AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾಪ್‌ಡ್ರಾಗನ್ 8 Gen 3, 50MP: ಭಾರತಕ್ಕೆ ಬಂತು ಅತ್ಯಂತ ಬಲಿಷ್ಠ ಸ್ಮಾರ್ಟ್​ಫೋನ್ ಐಕ್ಯೂ 12

iQoo 12 launched in India: ಭಾರತದಲ್ಲಿ ಐಕ್ಯೂ 12 ಬೆಲೆ 12GB + 256GB RAM ಸ್ಟೋರೇಜ್ ಕಾನ್ಫಿಗರೇಶನ್‌ಗೆ 52,999 ಇದೆ. ಕೊಂಚ ಬೆಲೆ ದುಬಾರಿ ಆಗಿದ್ದರೂ ಈ ಫೋನ್ ಅದ್ಭುತವಾಗಿದೆ. ಡಿಸೆಂಬರ್ 14 ರಿಂದ ಈ ಫೋನ್ ಅಮೆಜಾನ್ ಇಂಡಿಯಾದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಐಕ್ಯೂ 12 ಸ್ಮಾರ್ಟ್​ಫೋನ್​ನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಸ್ನಾಪ್‌ಡ್ರಾಗನ್ 8 Gen 3, 50MP: ಭಾರತಕ್ಕೆ ಬಂತು ಅತ್ಯಂತ ಬಲಿಷ್ಠ ಸ್ಮಾರ್ಟ್​ಫೋನ್ ಐಕ್ಯೂ 12
iQoo 12
Follow us
Vinay Bhat
|

Updated on: Dec 13, 2023 | 12:29 PM

ಕ್ವಾಲ್‌ಕಾಮ್‌ನ ಇತ್ತೀಚಿನ ಅತ್ಯಂತ ಬಲಿಷ್ಠ ಸ್ನಾಪ್‌ಡ್ರಾಗನ್ 8 ಜನ್ 3 ಪ್ರೊಸೆಸರ್ ಹೊಂದಿರುವ ಭಾರತದಲ್ಲಿನ ಮೊದಲ ಸ್ಮಾರ್ಟ್‌ಫೋನ್ ಆಗಿ ಐಕ್ಯೂ 12 (iQoo 12) ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹ್ಯಾಂಡ್‌ಸೆಟ್ 144Hz ರಿಫ್ರೆಶ್ ದರದೊಂದಿಗೆ 6.78-ಇಂಚಿನ LTPO AMOLED ಡಿಸ್ ಪ್ಲೇಯನ್ನು ಹೊಂದಿದೆ. ಅತ್ಯುತ್ತಮ ಕ್ಯಾಮೆರಾ, 120W ಫ್ಲ್ಯಾಶ್‌ಚಾರ್ಜ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಕೂಡ ಇದೆ. ಕೊಂಚ ಬೆಲೆ ದುಬಾರಿ ಆಗಿದ್ದರೂ ಈ ಫೋನ್ ಅದ್ಭುತವಾಗಿದೆ. ಐಕ್ಯೂ 12 ಸ್ಮಾರ್ಟ್​ಫೋನ್​ನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಐಕ್ಯೂ 12ಬೆಲೆ, ಲಭ್ಯತೆ:

ಭಾರತದಲ್ಲಿ ಐಕ್ಯೂ 12 ಬೆಲೆ 12GB + 256GB RAM ಸ್ಟೋರೇಜ್ ಕಾನ್ಫಿಗರೇಶನ್‌ಗೆ 52,999 ಇದೆ. ಅಂತೆಯೆ 16GB + 512GB ರೂಪಾಂತರದ ಬೆಲೆ ರೂ. 57,999. ಡಿಸೆಂಬರ್ 14 ರಿಂದ ಈ ಫೋನ್ ಅಮೆಜಾನ್ ಇಂಡಿಯಾದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಹ್ಯಾಂಡ್‌ಸೆಟ್‌ನ ಆಲ್ಫಾ ರೂಪಾಂತರವು AG ಗ್ಲಾಸ್‌ನಿಂದ ಮಾಡಲಾದ ಹಿಂಭಾಗದ ಫಲಕವನ್ನು ಹೊಂದಿದೆ, ಆದರೆ ಲೆಜೆಂಡ್ ಮಾದರಿಯು ಹಿಂಭಾಗದಲ್ಲಿ ಬಿಳಿ ಬಣ್ಣದ ಎನಾಮೆಲ್ ಗಾಜಿನಿಂದ ಕೂಡಿದೆ.

ಐಕ್ಯೂ 12 ಫೀಚರ್ಸ್:

ಹೊಸ ಐಕ್ಯೂ 12 ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 14-ಆಧಾರಿತ Funtouch OS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಹ್ಯಾಂಡ್‌ಸೆಟ್ 6.78-ಇಂಚಿನ ಕ್ವಾಡ್-HD (1,260×2,800 ಪಿಕ್ಸೆಲ್‌ಗಳು) LTPO AMOLED ಡಿಸ್ ಪ್ಲೇ ಜೊತೆಗೆ 144Hz ರಿಫ್ರೆಶ್ ದರ ಹೊಂದಿದೆ. ಈ ಫೋನ್ ಕ್ವಾಲ್ಕಂನ ಇತ್ತೀಚಿನ ಸ್ನಾಪ್‌ಡ್ರಾಗನ್ 8 Gen 3 ಚಿಪ್ ಹೊಂದಿದೆ. 16GB ವರೆಗಿನ LPDDR5X RAM ಮತ್ತು 512GB ವರೆಗಿನ UFS 4.0 ಸಂಗ್ರಹಣೆಯನ್ನು ಹೊಂದಿದೆ. ಇದು ನಾಲ್ಕು ಕೂಲಿಂಗ್ ಸಿಸ್ಟಂ ಅನ್ನು ಸಹ ಹೊಂದಿದೆ.

ಇದನ್ನೂ ಓದಿ
Image
ಟ್ರೆಂಡ್​ ಆಗುತ್ತಿದೆ ಎಲೆಕ್ಟ್ರಿಕ್ ಜಾಕೆಟ್​​ಗಳು​​; ಬೆಲೆ ಎಷ್ಟು ಗೊತ್ತಾ?
Image
ರೆಡ್ಮಿ 13C ಸ್ಮಾರ್ಟ್​ಫೋನ್ ಮಾರಾಟ ಭಾರತದಲ್ಲಿ ಆರಂಭ
Image
ಭಾರತದಲ್ಲಿಂದು ಬಹುನಿರೀಕ್ಷಿತ ಐಕ್ಯೂ 12 5G ​ಫೋನ್ ಬಿಡುಗಡೆ: ಬೆಲೆ?
Image
120W ಫಾಸ್ಟ್ ಚಾರ್ಜರ್, ಸೋನಿ ಕ್ಯಾಮೆರಾ: ವಿವೋ X100 ಸರಣಿ ಬಿಡುಗಡೆಗೆ ದಿನಾ

ವರ್ಷಾಂತ್ಯದ ಸ್ಪೆಷಲ್: ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?

ಐಕ್ಯೂ 12 ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್‌ನೊಂದಿಗೆ ನೀಡಲಾಗಿದೆ. ಇದು 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು 1/1.3-ಇಂಚಿನ ಓಮ್ನಿವಿಷನ್ OV50H ಸಂವೇದಕದೊಂದಿಗೆ f/1.7 ದ್ಯುತಿರಂಧ್ರದಿಂದ ಕೂಡಿದೆ. 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು f/2.0 ಅಪರ್ಚರ್ ಹೊಂದಿರುವ 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ; ಮತ್ತು 3x ಆಪ್ಟಿಕಲ್ ಜೂಮ್, 100x ಹೈಬ್ರಿಡ್ ಜೂಮ್ ಮತ್ತು f/2.6 ಅಪರ್ಚರ್ ಹೊಂದಿರುವ 64-ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ನೀಡಲಾಗಿದೆ.

ಐಕ್ಯೂ ಪ್ರಕಾರ, ಪ್ರಾಥಮಿಕ ಕ್ಯಾಮೆರಾ ಮತ್ತು ಟೆಲಿಫೋಟೋ ಕ್ಯಾಮೆರಾ ಕ್ರಮವಾಗಿ AI-ಸಹಾಯದ ಆಸ್ಟ್ರೋಫೋಟೋಗ್ರಫಿ ಮತ್ತು ‘ಸೂಪರ್ ಮೂನ್’ ಮೋಡ್‌ಗಳನ್ನು ಬೆಂಬಲಿಸುತ್ತದೆ. ಟೆಲಿಫೋಟೋ ಕ್ಯಾಮೆರಾ ಮ್ಯಾಕ್ರೋ ಫೋಟೋಗ್ರಫಿಯನ್ನು ಸಹ ಬೆಂಬಲಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ, ವೈಡ್-ಆಂಗಲ್ ಲೆನ್ಸ್ ಮತ್ತು f/2.5 ಅಪರ್ಚರ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಈ ಹ್ಯಾಂಡ್‌ಸೆಟ್ 120W ಫ್ಲ್ಯಾಶ್‌ಚಾರ್ಜ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ 5G, 4G LTE, Wi-Fi 7, ಬ್ಲೂಟೂತ್ 5.4, GPS, NFC, ಇನ್ಫ್ರಾರೆಡ್ ಬ್ಲಾಸ್ಟರ್ ಮತ್ತು USB 2.0 ಟೈಪ್-ಸಿ ಪೋರ್ಟ್ ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಂಡರ್-ಡಿಸ್ ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ