿವೈಸ್ ವ್ಯಾಲೆಟ್ ಆಗಿರುವ ಯುಪಿಐ ಲೈಟ್​ನಲ್ಲಿ ಬಳಕೆದಾರರು ಆನ್‌ಲೈನ್‌ನಲ್ಲಿರುವಾಗ ವಾಲೆಟ್‌ಗೆ ಹಣವನ್ನು ಸೇರಿಸಬೇಕಾಗುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:35 am, Fri, 24 February 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ