AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JioPhone Next: ಅತೀ ಕಡಿಮೆ ಬೆಲೆಗೆ ಸೂಪರ್ ಸ್ಮಾರ್ಟ್​ಫೋನ್: ಜಿಯೋ ನೆಕ್ಸ್ಟ್​ ಬಿಡುಗಡೆಗೆ ರೆಡಿ

JioPhone Next: ಗೂಗಲ್ ಸಹಯೋಗದಲ್ಲಿ ತಯಾರಿಸಿದ ಈ ಸ್ಮಾರ್ಟ್ ಫೋನ್ ಆಂಡ್ರಾಯ್ಡ್ 11 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸಲಿದೆ. ಜಿಯೋ ಈ ಸ್ಮಾರ್ಟ್‌ಫೋನ್‌ನ ಯಾವುದೇ ವಿಶೇಷತೆಗಳನ್ನು ಇನ್ನೂ ಕೂಡ ಬಹಿರಂಗಪಡಿಸಿಲ್ಲ.

JioPhone Next: ಅತೀ ಕಡಿಮೆ ಬೆಲೆಗೆ ಸೂಪರ್ ಸ್ಮಾರ್ಟ್​ಫೋನ್: ಜಿಯೋ ನೆಕ್ಸ್ಟ್​ ಬಿಡುಗಡೆಗೆ ರೆಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 26, 2021 | 7:29 PM

Share

ಈ ಹಿಂದೆ ರಿಲಯನ್ಸ್ (Reliance) ತಿಳಿಸಿದಂತೆ ಅತೀ ಕಡಿಮೆ ಬೆಲೆಗೆ ಅತ್ಯುತ್ತಮ ಸ್ಮಾರ್ಟ್​ಫೋನ್ (Smartphone) ಬಿಡುಗಡೆ ಮಾಡಲು ಜಿಯೋ (Jio) ಕಂಪೆನಿ ಮುಂದಾಗಿದೆ. ಅದರಂತೆ ಇದೀಗ ಅದರ ಮೊದಲ ಆವೃತ್ತಿ ಜಿಯೋ ಫೋನ್ ನೆಕ್ಸ್ಟ್ (JioPhone Next)​​ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಅದರಂತೆ ಮುಂದಿನ ತಿಂಗಳಲು ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ಜಿಯೋ ಸಂಚಲನ ಸೃಷ್ಟಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ET ಟೆಲಿಕಾಂ ವರದಿಯ ಪ್ರಕಾರ, ರಿಲಯನ್ಸ್ ಜಿಯೋ (Reliance Jio) ಮೊಬೈಲ್ ಫೋನ್ ಬಿಡಿಭಾಗಗಳ ತಯಾರಿಕಾ ಕಂಪೆನಿ UTL Neolync 5 ಮಿಲಿಯನ್ ಯೂನಿಟ್​ಗಾಗಿ ಆರ್ಡರ್ ನೀಡಿದೆ ಎಂದು ತಿಳಿಸಿದೆ. ಪ್ರಸ್ತುತ ಮಾಹಿತಿಯಂತೆ ಜನಪ್ರಿಯ ಜಿಯೋಫೋನ್ ನೆಕ್ಸ್ಟ್ ಸೆಪ್ಟೆಂಬರ್ 10 ರಂದು ಬಿಡುಗಡೆ ಆಗಲಿದ್ದು, ಪ್ರೀ ಬುಕ್ಕಿಂಗ್ ಅವಕಾಶ ನೀಡುವ ಸಾಧ್ಯತೆಯಿದೆ.

ಗೂಗಲ್ ಸಹಯೋಗದಲ್ಲಿ ತಯಾರಿಸಿದ ಈ ಸ್ಮಾರ್ಟ್ ಫೋನ್ ಆಂಡ್ರಾಯ್ಡ್ 11 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸಲಿದೆ. ಜಿಯೋ ಈ ಸ್ಮಾರ್ಟ್‌ಫೋನ್‌ನ ಯಾವುದೇ ವಿಶೇಷತೆಗಳನ್ನು ಇನ್ನೂ ಕೂಡ ಬಹಿರಂಗಪಡಿಸಿಲ್ಲ. ಇದಾಗ್ಯೂ ಒಂದಷ್ಟು ಮಾಹಿತಿಗಳು ಲೀಕ್ ಆಗಿದೆ. ಸೋರಿಕೆಯಾದ ಮಾಹಿತಿ ಪ್ರಕಾರ ಜಿಯೋಫೋನ್ ನೆಕ್ಸ್ಟ್ 2 ಜಿಬಿ ಮತ್ತು 3 ಜಿಬಿ RAM ರೂಪಾಂತರಗಳಲ್ಲಿ ಲಭ್ಯವಿರಲಿದೆ. ಹಾಗೆಯೇ ಇದರಲ್ಲಿ ಇದರಲ್ಲಿ 16 ಜಿಬಿ ಮತ್ತು 32 ಜಿಬಿ ಇನ್​ಬಿಲ್ಟ್ ಸ್ಟೊರೇಜ್ ಆಯ್ಕೆಗಳಿರಲಿದೆ ಎಂದು ತಿಳಿದು ಬಂದಿದೆ. ಇದಲ್ಲದೇ, ಜಿಯೋಫೋನ್ ನೆಕ್ಸ್ಟ್ 5.5-ಇಂಚಿನ ಡಿಸ್ಪ್ಲೇ ಮತ್ತು 2500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾಧ್ಯತೆಯಿದೆ. ಇನ್ನು ಇದರಲ್ಲಿ 13 ಮೆಗಾಪಿಕ್ಸೆಲ್ ಮತ್ತು 8 ಮೆಗಾಪಿಕ್ಸೆಲ್​ನ ಎರಡು ಕ್ಯಾಮೆರಾಗಳನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಜಿಯೋಫೋನ್ ವಿಶೇಷತೆಗಳು ಮತ್ತು ವೈಶಿಷ್ಟ್ಯಗಳು: ಟೆಲಿಕಾಂ ದೈತ್ಯ ಜಿಯೋದ ಮುಂಬರುವ ಕೈಗೆಟುಕುವ ಬೆಲೆಯ ಸ್ಮಾರ್ಟ್ ಫೋನ್ “ಜಿಯೋಫೋನ್ ನೆಕ್ಸ್ಟ್” ಬಿಡುಗಡೆಗೆ ಕೆಲವು ವಾರಗಳ ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೆ ಮುನ್ನ ಲೀಕ್ ಆಗಿರುವ ಮಾಹಿತಿ ಪ್ರಕಾರ, ಜಿಯೋಫೋನ್ ನೆಕ್ಸ್ಟ್ ಸ್ನಾಪ್‌ಡ್ರಾಗನ್ 215 ಚಿಪ್‌ಸೆಟ್‌ನಿಂದ ನಿಯಂತ್ರಿಸಲ್ಪಡುತ್ತದೆ . ಹಾಗೆಯೇ 2 ಜಿಬಿ/3 ಜಿಬಿ RAM ಮತ್ತು 16 ಜಿಬಿ/32 ಜಿಬಿ ಸ್ಟೊರೇಜ್ ಇರಲಿದೆ. ಅದೇ ರೀತಿ ಕ್ಯಾಮೆರಾ ಮಾಡ್ಯೂಲ್ ಮತ್ತು ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಹೊಂದಿರಲಿದೆ. ಇದಲ್ಲದೇ, ಸ್ಮಾರ್ಟ್​ಫೋನ್ 3.5 ಎಂಎಂ ಆಡಿಯೋ ಜಾಕ್ ಅನ್ನು ಸಹ ಇದರಲ್ಲಿರಲಿದೆ.

ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 11 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರ ಜೊತೆಗೆ, 720 × 1,440 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿರುವ ಎಚ್‌ಡಿ+ ಡಿಸ್‌ಪ್ಲೇಯನ್ನು ಸ್ಮಾರ್ಟ್ ಫೋನ್ ಒಳಗೊಂಡಿರುತ್ತದೆ. ಕ್ವಾಡ್-ಕೋರ್ ಸ್ನಾಪ್‌ಡ್ರಾಗನ್ 215 SoC 1.3GHz ಪ್ರೊಸೆಸರ್ ಇದರಲ್ಲಿರಲಿದೆ ಎಂದು ಸೋರಿಕೆಯಾದ ಮಾಹಿತಿಗಳು ಸೂಚಿಸಿವೆ. ಇನ್ನು ಈ ಸ್ಮಾರ್ಟ್​ಫೋನ್ ಕೇವಲ 3,499 ರೂ.ಗೆ ಜಿಯೋ ಕಂಪೆನಿ ಮಾರಾಟ ಮಾಡಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: IPL 2021: ಮಾಜಿ RCB ಆಟಗಾರ, ವಿಶ್ವದ ನಂಬರ್ 1 ಬೌಲರ್ ರಾಜಸ್ಥಾನ್ ರಾಯಲ್ಸ್ ಪಾಲು

ಇದನ್ನೂ ಓದಿ: George Garton: RCB ತಂಡಕ್ಕೆ ಎಂಟ್ರಿ ಕೊಟ್ಟಿರುವ ಜಾರ್ಜ್ ಗಾರ್ಟನ್ ಯಾರು..?

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Reliance Jio Might Place 5 Million Units of JioPhone Next)

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು