AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reliance Jio: ಶಾಕಿಂಗ್: 426 ಮಿಲಿಯನ್ ಗ್ರಾಹಕರಿಗೆ ನೋಟಿಸ್ ಕಳುಹಿಸಿದ ಜಿಯೋ: ನಿಮ್ಮ ಇನ್​ಬಾಕ್ಸ್ ಚೆಕ್ ಮಾಡಿ

e-KYC Scams: ರಿಲಯನ್ಸ್ ಜಿಯೋ ಕೂಡ ತನ್ನ ಗ್ರಾಹಕರಿಗೆ ಇ-ಕೆವೈಸಿ ಹಗರಣಗಳ ಬಗ್ಗೆ ಎಚ್ಚರಿಕೆ ನೀಡಿದೆ. ತನ್ನ 426 ಮಿಲಿಯನ್ ಗ್ರಾಹಕರಿಗೆ ನೋಟಿಸ್ ನೀಡಿದೆ. ಸೈಬರ್ ವಂಚನೆ ತಪ್ಪಿಸಲು ಏನು ಮಾಡಬಾರದು ಅನ್ನೋದರ ಬಗ್ಗೆ ಜಿಯೋ ಬಳಕೆದಾರರಿಗೆ ಮಾಹಿತಿ ನೀಡಿದೆ.

Reliance Jio: ಶಾಕಿಂಗ್: 426 ಮಿಲಿಯನ್ ಗ್ರಾಹಕರಿಗೆ ನೋಟಿಸ್ ಕಳುಹಿಸಿದ ಜಿಯೋ: ನಿಮ್ಮ ಇನ್​ಬಾಕ್ಸ್ ಚೆಕ್ ಮಾಡಿ
Reliance Jio
TV9 Web
| Edited By: |

Updated on: Dec 30, 2021 | 11:19 AM

Share

ಇಂದಿನ ಡಿಜಿಟಲ್ ಯುಗದಲ್ಲಿ ಎಲ್ಲವೂ ಆನ್ ಲೈನ್​ನಲ್ಲಿ (Online) ನಡೆಯುತ್ತಿರುವುದು ಹ್ಯಾಕ್​ರ್​ ​ಗಳಿಗೆ (Hack) ಅತ್ಯಂತ ಸುಲಭವಾಗಿದೆ. ಒಂದಲ್ಲ ಒಂದು ರೀತಿಯಲ್ಲಿ ಹ್ಯಾಕರ್ ಗಳು ಬ್ಯಾಂಕ್, ಸೋಶಿಯಲ್ ಮೀಡಿಯಾ (Social Media) ಖಾತೆಯನ್ನು ಹ್ಯಾಕ್ ಮಾಡುತ್ತಾರೆ. ಹಾಗಂತ ನಿಮ್ಮ ಒಟಿಪಿ (OTP) ಸೇಫ್ ಎಂದು ಕೊಂಡರೆ ಅದು ತಪ್ಪು. ಈಗ ನಿಮ್ಮ ಎಸ್​ಎಂಎಸ್, ಒಟಿಪಿ ಕೂಡ ಸೇಫ್ ಅಲ್ಲ. ಎಷ್ಟೇ ಎಚ್ಚರಿಕೆ ನೀಡಿದರೂ ಜನರು ಮತ್ತದೆ ತಪ್ಪು ಮಾಡುತ್ತಿದ್ದಾರೆ. ಒಂದು ವರದಿಯ ಪ್ರಕಾರ, ಹ್ಯಾಕರ್​ಗಳು ಈಗ ನಿಮ್ಮ ವೈಯಕ್ತಿಕ ಡೇಟಾವನ್ನು ಕದಿಯಲು ಹೊಸ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಮತ್ತು ಅವರು ನಿಮ್ಮ ಸ್ಮಾರ್ಟ್​ಫೋನ್​ಗಳಿಂದ (Smartphone) ಡೇಟಾವನ್ನು ದೋಚಲು ಎಸ್​ಎಂಎಸ್ ಅನ್ನು ಬಳಸುತ್ತಿದ್ದಾರೆ. ಇದೇ ಕಾರಣಕ್ಕೆ ಎಲ್ಲ ಟೆಲಿಕಾಂ ಕಂಪನಿಗಳು, ಬ್ಯಾಂಕ್​ಗಳು ತಮ್ಮ ಗ್ರಾಹಕರಿಗೆ ಎಚ್ಚರಿಕೆ ಸಂದೇಶಗಳನ್ನು ರವಾನಿಸುತ್ತಿದೆ.

ಸದ್ಯ ರಿಲಯನ್ಸ್ ಜಿಯೋ ಕೂಡ ತನ್ನ ಗ್ರಾಹಕರಿಗೆ ಇ-ಕೆವೈಸಿ ಹಗರಣಗಳ ಬಗ್ಗೆ ಎಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ಸೈಬರ್ ವಂಚನೆಯ ಘಟನೆಗಳ ವಿರುದ್ಧ ಜಿಯೋ ತನ್ನ ಗ್ರಾಹಕರಿಗೆ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದೆ. ಅಮಾಯಕ ಗ್ರಾಹಕರನ್ನು ವಂಚಿಸಲು ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಕಂಪನಿ ತಿಳಿಸಿದೆ. ಈ ವರ್ಷದ ಆರಂಭದಲ್ಲಿ ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್‌ನ ಸಿಇಒಗಳು ತಮ್ಮ ಗ್ರಾಹಕರಿಗೆ ಇದೇ ರೀತಿಯ ಎಚ್ಚರಿಕೆ ಸೂಚನೆಗಳನ್ನು ನೀಡಿದ್ದರು. ಇದೀಗ ರಿಲಯನ್ಸ್ ಜಿಯೋ ಕೂಡ ತನ್ನ 426 ಮಿಲಿಯನ್ ಗ್ರಾಹಕರಿಗೆ ನೋಟಿಸ್ ನೀಡಿದೆ. ಸೈಬರ್ ವಂಚನೆ ತಪ್ಪಿಸಲು ಏನು ಮಾಡಬಾರದು ಅನ್ನೋದರ ಬಗ್ಗೆ ಜಿಯೋ ಬಳಕೆದಾರರಿಗೆ ಮಾಹಿತಿ ನೀಡಿದೆ.

ಜಿಯೋ ತನ್ನ ಪ್ರಕಟನೆಯಲ್ಲಿ ಗ್ರಾಹಕರು ತಮ್ಮ ಕೆವೈಸಿ ಅಥವಾ ಆಧಾರ್ (KYC/Aadhaar) ವಿವರಗಳನ್ನು ನವೀಕರಿಸಲು ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡದಂತೆ ಎಚ್ಚರಿಕೆ ನೀಡಿದೆ. ಇಂತಹ ಚಟುವಟಿಕೆಗಳಿಗೆ ಯಾವುದೇ ಥರ್ಡ್ ಪಾರ್ಟಿ ಆ್ಯಪ್ ಅನ್ನು ಡೌನ್‌ಲೋಡ್ ಮಾಡುವಂತೆ ಜಿಯೋ ಎಂದಿಗೂ ನಿಮ್ಮನ್ನು ಕೇಳುವುದಿಲ್ಲವೆಂದು ತಿಳಿಸಿದೆ.

ದಯವಿಟ್ಟು ಇಂತಹ ಎಸ್​ಎಂಎಸ್ ಅಥವಾ ಕರೆಗಳು ಹಣಕಾಸಿನ ನಷ್ಟಕ್ಕೆ ಕಾರಣವಾಗಬಹುದು. ರಿಮೋಟ್ ಆಕ್ಸೆಸ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಡಿ, ಏಕೆಂದರೆ ವಂಚಕರು ನಿಮ್ಮ ಎಲ್ಲಾ ಫೋನ್ ಮಾಹಿತಿಯನ್ನು ಕದ್ದು ವಂಚನೆ ಎಸಗುತ್ತಾರೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಗಳಿಗೆ ಸಂಬಂಧಿಸಿದ ಕೆಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಲ್ಲಿ ವಂಚಕರು ಜಿಯೋ ಪ್ರತಿನಿಧಿಗಳಂತೆ ವರ್ತಿಸಿ ಮುಖ್ಯವಾಗಿ ಬಾಕಿ ಉಳಿದಿರುವ ಇ-ಕೆವೈಸಿ (eKYC-Know Yourself) ಗ್ರಾಹಕರ ಆಧಾರ್, ಬ್ಯಾಂಕ್ ಖಾತೆಗಳು ಇತ್ಯಾದಿ ವಿವರಗಳ ನೆಪದಲ್ಲಿ OTP ಇತ್ಯಾದಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಒತ್ತಾಯಿಸುತ್ತಾರೆ. ಮಾಹಿತಿ ಪಡೆದ ಬಳಿಕ ಅವರು ನಿಮಗೆ ಗೊತ್ತಾಗದಂತೆ ವಂಚಿಸುತ್ತಾರೆ. ಇದರಿಂದ ಇಂಥಹ ಯಾವುದೇ ಆಮೀಷಕ್ಕೆ ಒಳಗಾಗಬೇಡಿ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದೆ.

ಇ-ಕೆವೈಸಿ ಪೂರ್ಣಗೊಳಿಸಲು ಕೇಳುವ ಯಾವುದೇ ಎಸ್‌ಎಂಎಸ್/ಕರೆಯನ್ನು ನಂಬಬೇಡಿ ಅಥವಾ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ನಿಮ್ಮ ಮೊಬೈಲ್ ಸೇವೆಗಳನ್ನು ಅಮಾನತುಗೊಳಿಸಲಾಗುವುದು ಎನ್ನುವ ಮೋಸದ ಕರೆಗಳಿಗೆ ಬಲಿಯಾಗಬೇಡಿ ಎಂದು ಜಿಯೋ ಹೇಳಿದೆ. ಗ್ರಾಹಕರು ಜಿಯೋ ಪ್ರತಿನಿಧಿ ಎಂದು ಹೇಳಿಕೊಂಡು ಕರೆ ಮಾಡುವವರು ಕಳುಹಿಸುವ ಸಂದೇಶಗಳಲ್ಲಿ ಸ್ವೀಕರಿಸಿದ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ. ಇದು ಕೂಡ ಒಂದು ರೀತಿಯ ಸೈಬರ್ ಕ್ರೈಮ್. ಹೀಗಾಗಿ ಗ್ರಾಹಕರು ಯಾವುದೇ ಮೋಸದ ಕರೆಗಳಿಗೆ ಬಲಿಯಾಗಬಾರದು. ಯಾವುದೇ ಕಾರಣಕ್ಕೂ ಮುಖ್ಯವಾಗಿರುವ ಮಾಹಿತಿಯನ್ನು ನೀಡಬಾರದು ಎಂದು ಜಿಯೋ ತನ್ನ ಗ್ರಾಹಕರಿಗೆ ತಿಳಿಸಿದೆ.

Android 13: ನಿಮ್ಮ Android ಫೋನ್ ಸಂಪೂರ್ಣವಾಗಿ ಬದಲಾಗಲಿದೆ..!

(Reliance Jio has warned its customers about e-KYC scams sends notice to 426 million customers)

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು