AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಬಿಡುಗಡೆ: ಬೆಲೆ ಕೇವಲ 14,999 ರೂ.

Samsung Galaxy A05s Launched in India: ಸ್ಯಾಮ್‌ಸಂಗ್ ಇದೀಗ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ಅನಾವರಣ ಮಾಡಿದೆ. ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ.

ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಬಿಡುಗಡೆ: ಬೆಲೆ ಕೇವಲ 14,999 ರೂ.
Samsung Galaxy A05s
Follow us
Vinay Bhat
|

Updated on:Oct 19, 2023 | 12:56 PM

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಹೊಸ ಸ್ಮಾರ್ಟ್​ಫೋನ್​ನೊಂದಿಗೆ ಭಾರತಕ್ಕೆ ಲಗ್ಗೆಯಿಟ್ಟಿದೆ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್‌ಸಂಗ್ ಇದೀಗ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ತನ್ನ A-ಸರಣಿಯ ಅಡಿಯಲ್ಲಿ ಅನಾವರಣ ಮಾಡಿದೆ. ಕಡಿಮೆ ಬೆಲೆ ಆಗಿದ್ದರೂ ಈ ಫೋನ್​ನಲ್ಲಿ ಬಲಿಷ್ಠವಾದ ಕ್ವಾಲ್ಕಂ ಸ್ನಾಪ್​ಡ್ರಾಗನ್ ಪ್ರೊಸೆಸರ್ ಇದೆ. 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ನೀಡಲಾಗಿದೆ. ಬ್ಯಾಟರಿ ಕೂಡ ದೊಡ್ಡದಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಬೆಲೆ, ಲಭ್ಯತೆ:

ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಪಟ್ಟಿಯ ಪ್ರಕಾರ, SBI ಬ್ಯಾಂಕ್ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೇಲೆ ಈ ಫೋನಿನಗೆ 1,000 ತ್ವರಿತ ರಿಯಾಯಿತಿ ಇದೆ.

iPhone 15 Discounts: ಕೊನೆಗೂ ಹೊಸ ಐಫೋನ್ 15 ಫೋನಿಗೆ ಬಂತು ಡಿಸ್ಕೌಂಟ್: ಆ್ಯಪಲ್​ನಿಂದ ದೀಪಾವಳಿ ಸೇಲ್ ಘೋಷಣೆ

ಇದನ್ನೂ ಓದಿ
Image
ಬಲಿಷ್ಠ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ: ಹಾನರ್​ನಿಂದ ಬಂತು ಅದ್ಭುತ ಫೋನ್
Image
ಇಂದು ಒನ್​ಪ್ಲಸ್​ನ ಮೊಟ್ಟ ಮೊದಲ ಮಡಚುವ ಫೋನ್ ರಿಲೀಸ್: ಬೆಲೆ ಎಷ್ಟು ಗೊತ್ತೇ?
Image
ಮಾಲ್ವೇರ್ ದಾಳಿಯಿಂದ ಡಿಜಿಟಲ್ ಸಾಧನಗಳ ರಕ್ಷಣೆಗೆ ಸಿಎಸ್​ಕೆ ಸ್ಥಾಪನೆ
Image
ಭಾರತದಲ್ಲಿ ಕೇವಲ 6,499 ರೂ. ಗೆ ಬಿಡುಗಡೆ ಆಗಿದೆ ಹೊಸ ಫೋನ್: ಯಾವುದು?

ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೀಚರ್ಸ್:

ಡ್ಯುಯಲ್-ಸಿಮ್ (ನ್ಯಾನೋ) ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್ ಆಗುತ್ತದೆ. 6.7-ಇಂಚಿನ ಪೂರ್ಣ-HD+ (1,080×2,4000 ಪಿಕ್ಸೆಲ್‌ಗಳು) PLS LCD ಡಿಸ್​ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ನಿಂದ ಚಾಲಿತವಾಗಿದೆ ಮತ್ತು 6GB RAM ಅನ್ನು ಹೊಂದಿದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು f/1.8 ದ್ಯುತಿರಂಧ್ರದೊಂದಿಗೆ ನೀಡಲಾಗಿದೆ. 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು f/2.4 ದ್ಯುತಿರಂಧ್ರದೊಂದಿಗೆ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ f/2.4 ಅಪರ್ಚರ್‌ನಲ್ಲಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ f/2.0 ದ್ಯುತಿರಂಧ್ರದೊಂದಿಗೆ 13-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಸ್ಮಾರ್ಟ್​ಫೋನ್ 25W ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.1, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಹ್ಯಾಂಡ್ಸೆಟ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿವೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 19 October 23

ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ