AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme Anniversary Sale: ಭಾರತದ ಮಾರುಕಟ್ಟೆಗೆ ರಿಯಲ್ ಮಿ ಕಾಲಿಟ್ಟು 5 ವರ್ಷ: ಸ್ಮಾರ್ಟ್​ಫೋನ್, ಲ್ಯಾಪ್​ಟಾಪ್​ಗಳ ಮೇಲೆ ಬಂಪರ್ ಆಫರ್ ಘೋಷಣೆ

ರಿಯಲ್ ಮಿ ಕಂಪನಿಯ ಸ್ಮಾರ್ಟ್​ಫೋನ್​ಗಳು, ಲ್ಯಾಪ್​ಟಾಲ್ ಸೇರಿದಂತೆ ಎಲ್ಲ ಪ್ರಾಡಕ್ಟ್​ಗಳು ಬಂಪರ್ ಡಿಸ್ಕೌಂಟ್​ನಲ್ಲಿ ಖರೀದಿಸಬಹುದು. ರಿಯಲ್ ಮಿಯ ಅಧಿಕೃತ ವೆಬ್​ಸೈಟ್, ಫ್ಲಿಪ್​ಕಾರ್ಟ್, ಅಮೆಜಾನ್ ಸೇರಿದಂತೆ ರಿಟೆಲ್ ಸ್ಟೋರ್​ಗಳಲ್ಲಿ ಈ ಆಫರ್​ಗಳು ಲಭ್ಯವಿರುತ್ತಿದೆ.

Realme Anniversary Sale: ಭಾರತದ ಮಾರುಕಟ್ಟೆಗೆ ರಿಯಲ್ ಮಿ ಕಾಲಿಟ್ಟು 5 ವರ್ಷ: ಸ್ಮಾರ್ಟ್​ಫೋನ್, ಲ್ಯಾಪ್​ಟಾಪ್​ಗಳ ಮೇಲೆ ಬಂಪರ್ ಆಫರ್ ಘೋಷಣೆ
realme anniversary sale
Vinay Bhat
|

Updated on: May 02, 2023 | 2:12 PM

Share

ಭಾರತದ ಮಾರುಕಟ್ಟೆಗೆ ಪ್ರಸಿದ್ಧ ರಿಯಲ್ ಮಿ(Realme) ಕಂಪನಿ ಕಾಲಿಟ್ಟು ಐದು ವರ್ಷಗಳಾಗಿವೆ. ಈ ಪ್ರಯುಕ್ತ ವಿಶೇಷ ಮೇಳವನ್ನು ಹಮ್ಮಿಕೊಂಡಿದೆ. ಮೇ 1 ರಿಂದ ಆರಂಭವಾಗಿರುವ ಈ ಸೇಲ್ ಮೇ 11ರ ವರೆಗೆ ನಡೆಯಲಿದೆ. ಇದರಲ್ಲಿ ರಿಯಲ್ ಮಿ ಕಂಪನಿಯ ಸ್ಮಾರ್ಟ್​ಫೋನ್​ಗಳು, ಲ್ಯಾಪ್​ಟಾಲ್ ಸೇರಿದಂತೆ ಎಲ್ಲ ರಿಯಲ್ ಮಿ ಪ್ರಾಡಕ್ಟ್​ಗಳು ಬಂಪರ್ ಡಿಸ್ಕೌಂಟ್​ನಲ್ಲಿ ಖರೀದಿಸಬಹುದು. ರಿಯಲ್ ಮಿಯ ಅಧಿಕೃತ ವೆಬ್​ಸೈಟ್, ಫ್ಲಿಪ್​ಕಾರ್ಟ್ (Flipkart), ಅಮೆಜಾನ್ (Amazon) ಸೇರಿದಂತೆ ರಿಟೆಲ್ ಸ್ಟೋರ್​ಗಳಲ್ಲಿ ಈ ಆಕರ್ಷಕ ಆಫರ್​ಗಳು ಲಭ್ಯವಿರುತ್ತಿದೆ. ಕೇವಲ ಬಜೆಟ್ ಬೆಲೆಯ ಫೋನ್​ಗಳಿಗೆ ಮಾತ್ರ ಆಫರ್ ನೀಡಿದೆ ರಿಯಲ್ ಮಿ ಜಿಟಿ 2 ಪ್ರೋ ದಂತಹ ದುಬಾರಿಯ ಬೆಲೆಯ ಸ್ಮಾರ್ಟ್​ಫೋನ್ ಮೇಲೂ ಬಂಪರ್ ಡಿಸ್ಕೌಂಟ್ ನೀಡಿದೆ.

ರಿಯಲ್ ಮಿ ಜಿಟಿ 2 ಪ್ರೋ ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯ ಮೂಲಬೆಲೆ 57,999 ರೂ. ಆದರೀಗ ಈ ಫೋನ್ ಮೇಲೆ ಫ್ಲಿಪ್​ಕಾರ್ಟ್​ನಲ್ಲಿ ಶೇ. 37 ರಷ್ಟು ರಿಯಾಯಿತಿ ಘೋಷಿಸಲಾಗಿದದೆ. 22,000 ಕಡಿತಗೊಂಡು ಕೇವಲ 35,999 ರೂ. ಗೆ ಸೇಲ್ ಆಗುತ್ತಿದೆ. ಇದರೊಂದಿಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಒಡೆದು ಹೋಗಿದ್ದರೆ ಸರಿಪಡಿಸಲು ಈ ಟ್ರಿಕ್ ಫಾಲೋ ಮಾಡಿ

ಇದನ್ನೂ ಓದಿ
Image
JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ
Image
Tech Tips: ನೀವು ರಾಂಗ್ ನಂಬರ್​ಗೆ ರೀಚಾರ್ಜ್ ಮಾಡಿದ್ದೀರಾ?: ಹಣ ವಾಪಸ್ ಪಡೆಯಲು ಇಲ್ಲಿದೆ ನೋಡಿ ಟ್ರಿಕ್
Image
TRAI Spam Filter: ಟ್ರಾಯ್ ಹೊಸ ನಿಯಮ ಇಂದಿನಿಂದ ಜಾರಿ: ಸ್ಪ್ಯಾಮ್ ಕರೆ, ಎಸ್​ಎಮ್​ಎಸ್​ ಬ್ಯಾನ್
Image
ಪಾಕಿಸ್ತಾನದಲ್ಲಿರುವ ತಮ್ಮ ನಾಯಕರಿಗೆ ರಹಸ್ಯ ಸಂದೇಶ ಕಳುಹಿಸಲು ಉಗ್ರರು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್​ಗಳನ್ನು ನಿಷೇಧಿಸಿದ ಭಾರತ ಸರ್ಕಾರ

ಇದು 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಟೆಕ್ನಾಲಜಿಯನ್ನು ಹೊಂದಿರುವ ಕ್ಯಾಮೆರಾ ಸೆಟ್ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌, 32 ಮೆಗಾಪಿಕ್ಸೆಲ್​ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ.

ಇನ್ನು 12 ನಿಮಿಷಗಳಲ್ಲಿ ಶೇ. 50 ರಷ್ಟು ಚಾರ್ಜ್ ಆಗುವ ರಿಯಲ್‌ ಮಿ GT ನಿಯೋ 3T ಸ್ಮಾರ್ಟ್​ಫೋನ್ ಕೂಡ ಆಕರ್ಷಕ ಆಫರ್​ನಲ್ಲಿ ಲಭ್ಯವಿದೆ. ಇದರ 8GB RAM + 256GB ಸ್ಟೋರೇಜ್ ಆಯ್ಕೆಯ ಮೂಲಕ ಬೆಲೆ 38,999 ರೂ. ಆದರೀಗ ಫ್ಲಿಪ್​ಕಾರ್ಟ್​ನಲ್ಲಿ ಶೇ. 43 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಮೂಲಕ 17,000 ರೂ. ರಿಯಾಯಿತಿ ಪಡೆದುಕೊಂಡು ಈ ಫೋನನ್ನು 21,999 ರೂ. ಗೆ ನಿಮ್ಮದಾಗಿಸಬಹುದು.

ಈ ಫೋನ್ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ 119 ಡಿಗ್ರಿ ಫೀಲ್ಡ್–ಆಫ್–ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ರಿಯಲ್‌ ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ