AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi Note 11T 5G: ಅತ್ಯಂತ ಕಡಿಮೆ ಬೆಲೆಯ 5G ಸ್ಮಾರ್ಟ್​ಫೋನ್ ರೆಡ್ಮಿ ನೋಟ್ 11T ಇಂದು ಫಸ್ಟ್ ಸೇಲ್: ಖರೀದಿಸಬಹುದೇ?

Redmi Note 11T 5G First sale: ರೆಡ್ಮಿ ನೋಟ್ 11T 5G ಸ್ಮಾರ್ಟ್​ಫೋನ್ ಡಿಸೈನ್ ಥೇಟ್ ನೋಟ್ 11 ಮಾದರಿಯಲ್ಲೇ ಇದೆ. ಈ ಸ್ಮಾರ್ಟ್​ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಮೊದಲ ಸೇಲ್ ಕಾಣುತ್ತಿದೆ. ಅಮೆಜಾನ್, ಎಂಐ.ಕಾಮ್ ಎಂಐ ಹೋಮ್ ಮತ್ತು ಆಯ್ದ ರಿಟೇಲ್ ಸ್ಟೋರ್​ಗಳಲ್ಲಿ ಇದು ಖರೀದಿಗೆ ಸಿಗುತ್ತಿದೆ.

Redmi Note 11T 5G: ಅತ್ಯಂತ ಕಡಿಮೆ ಬೆಲೆಯ 5G ಸ್ಮಾರ್ಟ್​ಫೋನ್ ರೆಡ್ಮಿ ನೋಟ್ 11T ಇಂದು ಫಸ್ಟ್ ಸೇಲ್: ಖರೀದಿಸಬಹುದೇ?
Redmi Note 11T 5G
TV9 Web
| Updated By: Vinay Bhat|

Updated on: Dec 07, 2021 | 1:39 PM

Share

ಮೊಬೈಲ್ (Mobile) ಪ್ರಿಯರು ಕಳೆದೊಂದು ತಿಂಗಳುಗಳಿಂದ ಕಾದು ಕುಳಿತಿದ್ದ ಸ್ಮಾರ್ಟ್​ಫೋನ್ (Smartphone) ಇದೀಗ ಗ್ರಾಹಕರ ಕೈಸೇರಲು ಶುರುವಾಗಿದೆ. ಶವೋಮಿ ಕಂಪೆನಿಯ ಬಹುನಿರೀಕ್ಷಿತ ರೆಡ್ಮಿ ನೋಟ್ 11ಟಿ 5ಜಿ (Redmi Note 11T 5G) ಸ್ಮಾರ್ಟ್​ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಮೊದಲ ಸೇಲ್ ಕಾಣುತ್ತಿದೆ. ಇ ಕಾಮರ್ಸ್ ತಾಣವಾದ ಅಮೆಜಾನ್ (Amazon), ಎಂಐ.ಕಾಮ್ (Mi.com), ಎಂಐ ಹೋಮ್ (Mi Home) ಮತ್ತು ಆಯ್ದ ರಿಟೇಲ್ ಸ್ಟೋರ್​ಗಳಲ್ಲಿ ಇದು ಖರೀದಿಗೆ ಸಿಗುತ್ತಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್ ಬಲವನ್ನು ಈ ಸ್ಮಾರ್ಟ್​ಫೋನ್ ಪಡೆದುಕೊಂಡಿದ್ದು, ಆಕರ್ಷಕ ಕ್ಯಾಮೆರಾ (Camera) ಬೊಂಬಾಟ್ ಬ್ಯಾಟರಿ ಲೈಫ್, ಕೇವಲ ಒಂದೇ ಗಂಟೆಯಲ್ಲಿ 0-100% ಫುಲ್ ಚಾರ್ಜ್ ಸೇರಿದಂತೆ ಬಂಪರ್ ಫೀಚರ್ಸ್​ನಿಂದ ಕೂಡಿದೆ.

ಬೆಲೆ ಎಷ್ಟು?:

ರೆಡ್ಮಿ ನೋಟ್ 11T 5G ಸ್ಮಾರ್ಟ್​ಫೋನ್ ಡಿಸೈನ್ ಥೇಟ್ ನೋಟ್ 11 ಮಾದರಿಯಲ್ಲೇ ಇದೆ. ಇದು ರೆಡ್ಮಿ ನೋಟ್ 10T ಬಳಿಕ ಬಿಡುಗಡೆ ಆಗಿರುವ ಎರಡನೇ 5G ಸ್ಮಾರ್ಟ್​ಫೋನ್ ಎಂಬುದು ವಿಶೇಷ. 90Hzನ ಡಿಸ್​ ಪ್ಲೇ ಹೊಂದಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕಾಗಿ 16,999 ರೂ.ಬೆಲೆ ಹೊಂದಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರವು 17,999 ರೂ. ಹಾಗೂ ಟಾಪ್-ಎಂಡ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999 ರೂ. ಆಗಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್ ದಾರರಿಗೆ ಈ ಸ್ಮಾರ್ಟ್​ಫೋನ್ 1,000 ರೂ. ಡಿಸ್ಕೌಂಟ್​ನಲ್ಲಿ ಸಿಗಲಿದೆ. ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿರುವ ಸ್ಮಾರ್ಟ್​ಫೋನ್ ಇದಾಗಿದೆ. ಹೀಗಾಗಿ ನೀವು 5ಜಿ ಪ್ರಿಯರಾಗಿದ್ದರೆ, ಇದನ್ನು ಖರೀದಿಸಬಹುದು.

ಏನು ವಿಶೇಷತೆ?:

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದರ ಮಧ್ಯದಲ್ಲಿ ಹೋಲ್ ಪಂಚ್ ಕಟ್-ಔಟ್ ಹೊಂದಿರುವ ಅಡಾಪ್ಟಿವ್ ಸಿಂಕ್ ಡಿಸ್ಪ್ಲೇ ಇದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ Mali-G57 MC2 GPU ಹೊಂದಿದೆ. ಇದು Realme ಮತ್ತು Vivo ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಡೈನಾಮಿಕ್ RAM ವಿಸ್ತರಣೆಯನ್ನು ಹೋಲುತ್ತದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್‌ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದು f/2.45 ಲೆನ್ಸ್ ಪಡೆದುಕೊಂಡಿದೆ.

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR), USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ವಾಯ್ಸ್‌ ಅಸಿಸ್ಟೆಂಟ್‌ ಅನ್ನು ಸಕ್ರಿಯಗೊಳಿಸಲು ಮತ್ತು ಕ್ಯಾಮೆರಾವನ್ನು ಪ್ರಾರಂಭಿಸಲು ಡಬಲ್-ಟ್ಯಾಪ್ ಶಾರ್ಟ್‌ಕಟ್‌ಗಳನ್ನು ಬೆಂಬಲಿಸುವ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಬದಲಾವಣೆ: ನೀವು ಗಮನಿಸಿದ್ರಾ?

(Redmi Note 11T 5G sale started in India for the very first time on Amazon Mi Home Here is the price and offer)

ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ