AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha QR: ಅಪಘಾತಕ್ಕೀಡಾದವರ ತುರ್ತು ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಬಿಡುಗಡೆ, ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?

ಅಪಘಾತದ ವೇಳೆ ಗಾಯಾಳುಗಳ ತುರ್ತು ನೆರವಿಗೆ ದಾವಿಸಲು ಮೊಬಿಲಿಟಿ ಸರ್ವೀಸಸ್ ಪ್ಲಾಟ್ ಫಾರ್ಮ್ ಆಗಿರುವ ಹೈವೇ ಡೆಲೈಟ್, ರಕ್ಷಾ ಕ್ಯೂಆರ್ ಕೋಡ್ ಅನ್ನು ಬಿಡುಗಡೆ ಮಾಡಿದೆ. ಅಪಘಾತ ಸಂಭವಿಸಿದ ವೇಳೆ ವಾಹನಕ್ಕೆ ಅಂಟಿಸಿದ ಈ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಗಾಯಾಳುಗಳ ಕುಟುಂಬ, ಪೊಲೀಸರಿಗೆ ಹಾಗೂ ಆಸ್ಪತ್ರೆಗೆ ವರದಿ ಮಾಡಲು ಸಹಾಯಕವಾಗಿದೆ.

Raksha QR: ಅಪಘಾತಕ್ಕೀಡಾದವರ ತುರ್ತು ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಬಿಡುಗಡೆ, ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
ಅಪಘಾತಕ್ಕೀಡಾದವರ ತುರ್ತು ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಬಿಡುಗಡೆ (ಸಾಂದರ್ಭಿಕ ಚಿತ್ರ)Image Credit source: pexels
Follow us
Rakesh Nayak Manchi
|

Updated on:Sep 14, 2023 | 12:42 PM

ಬೆಂಗಳೂರು, ಸೆ.14: ಅಪಘಾತದ (Accident) ವೇಳೆ ಗಾಯಾಳುಗಳ ತುರ್ತು ನೆರವಿಗೆ ದಾವಿಸಲು ಮೊಬಿಲಿಟಿ ಸರ್ವೀಸಸ್ ಪ್ಲಾಟ್ ಫಾರ್ಮ್ ಆಗಿರುವ ಹೈವೇ ಡೆಲೈಟ್, ರಕ್ಷಾ ಕ್ಯೂಆರ್ (Raksha QR) ಕೋಡ್ ಅನ್ನು ಬಿಡುಗಡೆ ಮಾಡಿದೆ. ಅಪಘಾತ ಸಂಭವಿಸಿದ ವೇಳೆ ವಾಹನಕ್ಕೆ ಅಂಟಿಸಿದ ಈ ಕ್ಯೂಆರ್ ಕೋಡ್ ಅನ್ನು ಪ್ರತ್ಯಕ್ಷದರ್ಶಿಗಳು ಸ್ಕ್ಯಾನ್ ಮಾಡಿ ಗಾಯಾಳುಗಳ ಕುಟುಂಬದ ಸದಸ್ಯರಿಗೆ, ಪೊಲೀಸರಿಗೆ ಹಾಗೂ ಆಸ್ಪತ್ರೆಗೆ ವರದಿ ಮಾಡಲು ಸಹಾಯಕವಾಗಿದೆ.

ಅಪಘಾತ ವರದಿಯಾದ ನಂತರ, ಹೈವೇ ಡೆಲೈಟ್ ಬ್ಯಾಕ್ ಎಂಡ್ ಕಾಲ್ ಸೆಂಟರ್ ತಂಡವು ಸ್ಥಳದ ಮಾಹಿತಿ ಆಧರಿಸಿ ಸಮೀಪದ ಆಸ್ಪತ್ರೆ ಮತ್ತು ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತದೆ. ಸಂತ್ರಸ್ತೆಯ ವೈಯಕ್ತಿಕ ವಿವರಗಳು ಗೌಪ್ಯವಾಗಿರುತ್ತದೆ” ಎಂದು ಹೈವೇ ಡೆಲೈಟ್ ಸಂಸ್ಥಾಪಕ ರಾಜೇಶ್ ಘಟನಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಅಪಘಾತದಲ್ಲಿ ವೃದ್ಧೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮೊಮ್ಮಗನ ಕರಾಳ ಮುಖ ಬಯಲು

“ಅಪಘಾತದ ಸಂದರ್ಭದಲ್ಲಿ ಸಮಯೋಚಿತ ರಕ್ಷಣೆ ಹಾಗೂ ಸೂಕ್ತ ಚಿಕಿತ್ಸೆ ನಿರ್ಣಾಯಕವಾಗಿದೆ. ಭಾರತದಲ್ಲಿ ಅಪಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಸ್ತುತ ಸಂಖ್ಯೆ 1.5 ಲಕ್ಷವಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ದಾಖಲಿಸಿದರೆ ಅಪಘಾತಕ್ಕೊಳಗಾದವರು ಶೇ 50 ರಷ್ಟು ಜೀವಗಳನ್ನು ಉಳಿಸಬಹುದು” ಎಂದು ಅವರು ಹೇಳಿದರು.

ರಕ್ಷಾಕ್ಯೂಆರ್ ಕೋಡ್ ವಾಹನ ಮಾಲೀಕರಿಗೆ ರಕ್ತದ ಗುಂಪು, ವಾಹನ ವಿಮೆ, ವೈದ್ಯಕೀಯ ವಿಮೆ ಮತ್ತು ಕುಟುಂಬದ ತುರ್ತು ವಿವರಗಳು ಸೇರಿದಂತೆ ತಮ್ಮ ವೈಯಕ್ತಿಕ ಮಾಹಿತಿಯನ್ನು ಸೇರಿಸಲು ಅನುವು ಮಾಡಿಕೊಡುತ್ತದೆ. ಇದರ ಬೆಲೆ ದಿನಕ್ಕೆ 1 ರೂ. ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Thu, 14 September 23

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!